AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandeshkhali: ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣ ಆಧರಿಸಿ ಸಿದ್ಧವಾಗಲಿದೆ ಸಿನಿಮಾ

ತಮ್ಮ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಪಶ್ಚಿಮ ಬಂಗಾಳದ ಹಲವು ಮಹಿಳೆಯರು ಸಿಡಿದೆದ್ದಿದ್ದಾರೆ. ಸಂದೇಶ್​ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್​ನ ಮುಖಂಡ ಶಹಜಹಾನ್​ ಶೇಖ್​ ನಡೆಸಿದ ಅಕ್ರಮಗಳನ್ನು ಬಯಲಿಗೆ ಎಳೆಯಲಾಗುತ್ತಿದೆ. ಈ ನೈಜ ಘಟನೆಯನ್ನು ಆಧರಿಸಿ ಸಿನಿಮಾ ಸಿದ್ಧವಾಗಲಿದೆ. ಈ ಸಿನಿಮಾದಲ್ಲಿ ಹಲವು ಕರಾಳ ಸತ್ಯಗಳು ಬಹಿರಂಗ ಆಗಲಿವೆ.

Sandeshkhali: ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣ ಆಧರಿಸಿ ಸಿದ್ಧವಾಗಲಿದೆ ಸಿನಿಮಾ
ಸಂದೇಶ್​ಖಾಲಿ ಸಿನಿಮಾ ಪೋಸ್ಟರ್​, ಶಹಜಹಾನ್​ ಶೇಖ್​
ಮದನ್​ ಕುಮಾರ್​
|

Updated on: Mar 10, 2024 | 4:09 PM

Share

ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆದ ದೌರ್ಜನ್ಯ ಪ್ರಕರಣ (Sandeshkhali incident) ಸಖತ್​ ಸದ್ದು ಮಾಡಿದೆ. ಈ ಘಟನೆಯನ್ನು ಅನೇಕರು ಖಂಡಿಸಿದ್ದಾರೆ. ಈಗ ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣವನ್ನು ಆಧರಿಸಿ ಸಿನಿಮಾ ಮೂಡಿಬರಲಿದೆ. ಮಹಿಳಾ ದಿನದ ಸಂದರ್ಭದಲ್ಲಿ ಈ ಬಗ್ಗೆ ಘೋಷಣೆ ಆಗಿದೆ. ಈ ಚಿತ್ರಕ್ಕೆ ಸಂದೇಶ್​ಖಾಲಿ’ (Sandeshkhali) ಎಂದು ಶೀರ್ಷಿಕೆ ಇಡಲಾಗಿದೆ. ಆಗಸ್ಟ್​ ತಿಂಗಳಲ್ಲಿ ಈ ಚಿತ್ರದ ಶೂಟಿಂಗ್​ ಆರಂಭ ಆಗಲಿದೆ. ಮುಂಬರುವ ಪಶ್ವಿಮ ಬಂಗಾಳ (West Bengal) ವಿಧಾನಸಭಾ ಚುನಾವಣೆಗೂ ಮೊದಲು ‘ಸಂದೇಶ್​ಖಾಲಿ’ ಸಿನಿಮಾ ಬಿಡುಗಡೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ‘ಭಯ, ದೌರ್ಜನ್ಯ ಹಾಗೂ ತುಳಿತದ ವಿರುದ್ಧ ನಡೆದ ಯುದ್ಧದ ನೈಜ ಕಥೆ’ ಎಂಬ ಟ್ಯಾಗ್​ಲೈನ್​ ಈ ಸಿನಿಮಾದ ಪೋಸ್ಟರ್​ನಲ್ಲಿದೆ.

‘ಪರಿನ್​ ಮಲ್ಟಿಮೀಡಿಯಾ’ ಬ್ಯಾನರ್​ ಮೂಲಕ ‘ಸಂದೇಶ್​ಖಾಲಿ’ ಸಿನಿಮಾ ನಿರ್ಮಾಣ ಆಗಲಿದೆ. ಸುಮೀತ್​ ಚೌಧರಿ ಮತ್ತು ಕೇವಲ್​ ಸೇಟ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ಸೌರಭ್​ ತಿವಾರಿ ಅವರು ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಅಮಿತಾಭ್​ ಸಿಂಗ್​ ಹಾಗೂ ಇಶಾನ್​ ಬಾಜ್​ಪಾಯಿ ಅವರು ಚಿತ್ರಕಥೆ ಬರೆಯಲಿದ್ದಾರೆ. ಟೈಟಲ್​ ಪೋಸ್ಟರ್​ ಬಿಡುಗಡೆ ಆಗಿದೆ.

‘ಸಂದೇಶ್​ಖಾಲಿ’ ಸಿನಿಮಾದ ಪಾತ್ರವರ್ಗ ಕೂಡ ಆಯ್ಕೆ ಆಗಿದೆ. ಆದರೆ ಪಾತ್ರದಾರಿಗಳ ಹೆಸರು ಇನ್ನಷ್ಟೇ ಹೊರಬರಬೇಕಿದೆ. 2026ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಕ್ಕೂ ಮೊದಲು ಈ ಸಿನಿಮಾ ಬಿಡುಗಡೆಯಾದರೆ ಖಂಡಿತವಾಗಿ ಮತದಾರರ ಮೇಲೆ ಪ್ರಭಾವ ಬೀರಲಿದೆ. ಯಾಕೆಂದರೆ, ತೃಣಮೂಲ ಕಾಂಗ್ರೆಸ್​ನ ಮುಂಖಡ ಶಹಜಹಾನ್​ ಶೇಖ್​ ನಡೆಸಿದ ದೌರ್ಜನ್ಯಗಳ ಕುರಿತು ಈ ಸಿನಿಮಾದಲ್ಲಿ ಹೇಳಲಾಗುವುದು.

ಇದನ್ನೂ ಓದಿ: ಸಂದೇಶ್​ಖಾಲಿ ಪ್ರಕರಣ: 55 ದಿನಗಳ ಬಳಿಕ ಅಂತೂ ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ

ಏನಿದು ಸಂದೇಶ್​ಖಾಲಿ ದೌರ್ಜನ್ಯ ಪ್ರಕರಣ? ಇತ್ತೀಚೆಗೆ ತೃಣಮೂಲ ಕಾಂಗ್ರೆಸ್​ ಮುಖಂಡ ಶಹ್​ಜಹಾನ್​ ಶೇಖ್​ ಮತ್ತು ಆತನ ಸಹಚರರ ವಿರುದ್ಧ ಪಶ್ಚಿಮ ಬಂಗಾಳದ ಅನೇಕ ಮಹಿಳೆಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಭೂಮಿ ಕಬಳಿಸಿದ್ದು ಹಾಗೂ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಶಹ್​ಜಹಾನ್​ ಶೇಖ್​ ವಿರುದ್ಧ ಇದೆ. ಫೆ.29ರಂದು ಆತನನ್ನು ಬಂಧಿಸಲಾಯಿತು. ಸದ್ಯ ಈ ಪ್ರಕರಣದ ತನಿಖೆಯಲ್ಲಿ ಸಿಬಿಐ ನಡೆಸುತ್ತಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೂಡ ಶಹಜಹಾನ್​ ಶೇಖ್​ ಮೇಲೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ