AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್, ರಣ್​ಬೀರ್, ಪ್ರಭಾಸ್ ಬಳಿಕ ಮತ್ತೊಬ್ಬ ಸ್ಟಾರ್​ ಜೊತೆ ಸಂದೀಪ್ ಸಿನಿಮಾ

Mahesh Babu: ಒಂದೇ ಸಿನಿಮಾ ಮೂಲಕ ಸ್ಟಾರ್ ನಿರ್ದೇಶಕ ಎನಿಸಿಕೊಂಡಿರುವ ಸಂದೀಪ್ ರೆಡ್ಡಿ ವಂಗಾ, ಇದೀಗ ರಣ್​ಬೀರ್ ಕಪೂರ್​ಗೆ ಸಿನಿಮಾ ನಿರ್ದೇಶಿಸಿದ್ದಾರೆ. ಪ್ರಭಾಸ್ ಜೊತೆಗಿನ ಸಿನಿಮಾ ಕೆಲವೇ ತಿಂಗಳಲ್ಲಿ ಪ್ರಾರಂಭವಾಗಲಿದೆ. ಅದರ ಬಳಿಕ ಮತ್ತೊಬ್ಬ ಸ್ಟಾರ್ ನಟನಿಗಾಗಿ ಸಿನಿಮಾ ಮಾಡಲಿದ್ದಾರೆ.

ವಿಜಯ್, ರಣ್​ಬೀರ್, ಪ್ರಭಾಸ್ ಬಳಿಕ ಮತ್ತೊಬ್ಬ ಸ್ಟಾರ್​ ಜೊತೆ ಸಂದೀಪ್ ಸಿನಿಮಾ
ಸಂದೀಪ್ ರೆಡ್ಡಿ ವಂಗಾ
ಮಂಜುನಾಥ ಸಿ.
|

Updated on: Nov 28, 2023 | 4:16 PM

Share

ಒಂದೇ ಸಿನಿಮಾದಿಂದ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ ತೆಲುಗಿನ ಸಂದೀಪ್ ರೆಡ್ಡಿ ವಂಗಾ (Sandeep Reddy Vanga). ಸಂದೀಪ್ ನಿರ್ದೇಶನದ ‘ಅರ್ಜುನ್ ರೆಡ್ಡಿ’ (Arjun Reddy) ಸಿನಿಮಾ ಹಾಗೂ ಅದರದ್ದೇ ರೀಮೇಕ್ ಆದ ‘ಕಬೀರ್ ಸಿಂಗ್’ ಹೊರತುಪಡಿಸಿ ಇನ್ಯಾವುದೇ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಇದೀಗ ‘ಅನಿಮಲ್’ ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿದೆ. ಆದರೆ ‘ಅರ್ಜುನ್ ರೆಡ್ಡಿ’ ಒಂದೇ ಸಿನಿಮಾದಿಂದಾಗಿ ದೊಡ್ಡ-ದೊಡ್ಡ ಸ್ಟಾರ್ ನಟರು ಈ ನಿರ್ದೇಶಕನ ಜೊತೆ ಕೆಲಸ ಮಾಡಲು ಸಾಲು ಗಟ್ಟಿ ನಿಂತಿದ್ದಾರೆ.

‘ಅರ್ಜುನ್ ರೆಡ್ಡಿ’ ಬಳಿಕ ಅದರದ್ದೇ ರೀಮೇಕ್ ಅನ್ನು ಬಾಲಿವುಡ್​ನ ಶಾಹಿದ್ ಕಪೂರ್​ಗಾಗಿ ಸಂದೀಪ್ ಮಾಡಿದರು. ಅದರ ಬಳಿಕ ಬಾಲಿವುಡ್​ನ ಸ್ಟಾರ್ ನಟ ರಣ್​ಬೀರ್ ಕಪೂರ್ ಜೊತೆಗೆ ‘ಅನಿಮಲ್’ ಸಿನಿಮಾ ಮಾಡಿದರು. ಈ ಸಿನಿಮಾದ ಬಳಿಕ ಪ್ರಭಾಸ್ ಜೊತೆ ಈಗಾಗಲೇ ಸಿನಿಮಾ ಘೋಷಿಸಿದ್ದಾರೆ. ಪ್ರಭಾಸ್​ಗಾಗಿ ‘ಸ್ಪಿರಿಟ್’ ಹೆಸರಿನ ಸಿನಿಮಾವನ್ನು ಸಂದೀಪ್ ನಿರ್ದೇಶಿಸುತ್ತಿತ್ತು, ಮುಂದಿನ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಈ ಸಿನಿಮಾ ಸೆಟ್ಟೇರುತ್ತಿದೆ.

ಇದನ್ನೂ ಓದಿ:ಗೆಳೆಯ ವಿಜಯ್ ದೇವರಕೊಂಡ ನಟನೆಯ ‘ಅರ್ಜುನ್ ರೆಡ್ಡಿ’ ಸಿನಿಮಾ ಬಗ್ಗೆ ರಶ್ಮಿಕಾ ಮಂದಣ್ಣ ಅಭಿಪ್ರಾಯವೇನು?

ಪ್ರಭಾಸ್ ಜೊತೆಗಿನ ಸಿನಿಮಾದ ಬಳಿಕ ಮತ್ತೊಬ್ಬ ಸ್ಟಾರ್​ ಜೊತೆ ಸಿನಿಮಾ ಮಾಡಲಿದ್ದಾರೆ ಸಂದೀಪ್. ಅವರೇ ಮಹೇಶ್ ಬಾಬು. ಮಹೇಶ್ ಬಾಬುಗೆ ಈಗಾಗಲೇ ಕತೆಯೊಂದನ್ನು ಹೇಳಿ ಒಪ್ಪಿಸಿದ್ದಾರೆ ಸಂದೀಪ್ ರೆಡ್ಡಿ ವಂಗಾ. ಸಿನಿಮಾದ ಹೆಸರು ‘ಡೆವಿಲ್’. ‘ಅನಿಮಲ್’ ರೀತಿಯೇ ಸಖತ್ ವೈಲೆಂಟ್ ಕತೆಯನ್ನು ‘ಡೆವಿಲ್’ ಸಿನಿಮಾ ಒಳಗೊಂಡಿದೆಯಂತೆ. ಅಸಲಿಗೆ ‘ಅನಿಮಲ್’ಗಿಂತಲೂ ಹೆಚ್ಚು ವೈಲೆಂಟ್ ಆಗಿರಲಿದೆ ‘ಡೆವಿಲ್’ ಎಂದಿದ್ದಾರೆ ಸಂದೀಪ್.

‘ಅನಿಮಲ್’ ಸಿನಿಮಾದ ಕತೆಯನ್ನು ಮೊದಲು ಮಹೇಶ್ ಬಾಬುಗೆ ಸಂದೀಪ್ ಹೇಳಿದ್ದರು ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಇದನ್ನು ಅಲ್ಲಗಳೆದಿರುವ ಸಂದೀಪ್, ‘ಅನಿಮಲ್’ ಶೈಲಿಯ ಆದರೆ ಪ್ರತ್ಯೇಕ ಕತೆ ಹೊಂದಿರುವ ‘ಡೆವಿಲ್’ ಕತೆಯನ್ನು ಮಹೇಶ್ ಬಾಬುಗೆ ಹೇಳಿದ್ದೀನಿ, ಅದು ‘ಅನಿಮಲ್’ಗಿಂತಲೂ ಹೆಚ್ಚು ವೈಲೆಂಟ್ ಆಗಿರಲಿದೆ ಎಂದಿದ್ದಾರೆ. ಅಂದಹಾಗೆ ‘ಅನಿಮಲ್’ ಸಿನಿಮಾ ಡಿಸೆಂಬರ್ 1ಕ್ಕೆ ತೆರೆಗೆ ಬರಲಿದೆ. ಸಿನಿಮಾದಲ್ಲಿ ರಣ್​ಬೀರ್ ಕಪೂರ್ ಎದುರು ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಅನಿಲ್ ಕಪೂರ್ ಸಹ ಸಿನಿಮಾದಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್