Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ದೊಡ್ಡದಾಗಿ ಹಾಕಲಾಗಿದೆ ಚಿರಂಜೀವಿ ಫೋಟೋ

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ಚಿರಂಜೀವಿ ಅವರ ‘ಆರಾಧನಾ’ ಚಿತ್ರದ ಐಕಾನಿಕ್ ಪೋಸ್ಟರ್ ಇದೆ. ಸಂದೀಪ್ ರೆಡ್ಡಿ ಚಿರಂಜೀವಿ ಅವರ ದೊಡ್ಡ ಅಭಿಮಾನಿ ಎಂದು ತಿಳಿದುಬಂದಿದೆ. ಚಿರಂಜೀವಿನ ಅವರು ಅನೇಕ ಸಂದರ್ಭಗಳಲ್ಲಿ ಹೊಗಳಿದ್ದಾರೆ. ಈ ಪೋಸ್ಟರ್ ಅವರ ಅಭಿಮಾನವನ್ನು ಪ್ರತಿಬಿಂಬಿಸುತ್ತದೆ ಎಂಬುದನ್ನು ಇಲ್ಲಿ ಗಮನಿಸಬೇಕು.

ಖ್ಯಾತ ನಿರ್ದೇಶಕನ ಕಚೇರಿಯಲ್ಲಿ ದೊಡ್ಡದಾಗಿ ಹಾಕಲಾಗಿದೆ ಚಿರಂಜೀವಿ ಫೋಟೋ
ಚಿರಂಜೀವಿ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 06, 2025 | 11:38 AM

ಟಾಲಿವುಡ್​ನ ಖ್ಯಾತ ನಟರಲ್ಲಿ ಚಿರಂಜೀವಿ ಅವರಿಗೂ ಸ್ಥಾನ ಇದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದವರು. ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದಾರೆ. ಹೊಸಬರದಿಂದ ಹಿಡಿದು ಎಲ್ಲಾ ರೀತಿಯ ನಿರ್ದೇಶಕರು ಹಾಗೂ ಕಲಾವಿದರನ್ನು ಅವರು ಬೆಂಬಲಿಸುತ್ತಾ ಬಂದಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ ಅವರ ಫೋಟೋ ಅನೇಕರ ಮನೆಯಲ್ಲಿ ಇದೆ. ಅದೇ ರೀತಿ ಸ್ಟಾರ್ ನಿರ್ದೇಶಕನ ಕಚೇರಿಯಲ್ಲೂ ಇವರ ಫೋಟೋ ದೊಡ್ಡದಾಗಿ ರಾರಾಜಿಸುತ್ತಿದೆ. ಅಷ್ಟಕ್ಕೂ ಯಾರು ಆ ನಿರ್ದೇಶಕರು? ಸಂದೀಪ್ ರೆಡ್ಡಿ ವಂಗ.

ಸಂದೀಪ್ ರೆಡ್ಡಿ ವಂಗ ನೀಡಿದ್ದು ಮೂರೇ ಮೂರು ಸಿನಿಮಾ. ‘ಅರ್ಜುನ್ ರೆಡ್ಡಿ’, ‘ಕಬೀರ್ ಸಿಂಗ್’ ಹಾಗೂ ‘ಅನಿಮಲ್’. ಮೂರು ಸಿನಿಮಾಗಳು ಸೂಪರ್ ಡೂಪರ್ ಹಿಟ್. ಅದರಲ್ಲೂ ‘ಅನಿಮಲ್’ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಮಾಡಿದ್ದು ಗೊತ್ತೇ ಇದೆ.  ಇತ್ತೀಚೆಗೆ ಸಂದೀಪ್ ರೆಡ್ಡಿ ಅವರು ತಮ್ಮ ಕಚೇರಿಯ ಚಿತ್ರ ಹಂಚಿಕೊಂಡಿದ್ದು, ಮೆಗಾಸ್ಟಾರ್ ಚಿರಂಜೀವಿ ಫೋಟೋ ಕಾಣಿಸಿದೆ.

ಇದು ಚಿರಂಜೀವಿ ಸಾಮಾನ್ಯವಾಗಿ ಪೋಸ್ ಕೊಡುತ್ತಾ ನಿಂತ ಫೋಟೋ ಅಲ್ಲವೇ ಅಲ್ಲ. ಬದಲಿಗೆ ‘ಆರಾಧನಾ’ ಚಿತ್ರದಲ್ಲಿ ಬರೋ ಒಂದು ದೃಶ್ಯದ ಪೋಸ್ಟರ್ ಆಗಿದೆ. ಈ ಪೋಸ್ಟರ್​ನ ಹಿನ್ನೆಲೆಯ ದೃಶ್ಯಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಅನೇಕರು ಸಂದೀಪ್ ರೆಡ್ಡಿ ವಂಗ ಅವರನ್ನು ಶ್ಲಾಘಿಸುತ್ತಿದ್ದಾರೆ. ಸಂದೀಪ್ ಅವರು ಚಿರಂಜೀವಿಯ ದೊಡ್ಡ ಅಭಿಮಾನಿ. ಅನೇಕ ಸಂದರ್ಶನದಲ್ಲಿ ಚಿರಂಜೀವಿಯನ್ನು ಹೊಗಳಿದ್ದಾರೆ. ಅವರ ಹಳೆಯ ಸಿನಿಮಾಗಳ ದೃಶ್ಯಗಳನ್ನು ಇವರು ವಿವರಿಸಿದ್ದೂ ಇದೆ. ಈಗ ಅವರದ್ದೇ ಸಿನಿಮಾದ ಒಂದು ಪ್ರಮುಖ ದೃಶ್ಯವನ್ನು ಫ್ರೇಮ್ ಮಾಡಿಟ್ಟುಕೊಂಡಿದ್ದು ವಿಶೇಷ. ಇವರು ಒಟ್ಟಾಗಿ ಸಿನಿಮಾ ಮಾಡಲಿ ಎಂದು ಅನೇಕರು ಕೋರಿಕೊಂಡಿದ್ದಾರೆ.

‘ಆರಾಧಾನಾ ಸಿನಿಮಾ ಒಂದೊಳ್ಳೆಯ ಉದಾಹರಣೆ. ನಿನ್ನಯೆವರೆಗೂ ಇದೊಂದು ಸಾಮಾನ್ಯ ದೃಶ್ಯವಾಗಿತ್ತು. ಆದರೆ, ಈ ದೃಶ್ಯ ಈಗ ಐಕಾನಿಕ್ ಆಗಿದೆ. ಇದಕ್ಕೆ ಕಾರಣ ಸಂದೀಪ್ ರೆಡ್ಡಿ ವಂಗ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಚಿರಂಜೀವಿ ಬಗ್ಗೆ ಅವರಿಗೆ ಇರೋ ಪ್ರೀತಿ ವಿಶೇಷವಾದುದ್ದು ಎಂದಿದ್ದಾರೆ.

ಇದನ್ನೂ ಓದಿ: ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ‘ಸ್ಪಿರಿಟ್​’ ಸಿನಿಮಾದಲ್ಲಿ ಜೋಡಿ ಆಗ್ತಾರಾ ತ್ರಿಶಾ-ಪ್ರಭಾಸ್​?

ಸಂದೀಪ್ ಅವರು ತಮ್ಮ ಮುಂದಿನ ಸಿನಿಮಾ ‘ಸ್ಪಿರಿಟ್’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರಕ್ಕೆ ಪ್ರಭಾಸ್ ಹೀರೋ. ಅವರು, ಪ್ರಾಮಾಣಿಕ ಪೊಲೀಸ್​ ಅಧಿಕಾರಿಯ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ