AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ‘ಅರ್ಜುನ್​ ರೆಡ್ಡಿ’ ಸಿನಿಮಾ ಮಾಡಬೇಕು ಎಂಬುದು ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಿರಲಿಲ್ಲ. ನಂತರ ವಿಜಯ್​ ದೇವರಕೊಂಡ ಆಯ್ಕೆ ಆದರು.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..
ಸಂದೀಪ್​ ರೆಡ್ಡಿ ವಂಗಾ, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್​
ಮದನ್​ ಕುಮಾರ್​
| Edited By: |

Updated on:Jan 22, 2024 | 11:24 AM

Share

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಅವರು ನಿರ್ದೇಶಿಸಿದ ಮೂರು ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾಗಳು ಗೆದ್ದು ಬೀಗಿವೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ತಮ್ಮ ಮೊದಲ ಸಿನಿಮಾ ‘ಅರ್ಜುನ್ ರೆಡ್ಡಿ’ (Arjun Reddy) ಬಗ್ಗೆ ಮಾತನಾಡಿದ್ದಾರೆ. ಅಚ್ಚರಿ ಏನೆಂದರೆ, ಆ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಬದಲು ಅಲ್ಲು ಅರ್ಜುನ್​ (Allu Arjun) ನಟಿಸಬೇಕು ಎಂಬುದು ನಿರ್ದೇಶಕರ ಆಸೆ ಆಗಿತ್ತು.

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಅದಕ್ಕಾಗಿ 2011ರಲ್ಲೇ ಅವರು ಒಂದು ಕಥೆ ಹೇಳಿದ್ದರು. ಆದರೆ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಚಿತ್ರದ ಕಥೆಯನ್ನು ಅಲ್ಲು ಅರ್ಜುನ್​ಗೆ ಹೇಳಬೇಕು ಎಂದು ಸಂದೀಪ್​ ಬಯಸಿದ್ದರು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ.

‘ಅಲ್ಲು ಅರ್ಜುನ್​ ಅವರನ್ನು ಮೀಟ್​ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಸ್ಕ್ರಿಪ್ಟ್​ ಅನೇಕ ನಿರ್ಮಾಪಕರು ಮತ್ತು ನಟರ ಬಳಿ ಹೋಯಿತು. ನಂತರ ನಾನೇ ನಿರ್ಮಾಣ ಮಾಡಲು ನಿರ್ಧರಿಸಿದೆ. ಒಬ್ಬ ಸ್ನೇಹಿತನಿಂದ ವಿಜಯ್​ ದೇವರಕೊಂಡ ಪರಿಚಯ ಆಯಿತು. ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭ ಆಯಿತು. ಆದರೆ ನಾನು ನನ್ನ ಮೊದಲ ಸಿನಿಮಾವನ್ನು ಅಲ್ಲು ಅರ್ಜುನ್​ ಜೊತೆ ಮಾಡಲು ಬಯಸಿದ್ದೆ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಸಂದೀಪ್​ ರೆಡ್ಡಿ ವಂಗಾ ಅವರ ಬಹುದಿನಗಳ ಕನಸು ಶೀಘ್ರದಲ್ಲೇ ಈಡೇರಲಿದೆ. ಯಾಕೆಂದರೆ, ಅವರ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್​ ಈಗ ಒಪ್ಪಿಕೊಂಡಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಸುಮಾರು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಗೆಲುವಿನ ಬಳಿಕ ಸಂದೀಪ್​ ರೆಡ್ಡಿ ವಂಗಾ ಅವರ ಬೇಡಿಕೆ ಹೆಚ್ಚಾಗಿದೆ. ಪ್ರಬಾಸ್​ ಜೊತೆಗೂ ಅವರೊಂದು ಸಿನಿಮಾ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Sun, 7 January 24

Follow Us
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್