AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್​ ದತ್​ಗೆ ಯುಎಇ ಸರ್ಕಾರದಿಂದ ಸಿಕ್ತು ಗೋಲ್ಡನ್​ ವೀಸಾ; ಇದರಿಂದ ಸಿಗೋ ಸವಲತ್ತುಗಳೇನು ಗೊತ್ತಾ?

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಸಂಜಯ್​ ದತ್​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ.

ಸಂಜಯ್​ ದತ್​ಗೆ ಯುಎಇ ಸರ್ಕಾರದಿಂದ ಸಿಕ್ತು ಗೋಲ್ಡನ್​ ವೀಸಾ; ಇದರಿಂದ ಸಿಗೋ ಸವಲತ್ತುಗಳೇನು ಗೊತ್ತಾ?
ಸಂಜಯ್ ದತ್​ ಗೋಲ್ಡನ್​ ವೀಸಾ ಪಡೆದರು
ರಾಜೇಶ್ ದುಗ್ಗುಮನೆ
|

Updated on: May 26, 2021 | 8:11 PM

Share

ಬಾಲಿವುಡ್​ ನಟ ಸಂಜಯ್​ ದತ್​ ಅವರಿಗೆ ಯನೈಟೆಡ್​​ ಅರಬ್​ ಎಮಿರೇಟ್ಸ್​ (ಯುಎಇ) ಸರ್ಕಾರ ಗೋಲ್ಡನ್​ ವೀಸಾ ನೀಡಿದೆ. ಈ ಫಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರಿಗೆ ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಸಂಜಯ್​ ದತ್​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ.

ಯುಎಇ ಪ್ರಧಾನ ಮಂತ್ರಿ ಹಾಗೂ ಉಪಾಧ್ಯಕ್ಷ ಶೇಖ್​ ಮೊಹ್ಮದ್​ ಬಿನ್​ ರಷೀದ್​ ಅಲ್​ ಮಕ್ತೌಮ್​ 10 ವರ್ಷಗಳ ಗೋಲ್ಡನ್​ ವೀಸಾ ನೀಡಲು ಕಳೆದ ಅಕ್ಟೋಬರ್​ ತಿಂಗಳಲ್ಲಿ ಅನುಮತಿ ನೀಡಿದ್ದರು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

 ಏನಿದು ಗೋಲ್ಡನ್​ ವೀಸಾ?

ಬೇರೆ ರಾಷ್ಟ್ರದ ಆಯ್ದ ವ್ಯಕ್ತಿಗಳಿಗೆ ಯುಎಇ ಗೋಲ್ಡನ್​ ವೀಸಾ​ ನೀಡುತ್ತದೆ. ಇದನ್ನು ಪಡೆದವರು ಯುಎಇಯಲ್ಲಿ ಯಾವುದೇ ವಿಶೇಷ ಒಪ್ಪಿಗೆ ಇಲ್ಲದೆ, ಬದುಕ ಬಹುದು, ಕೆಲಸ ಮಾಡಬಹುದು, ಉದ್ಯಮ ನಡೆಸಬಹುದು. ಯುಎಇಯಲ್ಲಿನ ಕಂಪೆನಿ ಮೇಲೆ ಶೇ. 100ರಷ್ಟು ಒಡೆತನ ಹೊಂದುವ ಅವಕಾಶ ಸಿಗಲಿದೆ. ಈ ಅವಕಾಶ ಈ ಮೊದಲು ಇರಲಿಲ್ಲ.

 ‘ಕೆಜಿಎಫ್​ 2’ನಲ್ಲಿ ಸಂಜಯ್​ ದತ್​

ಸಂಜಯ್​ ದತ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮುಖ್ಯ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 13ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ಮುಂದೂಡಲ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಸ್ಪಷ್ಟ ಚಿತ್ರಣ ಸಿಗಲಿದೆ. ಯಶ್​ ಮುಖ್ಯಭೂಮಿಕೆಯಲ್ಲಿದ್ದು, ಪ್ರಶಾಂತ್​ ನೀಲ್​ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಸಂಜಯ್​ ದತ್​ ಮಗಳು ತ್ರಿಶಲಾ ಬಾಯ್​ ಫ್ರೆಂಡ್​ ಸತ್ತಿದ್ದು ಹೇಗೆ? ಸ್ಟಾರ್ ಪುತ್ರಿಗೆ ಕಿರಿಕಿರಿ ತಂದ ಪ್ರಶ್ನೆ!

ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ