AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್​ ದತ್​ಗೆ ಯುಎಇ ಸರ್ಕಾರದಿಂದ ಸಿಕ್ತು ಗೋಲ್ಡನ್​ ವೀಸಾ; ಇದರಿಂದ ಸಿಗೋ ಸವಲತ್ತುಗಳೇನು ಗೊತ್ತಾ?

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಸಂಜಯ್​ ದತ್​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ.

ಸಂಜಯ್​ ದತ್​ಗೆ ಯುಎಇ ಸರ್ಕಾರದಿಂದ ಸಿಕ್ತು ಗೋಲ್ಡನ್​ ವೀಸಾ; ಇದರಿಂದ ಸಿಗೋ ಸವಲತ್ತುಗಳೇನು ಗೊತ್ತಾ?
ಸಂಜಯ್ ದತ್​ ಗೋಲ್ಡನ್​ ವೀಸಾ ಪಡೆದರು
ರಾಜೇಶ್ ದುಗ್ಗುಮನೆ
|

Updated on: May 26, 2021 | 8:11 PM

Share

ಬಾಲಿವುಡ್​ ನಟ ಸಂಜಯ್​ ದತ್​ ಅವರಿಗೆ ಯನೈಟೆಡ್​​ ಅರಬ್​ ಎಮಿರೇಟ್ಸ್​ (ಯುಎಇ) ಸರ್ಕಾರ ಗೋಲ್ಡನ್​ ವೀಸಾ ನೀಡಿದೆ. ಈ ಫಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರಿಗೆ ಗೋಲ್ಡನ್​ ವೀಸಾ ಸಿಕ್ಕಿರುವುದಕ್ಕೆ ಸಾಕಷ್ಟು ಜನರು ಶುಭಾಶಯ ಕೋರಿದ್ದಾರೆ.

ಗೋಲ್ಡನ್​ ವೀಸಾ ಪಡೆದುಕೊಂಡಿರುವ ಫೋಟೋ ಹಂಚಿಕೊಂಡಿರುವ ಸಂಜಯ್​ ದತ್​, ಆ ಬಗ್ಗೆ ಖುಷಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಅಲ್ಲಿನ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಹೇಳಿದ್ದಾರೆ.

ಯುಎಇ ಪ್ರಧಾನ ಮಂತ್ರಿ ಹಾಗೂ ಉಪಾಧ್ಯಕ್ಷ ಶೇಖ್​ ಮೊಹ್ಮದ್​ ಬಿನ್​ ರಷೀದ್​ ಅಲ್​ ಮಕ್ತೌಮ್​ 10 ವರ್ಷಗಳ ಗೋಲ್ಡನ್​ ವೀಸಾ ನೀಡಲು ಕಳೆದ ಅಕ್ಟೋಬರ್​ ತಿಂಗಳಲ್ಲಿ ಅನುಮತಿ ನೀಡಿದ್ದರು. ಈ ಮೂಲಕ ದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದರು.

 ಏನಿದು ಗೋಲ್ಡನ್​ ವೀಸಾ?

ಬೇರೆ ರಾಷ್ಟ್ರದ ಆಯ್ದ ವ್ಯಕ್ತಿಗಳಿಗೆ ಯುಎಇ ಗೋಲ್ಡನ್​ ವೀಸಾ​ ನೀಡುತ್ತದೆ. ಇದನ್ನು ಪಡೆದವರು ಯುಎಇಯಲ್ಲಿ ಯಾವುದೇ ವಿಶೇಷ ಒಪ್ಪಿಗೆ ಇಲ್ಲದೆ, ಬದುಕ ಬಹುದು, ಕೆಲಸ ಮಾಡಬಹುದು, ಉದ್ಯಮ ನಡೆಸಬಹುದು. ಯುಎಇಯಲ್ಲಿನ ಕಂಪೆನಿ ಮೇಲೆ ಶೇ. 100ರಷ್ಟು ಒಡೆತನ ಹೊಂದುವ ಅವಕಾಶ ಸಿಗಲಿದೆ. ಈ ಅವಕಾಶ ಈ ಮೊದಲು ಇರಲಿಲ್ಲ.

 ‘ಕೆಜಿಎಫ್​ 2’ನಲ್ಲಿ ಸಂಜಯ್​ ದತ್​

ಸಂಜಯ್​ ದತ್​ ‘ಕೆಜಿಎಫ್​ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮುಖ್ಯ ವಿಲನ್​ ಆಗಿ ಕಾಣಿಸಿಕೊಳ್ಳುತ್ತಿದ್ದು ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜುಲೈ 13ರಂದು ಸಿನಿಮಾ ತೆರೆಗೆ ಬರುತ್ತಿದೆ. ಆದರೆ, ಕೊವಿಡ್​ ಕಾರಣದಿಂದ ಸಿನಿಮಾ ಮುಂದೂಡಲ್ಪಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಶೀಘ್ರವೇ ಸ್ಪಷ್ಟ ಚಿತ್ರಣ ಸಿಗಲಿದೆ. ಯಶ್​ ಮುಖ್ಯಭೂಮಿಕೆಯಲ್ಲಿದ್ದು, ಪ್ರಶಾಂತ್​ ನೀಲ್​ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಸಂಜಯ್​ ದತ್​ ಮಗಳು ತ್ರಿಶಲಾ ಬಾಯ್​ ಫ್ರೆಂಡ್​ ಸತ್ತಿದ್ದು ಹೇಗೆ? ಸ್ಟಾರ್ ಪುತ್ರಿಗೆ ಕಿರಿಕಿರಿ ತಂದ ಪ್ರಶ್ನೆ!

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ