Sandeshkhali: ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣ ಆಧರಿಸಿ ಸಿದ್ಧವಾಗಲಿದೆ ಸಿನಿಮಾ

ತಮ್ಮ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಪಶ್ಚಿಮ ಬಂಗಾಳದ ಹಲವು ಮಹಿಳೆಯರು ಸಿಡಿದೆದ್ದಿದ್ದಾರೆ. ಸಂದೇಶ್​ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್​ನ ಮುಖಂಡ ಶಹಜಹಾನ್​ ಶೇಖ್​ ನಡೆಸಿದ ಅಕ್ರಮಗಳನ್ನು ಬಯಲಿಗೆ ಎಳೆಯಲಾಗುತ್ತಿದೆ. ಈ ನೈಜ ಘಟನೆಯನ್ನು ಆಧರಿಸಿ ಸಿನಿಮಾ ಸಿದ್ಧವಾಗಲಿದೆ. ಈ ಸಿನಿಮಾದಲ್ಲಿ ಹಲವು ಕರಾಳ ಸತ್ಯಗಳು ಬಹಿರಂಗ ಆಗಲಿವೆ.

Sandeshkhali: ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣ ಆಧರಿಸಿ ಸಿದ್ಧವಾಗಲಿದೆ ಸಿನಿಮಾ
ಸಂದೇಶ್​ಖಾಲಿ ಸಿನಿಮಾ ಪೋಸ್ಟರ್​, ಶಹಜಹಾನ್​ ಶೇಖ್​
Follow us
|

Updated on: Mar 10, 2024 | 4:09 PM

ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆದ ದೌರ್ಜನ್ಯ ಪ್ರಕರಣ (Sandeshkhali incident) ಸಖತ್​ ಸದ್ದು ಮಾಡಿದೆ. ಈ ಘಟನೆಯನ್ನು ಅನೇಕರು ಖಂಡಿಸಿದ್ದಾರೆ. ಈಗ ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮೂಡಿಬರಲಿದೆ. ಮಹಿಳಾ ದಿನದ ಸಂದರ್ಭದಲ್ಲಿ ಈ ಬಗ್ಗೆ ಘೋಷಣೆ ಆಗಿದೆ. ಈ ಚಿತ್ರಕ್ಕೆ ಸಂದೇಶ್​ಖಾಲಿ’ (Sandeshkhali) ಎಂದು ಶೀರ್ಷಿಕೆ ಇಡಲಾಗಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ಮುಂಬರುವ ಪಶ್ವಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಗೂ ಮೊದಲು ‘ಸಂದೇಶ್​ಖಾಲಿ’ ಸಿನಿಮಾ ಬಿಡುಗಡೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ‘ಭಯ, ದೌರ್ಜನ್ಯ ಹಾಗೂ ತುಳಿತದ ವಿರುದ್ಧ ನಡೆದ ಯುದ್ಧದ ನೈಜ ಕಥೆ’ ಎಂಬ ಟ್ಯಾಗ್​ಲೈನ್​ ಈ ಸಿನಿಮಾದ ಪೋಸ್ಟರ್​ನಲ್ಲಿದೆ.

‘ಪರಿನ್​ ಮಲ್ಟಿಮೀಡಿಯಾ’ ಬ್ಯಾನರ್​ ಮೂಲಕ ‘ಸಂದೇಶ್​ಖಾಲಿ’ ಸಿನಿಮಾ ನಿರ್ಮಾಣ ಆಗಲಿದೆ. ಸುಮೀತ್​ ಚೌಧರಿ ಮತ್ತು ಕೇವಲ್​ ಸೇಟ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ಸೌರಭ್​ ತಿವಾರಿ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಅಮಿತಾಭ್​ ಸಿಂಗ್​ ಹಾಗೂ ಇಶಾನ್​ ಬಾಜ್​ಪಾಯಿ ಅವರು ಚಿತ್ರಕಥೆ ಬರೆಯಲಿದ್ದಾರೆ. ಟೈಟಲ್​ ಪೋಸ್ಟರ್​ ಬಿಡುಗಡೆ ಆಗಿದೆ.

‘ಸಂದೇಶ್​ಖಾಲಿ’ ಸಿನಿಮಾದ ಪಾತ್ರವರ್ಗ ಕೂಡ ಆಯ್ಕೆ ಆಗಿದೆ. ಆದರೆ ಪಾತ್ರದಾರಿಗಳ ಹೆಸರು ಇನ್ನಷ್ಟೇ ಹೊರಬರಬೇಕಿದೆ. 2026ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಈ ಸಿನಿಮಾ ಬಿಡುಗಡೆಯಾದರೆ ಖಂಡಿತವಾಗಿ ಮತದಾರರ ಮೇಲೆ ಪ್ರಭಾವ ಬೀರಲಿದೆ. ಯಾಕೆಂದರೆ, ತೃಣಮೂಲ ಕಾಂಗ್ರೆಸ್​ನ ಮುಂಖಡ ಶಹಜಹಾನ್​ ಶೇಖ್​ ನಡೆಸಿದ ದೌರ್ಜನ್ಯಗಳ ಕುರಿತು ಈ ಸಿನಿಮಾದಲ್ಲಿ ಹೇಳಲಾಗುವುದು.

ಇದನ್ನೂ ಓದಿ: ಸಂದೇಶ್​ಖಾಲಿ ಪ್ರಕರಣ: 55 ದಿನಗಳ ಬಳಿಕ ಅಂತೂ ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ

ಏನಿದು ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣ? ಇತ್ತೀಚೆಗೆ ತೃಣಮೂಲ ಕಾಂಗ್ರೆಸ್​ ಮುಖಂಡ ಶಹ್​ಜಹಾನ್​ ಶೇಖ್​ ಮತ್ತು ಆತನ ಸಹಚರರ ವಿರುದ್ಧ ಪಶ್ಚಿಮ ಬಂಗಾಳದ ಅನೇಕ ಮಹಿಳೆಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಭೂಮಿ ಕಬಳಿಸಿದ್ದು ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಶಹ್​ಜಹಾನ್​ ಶೇಖ್​ ವಿರುದ್ಧ ಇದೆ. ಫೆ.29ರಂದು ಆತನನ್ನು ಬಂಧಿಸಲಾಯಿತು. ಸದ್ಯ ಈ ಪ್ರಕರಣದ ತನಿಖೆಯಲ್ಲಿ ಸಿಬಿಐ ನಡೆಸುತ್ತಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೂಡ ಶಹಜಹಾನ್​ ಶೇಖ್​ ಮೇಲೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ