AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ‘ಅರ್ಜುನ್​ ರೆಡ್ಡಿ’ ಸಿನಿಮಾ ಮಾಡಬೇಕು ಎಂಬುದು ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಿರಲಿಲ್ಲ. ನಂತರ ವಿಜಯ್​ ದೇವರಕೊಂಡ ಆಯ್ಕೆ ಆದರು.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..
ಸಂದೀಪ್​ ರೆಡ್ಡಿ ವಂಗಾ, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್​
ಮದನ್​ ಕುಮಾರ್​
| Edited By: |

Updated on:Jan 22, 2024 | 11:24 AM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಅವರು ನಿರ್ದೇಶಿಸಿದ ಮೂರು ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾಗಳು ಗೆದ್ದು ಬೀಗಿವೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ತಮ್ಮ ಮೊದಲ ಸಿನಿಮಾ ‘ಅರ್ಜುನ್ ರೆಡ್ಡಿ’ (Arjun Reddy) ಬಗ್ಗೆ ಮಾತನಾಡಿದ್ದಾರೆ. ಅಚ್ಚರಿ ಏನೆಂದರೆ, ಆ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಬದಲು ಅಲ್ಲು ಅರ್ಜುನ್​ (Allu Arjun) ನಟಿಸಬೇಕು ಎಂಬುದು ನಿರ್ದೇಶಕರ ಆಸೆ ಆಗಿತ್ತು.

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಅದಕ್ಕಾಗಿ 2011ರಲ್ಲೇ ಅವರು ಒಂದು ಕಥೆ ಹೇಳಿದ್ದರು. ಆದರೆ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಚಿತ್ರದ ಕಥೆಯನ್ನು ಅಲ್ಲು ಅರ್ಜುನ್​ಗೆ ಹೇಳಬೇಕು ಎಂದು ಸಂದೀಪ್​ ಬಯಸಿದ್ದರು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ.

‘ಅಲ್ಲು ಅರ್ಜುನ್​ ಅವರನ್ನು ಮೀಟ್​ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಸ್ಕ್ರಿಪ್ಟ್​ ಅನೇಕ ನಿರ್ಮಾಪಕರು ಮತ್ತು ನಟರ ಬಳಿ ಹೋಯಿತು. ನಂತರ ನಾನೇ ನಿರ್ಮಾಣ ಮಾಡಲು ನಿರ್ಧರಿಸಿದೆ. ಒಬ್ಬ ಸ್ನೇಹಿತನಿಂದ ವಿಜಯ್​ ದೇವರಕೊಂಡ ಪರಿಚಯ ಆಯಿತು. ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭ ಆಯಿತು. ಆದರೆ ನಾನು ನನ್ನ ಮೊದಲ ಸಿನಿಮಾವನ್ನು ಅಲ್ಲು ಅರ್ಜುನ್​ ಜೊತೆ ಮಾಡಲು ಬಯಸಿದ್ದೆ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಸಂದೀಪ್​ ರೆಡ್ಡಿ ವಂಗಾ ಅವರ ಬಹುದಿನಗಳ ಕನಸು ಶೀಘ್ರದಲ್ಲೇ ಈಡೇರಲಿದೆ. ಯಾಕೆಂದರೆ, ಅವರ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್​ ಈಗ ಒಪ್ಪಿಕೊಂಡಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಸುಮಾರು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಗೆಲುವಿನ ಬಳಿಕ ಸಂದೀಪ್​ ರೆಡ್ಡಿ ವಂಗಾ ಅವರ ಬೇಡಿಕೆ ಹೆಚ್ಚಾಗಿದೆ. ಪ್ರಬಾಸ್​ ಜೊತೆಗೂ ಅವರೊಂದು ಸಿನಿಮಾ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Sun, 7 January 24

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು