AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಸಂಗೀತ್​ ಶಿವನ್​ ನಿಧನ; ಅನಾರೋಗ್ಯದಿಂದ 61ನೇ ವಯಸ್ಸಿಗೆ ವಿಧಿವಶ

ಸಿನಿಮಾ ನಿರ್ದೇಶಕ ಸಂಗೀತ್​ ಶಿವನ್​ ಅವರು ಇಂದು (ಮೇ 8) ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅನಾರೋಗ್ಯದಿಂದ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಂಗೀತ್​ ಶಿವನ್​ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ತುಷಾರ್​ ಕಪೂರ್​, ರಿತೇಶ್​ ದೇಶಮುಖ್​ ಮುಂತಾದ ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ನಿರ್ದೇಶಕ ಸಂಗೀತ್​ ಶಿವನ್​ ನಿಧನ; ಅನಾರೋಗ್ಯದಿಂದ 61ನೇ ವಯಸ್ಸಿಗೆ ವಿಧಿವಶ
ಸಂಗೀತ್​ ಶಿವನ್​
ಮದನ್​ ಕುಮಾರ್​
|

Updated on: May 08, 2024 | 10:57 PM

Share

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಹೊಂದಿದ್ದ ನಿರ್ದೇಶಕ ಸಂಗೀತ್​ ಶಿವನ್ (Sangeeth Sivan)​ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು 61ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಂದು (ಮೇ 8) ಕೊನೆಯುಸಿರು ಎಳೆದಿದ್ದಾರೆ. ಸಂಗೀತ್​ ಶಿವನ್​ ಅವರ ನಿಧನಕ್ಕೆ (Sangeeth Sivan Death) ಅನೇಕ ಸೆಲೆಬ್ರಿಟಿಗಳು ಕಂಬಿನಿ ಮಿಡಿದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.

ಸಂಗೀತ್​ ಶಿವನ್​ ಅವರು ಮೂಲತಃ ಕೇರಳದ ತಿರುವನಂತಪುರಂನವರು. 1989ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆಮಿರ್​ ಖಾನ್​ ನಟನೆಯ ‘ರಾಖ್​’ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿ ಅವರು ಕೆಲಸ ಆರಂಭಿಸಿದರು. ಬಳಿಕ 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು. ಮೋಹನ್​ಲಾಲ್​ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಗುರುತಿಸಿಕೊಂಡರು.

ಇದನ್ನೂ ಓದಿ: ಸೌಂದರ್ಯ ಜಗದೀಶ್​ ಸಾವಿನ ಹಿಂದಿರುವ 2 ಅನುಮಾನದ ಬಗ್ಗೆ ಸ್ನೇಹಿತರ ಸ್ಪಷ್ಟನೆ

ಬಾಲಿವುಡ್​ನಲ್ಲಿ ಸಂಗೀತ್​ ಶಿವನ್​ ಅವರು ತಮ್ಮದೇ ಚಾಪು ಮೂಡಿಸಿದ್ದರು. ‘ಚುರಾ ಲಿಯಾ ಹೈ ತುಮ್ ನೇ’, ‘ಕ್ಯಾ ಕೂಲ್​ ಹೈ ಹಮ್​’, ‘ಅಪ್ನ ಸಪ್ನ ಮನಿ ಮನಿ’, ‘ಯಮ್ಲಾ ಪಗ್ಲ ದೀವಾನ 2’ ಮುಂತಾದ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು. ಮಲಯಾಳಂನ ‘ರೋಮಾಂಚಂ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಅವರು ಮುಂದಾಗಿದ್ದರು. ಆ ಕೆಲಸ ಪೂರ್ಣಗೊಳ್ಳುವುದಕ್ಕೂ ಮೊದಲೇ ಅವರು ನಿಧನರಾಗಿರುವುದು ನೋವಿನ ಸಂಗತಿ.

ಸುನೀಲ್​ ಶೆಟ್ಟಿ, ರಿತೇಶ್​ ದೇಶಮುಖ್​, ಜಾಕಿ ಶ್ರಾಫ್​, ಸೆಲಿನಾ ಜೇಟ್ಲಿ, ಚಂಕಿ ಪಾಂಡೆ, ರಾಜ್​ಪಾಲ್​ ಯಾದವ್​, ತುಷಾರ್​ ಕಪೂರ್​, ಇಶಾ ಕೊಪ್ಪಿಕರ್​, ನೇಹಾ ದೂಪಿಯಾ, ಅನುಪಮ್​ ಖೇರ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಸಂಗೀತ್​ ಶಿವನ್​ ಕೆಲಸ ಮಾಡಿದ್ದರು. ನಿರ್ದೇಶಕನ ಅಗಲಿಕೆಗೆ ರಿತೇಶ್​ ದೇಶಮುಖ್​ ಸಂತಾಪ ಸೂಚಿಸಿದ್ದಾರೆ. ‘ಸಂಗೀತ್​ ಶಿವನ್​ ಸರ್​ ಇನ್ನಿಲ್ಲ ಎಂಬುದು ತಿಳಿದು ಶಾಕ್​ ಆಯಿತು. ಅವರು ತುಂಬ ಒಳ್ಳೆಯ ವ್ಯಕ್ತಿ ಆಗಿದ್ದರು. ಅವರ ಕುಟುಂಬದವರಿಗೆ ನನ್ನ ಸಂತಾಪಗಳು. ಅವರನ್ನು ಮತ್ತು ಅವರ ನಗುವನ್ನು ಮಿಸ್​ ಮಾಡಿಕೊಳ್ಳುತ್ತೇನೆ’ ಎಂದು ರಿತೇಶ್​ ದೇಶಮುಖ್​ ಟ್ವೀಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?