‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ‘ಅರ್ಜುನ್​ ರೆಡ್ಡಿ’ ಸಿನಿಮಾ ಮಾಡಬೇಕು ಎಂಬುದು ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಿರಲಿಲ್ಲ. ನಂತರ ವಿಜಯ್​ ದೇವರಕೊಂಡ ಆಯ್ಕೆ ಆದರು.

‘ಅರ್ಜುನ್​ ರೆಡ್ಡಿ’ ಸಿನಿಮಾಗೆ ಅಲ್ಲು ಅರ್ಜುನ್​ ಹೀರೋ ಆಗಬೇಕಿತ್ತು; ಆದರೆ..
ಸಂದೀಪ್​ ರೆಡ್ಡಿ ವಂಗಾ, ವಿಜಯ್ ದೇವರಕೊಂಡ, ಅಲ್ಲು ಅರ್ಜುನ್​
Edited By:

Updated on: Jan 22, 2024 | 11:24 AM

ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ (Sandeep Reddy Vanga) ಅವರು ಮುಟ್ಟಿದ್ದೆಲ್ಲ ಚಿನ್ನ ಆಗುತ್ತಿದೆ. ಅವರು ನಿರ್ದೇಶಿಸಿದ ಮೂರು ಸಿನಿಮಾಗಳು ಸೂಪರ್​ ಹಿಟ್​ ಆಗಿವೆ. ‘ಅರ್ಜುನ್​ ರೆಡ್ಡಿ’, ‘ಕಬೀರ್​ ಸಿಂಗ್​’ ಮತ್ತು ‘ಅನಿಮಲ್​’ ಸಿನಿಮಾಗಳು ಗೆದ್ದು ಬೀಗಿವೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ತಮ್ಮ ಮೊದಲ ಸಿನಿಮಾ ‘ಅರ್ಜುನ್ ರೆಡ್ಡಿ’ (Arjun Reddy) ಬಗ್ಗೆ ಮಾತನಾಡಿದ್ದಾರೆ. ಅಚ್ಚರಿ ಏನೆಂದರೆ, ಆ ಸಿನಿಮಾದಲ್ಲಿ ವಿಜಯ್​ ದೇವರಕೊಂಡ ಬದಲು ಅಲ್ಲು ಅರ್ಜುನ್​ (Allu Arjun) ನಟಿಸಬೇಕು ಎಂಬುದು ನಿರ್ದೇಶಕರ ಆಸೆ ಆಗಿತ್ತು.

ಟಾಲಿವುಡ್​ನ ಸ್ಟಾರ್​ ನಟ ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡಬೇಕು ಎಂಬುದು ಸಂದೀಪ್​ ರೆಡ್ಡಿ ವಂಗಾ ಅವರ ಆಸೆ ಆಗಿತ್ತು. ಅದಕ್ಕಾಗಿ 2011ರಲ್ಲೇ ಅವರು ಒಂದು ಕಥೆ ಹೇಳಿದ್ದರು. ಆದರೆ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಚಿತ್ರದ ಕಥೆಯನ್ನು ಅಲ್ಲು ಅರ್ಜುನ್​ಗೆ ಹೇಳಬೇಕು ಎಂದು ಸಂದೀಪ್​ ಬಯಸಿದ್ದರು. ಆದರೆ ಆ ಸಂದರ್ಭದಲ್ಲಿ ಅಲ್ಲು ಅರ್ಜುನ್​ ಅವರನ್ನು ಭೇಟಿ ಮಾಡಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ.

‘ಅಲ್ಲು ಅರ್ಜುನ್​ ಅವರನ್ನು ಮೀಟ್​ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ‘ಅರ್ಜುನ್​ ರೆಡ್ಡಿ’ ಸ್ಕ್ರಿಪ್ಟ್​ ಅನೇಕ ನಿರ್ಮಾಪಕರು ಮತ್ತು ನಟರ ಬಳಿ ಹೋಯಿತು. ನಂತರ ನಾನೇ ನಿರ್ಮಾಣ ಮಾಡಲು ನಿರ್ಧರಿಸಿದೆ. ಒಬ್ಬ ಸ್ನೇಹಿತನಿಂದ ವಿಜಯ್​ ದೇವರಕೊಂಡ ಪರಿಚಯ ಆಯಿತು. ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭ ಆಯಿತು. ಆದರೆ ನಾನು ನನ್ನ ಮೊದಲ ಸಿನಿಮಾವನ್ನು ಅಲ್ಲು ಅರ್ಜುನ್​ ಜೊತೆ ಮಾಡಲು ಬಯಸಿದ್ದೆ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಸಂದೀಪ್​ ರೆಡ್ಡಿ ವಂಗಾ ಅವರ ಬಹುದಿನಗಳ ಕನಸು ಶೀಘ್ರದಲ್ಲೇ ಈಡೇರಲಿದೆ. ಯಾಕೆಂದರೆ, ಅವರ ಜೊತೆ ಸಿನಿಮಾ ಮಾಡಲು ಅಲ್ಲು ಅರ್ಜುನ್​ ಈಗ ಒಪ್ಪಿಕೊಂಡಿದ್ದಾರೆ. ಅವರಿಬ್ಬರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಸಿನಿಮಾ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ. ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಸಿನಿಮಾ ಸುಮಾರು 900 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಗೆಲುವಿನ ಬಳಿಕ ಸಂದೀಪ್​ ರೆಡ್ಡಿ ವಂಗಾ ಅವರ ಬೇಡಿಕೆ ಹೆಚ್ಚಾಗಿದೆ. ಪ್ರಬಾಸ್​ ಜೊತೆಗೂ ಅವರೊಂದು ಸಿನಿಮಾ ಮಾಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Sun, 7 January 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us