AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ‘ಅರ್ಜುನ್​ ರೆಡ್ಡಿ’ ಸಿನಿಮಾ ಮಾಡಬೇಕು ಎಂಬುದು ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಿರಲಿಲ್ಲ. ನಂತರ ವಿಜಯ್​ ದೇವರಕೊಂಡ ಆಯ್ಕೆ ಆದರು.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..
ಸಂದೀಪ್​ ರೆಡ್ಡಿ ವಂಗಾ, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್​
ಮದನ್​ ಕುಮಾರ್​
| Edited By: |

Updated on:Jan 22, 2024 | 11:24 AM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಅವರು ನಿರ್ದೇಶಿಸಿದ ಮೂರು ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾಗಳು ಗೆದ್ದು ಬೀಗಿವೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ತಮ್ಮ ಮೊದಲ ಸಿನಿಮಾ ‘ಅರ್ಜುನ್ ರೆಡ್ಡಿ’ (Arjun Reddy) ಬಗ್ಗೆ ಮಾತನಾಡಿದ್ದಾರೆ. ಅಚ್ಚರಿ ಏನೆಂದರೆ, ಆ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಬದಲು ಅಲ್ಲು ಅರ್ಜುನ್​ (Allu Arjun) ನಟಿಸಬೇಕು ಎಂಬುದು ನಿರ್ದೇಶಕರ ಆಸೆ ಆಗಿತ್ತು.

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಅದಕ್ಕಾಗಿ 2011ರಲ್ಲೇ ಅವರು ಒಂದು ಕಥೆ ಹೇಳಿದ್ದರು. ಆದರೆ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಚಿತ್ರದ ಕಥೆಯನ್ನು ಅಲ್ಲು ಅರ್ಜುನ್​ಗೆ ಹೇಳಬೇಕು ಎಂದು ಸಂದೀಪ್​ ಬಯಸಿದ್ದರು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ.

‘ಅಲ್ಲು ಅರ್ಜುನ್​ ಅವರನ್ನು ಮೀಟ್​ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಸ್ಕ್ರಿಪ್ಟ್​ ಅನೇಕ ನಿರ್ಮಾಪಕರು ಮತ್ತು ನಟರ ಬಳಿ ಹೋಯಿತು. ನಂತರ ನಾನೇ ನಿರ್ಮಾಣ ಮಾಡಲು ನಿರ್ಧರಿಸಿದೆ. ಒಬ್ಬ ಸ್ನೇಹಿತನಿಂದ ವಿಜಯ್​ ದೇವರಕೊಂಡ ಪರಿಚಯ ಆಯಿತು. ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭ ಆಯಿತು. ಆದರೆ ನಾನು ನನ್ನ ಮೊದಲ ಸಿನಿಮಾವನ್ನು ಅಲ್ಲು ಅರ್ಜುನ್​ ಜೊತೆ ಮಾಡಲು ಬಯಸಿದ್ದೆ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಸಂದೀಪ್​ ರೆಡ್ಡಿ ವಂಗಾ ಅವರ ಬಹುದಿನಗಳ ಕನಸು ಶೀಘ್ರದಲ್ಲೇ ಈಡೇರಲಿದೆ. ಯಾಕೆಂದರೆ, ಅವರ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್​ ಈಗ ಒಪ್ಪಿಕೊಂಡಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಸುಮಾರು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಗೆಲುವಿನ ಬಳಿಕ ಸಂದೀಪ್​ ರೆಡ್ಡಿ ವಂಗಾ ಅವರ ಬೇಡಿಕೆ ಹೆಚ್ಚಾಗಿದೆ. ಪ್ರಬಾಸ್​ ಜೊತೆಗೂ ಅವರೊಂದು ಸಿನಿಮಾ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Sun, 7 January 24

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್