AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Dutt Birthday: ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್

‘ಕೆಡಿ’ ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಅವರು ಈ ಚಿತ್ರದಲ್ಲಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಸರಿಯಾದ ರೀತಿಯಲ್ಲಿ ಠಕ್ಕರ್ ಕೊಡೋ ಪಾತ್ರದಲ್ಲಿ ಸಂಜಯ್ ದತ್ ನಟಿಸಲಿದ್ದಾರೆ. ಈ ಸಿನಿಮಾ ರೆಟ್ರೋ ಕಥೆಯನ್ನು ಹೊಂದಿದೆ ಎನ್ನಲಾಗಿದೆ.

Sanjay Dutt Birthday: ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್
ಸಂಜಯ್ ದತ್
ರಾಜೇಶ್ ದುಗ್ಗುಮನೆ
|

Updated on: Jul 29, 2024 | 11:07 AM

Share

ನಟ ಸಂಜಯ್ ದತ್ ಅವರಿಗೆ ಇಂದು (ಜುಲೈ 29) ಜನ್ಮದಿನದ ಸಂಭ್ರಮ. ಅವರಿಗೆ ಆಪ್ತರು, ಗೆಳೆಯರು, ಸಿನಿಮಾ ಇಂಡಸ್ಟ್ರಿಯ ಸೆಲೆಬ್ರಿಟಿಗಳು ವಿಶ್ ಮಾಡುತ್ತಿದ್ದಾರೆ. ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಿದೆ. ಇತ್ತೀಚೆಗೆ ಸಂಜಯ್ ದತ್ ದಕ್ಷಿಣದತ್ತ ಹೆಚ್ಚು ಮುಖ ಮಾಡಿದ್ದಾರೆ. ಅವರು ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿನ ಸಂಜಯ್ ದತ್ ಲುಕ್​ನ ರಿವೀಲ್ ಮಾಡಲಾಗಿದೆ. ಕೆವಿಎನ್ ಪ್ರೊಡಕ್ಷನ್ ಕಡೆಯಿಂದ ಸಂಜಯ್ ದತ್ ಅವರ ಲುಕ್ ರಿವೀಲ್ ಮಾಡಲಾಗಿದೆ.

‘ಕೆಡಿ’ ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಅವರು ಈ ಚಿತ್ರದಲ್ಲಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಸರಿಯಾದ ರೀತಿಯಲ್ಲಿ ಠಕ್ಕರ್ ಕೊಡೋ ಪಾತ್ರದಲ್ಲಿ ಸಂಜಯ್ ದತ್ ನಟಿಸಲಿದ್ದಾರೆ. ಈ ಸಿನಿಮಾ ರೆಟ್ರೋ ಕಥೆಯನ್ನು ಹೊಂದಿದೆ ಎನ್ನಲಾಗಿದೆ. ಹೀಗಾಗಿ, ಅದೇ ರೀತಿಯಲ್ಲಿ ಸಿನಿಮಾದ ಲುಕ್ ರಿವೀಲ್ ಮಾಡಲಾಗಿದೆ.

ಈ ಪೋಸ್ಟರ್​ನಲ್ಲಿ ಸಂಜಯ್ ದತ್ ಅವರು ರೆಟ್ರೋ ಕಾರಿನ ಮುಂದೆ ನಿಂತಿದ್ದಾರೆ. ಅವರ ಹಿಂಭಾಗದಲ್ಲಿ ಇರೋ ಎಲ್ಲಾ ಮನೆಗಳು ಹಳೆಯ ಕಾಲದ ಮನೆಗಳ ರೀತಿಯಲ್ಲೇ ಇವೆ. ಈ ಮೂಲಕ ಸಿನಿಮಾದ ಕಥೆ ಸಾಗೋದು ಹಳೆಯ ಕಾಲದಲ್ಲಿ ಅನ್ನೋದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಸ್ಕ್ರಿಪ್ಟ್​ನಲ್ಲಿ ಗೊಂದಲ; ಮೂರನೇ ಪಾರ್ಟ್​ನಿಂದ ಹೊರ ನಡೆದ ಸಂಜಯ್ ದತ್

ಈ ಚಿತ್ರದಲ್ಲಿ ಸಂಜಯ್ ದತ್ ಅವರದ್ದು ಪೊಲೀಸ್ ಪಾತ್ರವೇ ಎನ್ನುವ ಪ್ರಶ್ನೆ ಮೂಡಿದೆ. ಏಕೆಂದರೆ ಅವರ ಕೈಯಲ್ಲಿ ಲಾಟಿ ಇದೆ. ತಲೆ ಮೇಲೆ ಪೊಲೀಸ್ ಕ್ಯಾಪ್ ಇದೆ. ಅವರು ಉದ್ದನೆಯ ಕೂದಲು ಬಿಟ್ಟಿದ್ದಾರೆ. ಧಾಕ್ ದೇವ್ ಎಂಬುದು ಸಂಜಯ್ ಪಾತ್ರದ ಹೆಸರು. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ಈ ವರ್ಷವೇ ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ