AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​? ನೆನಪಾಗುತ್ತಿದೆ ‘ಕೆಜಿಎಫ್​ 2’ ಸೂತ್ರ

ಸೌತ್​ ಸಿನಿಮಾ ಮಂದಿಗೆ ಸಂಜಯ್​ ದತ್​ ಅವರು ಈಗ ಫೇವರಿಟ್​ ನಟನಾಗಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಅಧೀರನ ಪಾತ್ರವನ್ನು ಮಾಡಿದ ಬಳಿಕ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಂಜಯ್​ ದತ್​ ಅವರ ಬೇಡಿಕೆ ಹೆಚ್ಚಾಗಿದೆ. ಈಗ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾದಲ್ಲೂ ಸಂಜಯ್​ ದತ್​ ನಟಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​? ನೆನಪಾಗುತ್ತಿದೆ ‘ಕೆಜಿಎಫ್​ 2’ ಸೂತ್ರ
ಸಂಜಯ್​ ದತ್​, ಅಲ್ಲು ಅರ್ಜುನ್​
Follow us
ಮದನ್​ ಕುಮಾರ್​
|

Updated on: Mar 07, 2024 | 8:54 PM

ದಿನ ಕಳೆದಂತೆಲ್ಲ ‘ಪುಷ್ಪ 2’ (Pushpa 2) ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಲೇ ಇದೆ. ‘ಪುಷ್ಪ’ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದರಿಂದ ಈಗ ಸೀಕ್ವೆಲ್​ ಮೇಲೆ ಹೈಪ್​ ಹೆಚ್ಚಾಗಿದೆ. ಹೇಗಾದರೂ ಮಾಡಿ ಈ ಸಿನಿಮಾದ ಕಲೆಕ್ಷನ್​ ಅನ್ನು ಸಾವಿರ ಕೋಟಿ ರೂಪಾಯಿ ಮುಟ್ಟಿಸಬೇಕು ಎಂಬ ಗುರಿ ಚಿತ್ರತಂಡಕ್ಕೆ ಇದ್ದಂತಿದೆ. ಯಾಕೆಂದರೆ, 1000 ಕೋಟಿ ರೂಪಾಯಿ ಎಂಬುದು ಈಗಿನ ಹೊಸ ಮೈಲಿಗಲ್ಲು. ಅಲ್ಲು ಅರ್ಜುನ್ (Allu Arjun)​ ಅಭಿನಯದ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​ ಮುಂತಾದವರು ನಟಿಸುತ್ತಿದ್ದಾರೆ. ‘ಪುಷ್ಪ 2’ ಬಳಗಕ್ಕೆ ಹೊಸ ಪಾತ್ರಗಳು ಎಂಟ್ರಿ ಆಗುವ ಸಾಧ್ಯತೆ ಇದೆ. ವರದಿಗಳ ಪ್ರಕಾರ ಸಂಜಯ್​ ದತ್​ (Sanjay Dutt) ಕೂಡ ಈ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆಗುವ ನಿರೀಕ್ಷೆ ಇದೆ.

ಮೊದಲಿನಿಂದಲೂ ‘ಪುಷ್ಪ’ ಮತ್ತು ‘ಕೆಜಿಎಫ್​’ ತಂಡದ ನಡುವೆ ಹೋಲಿಕೆ ಮತ್ತು ಸಾಮ್ಯತೆ ಕಾಣಿಸುತ್ತಿದೆ. ‘ಕೆಜಿಎಫ್​’ ಗೆದ್ದ ಬಳಿಕ ‘ಕೆಜಿಎಫ್​ 2’ ಸಿನಿಮಾಗೆ ಬಾಲಿವುಡ್​​ನ ಕಲಾವಿದರನ್ನು ಸೇರಿಸಿಕೊಳ್ಳಲಾಗಿತ್ತು. ರವೀನಾ ಟಂಡನ್​, ಸಂಜಯ್ ದತ್​ ಅವರ ಆಗಮನದಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಮೆರುಗು ಹೆಚ್ಚಿತು. ಈಗ ‘ಪುಷ್ಪ 2’ ಚಿತ್ರತಂಡ ಕೂಡ ಅದೇ ಸೂತ್ರವನ್ನು ಅನುಸರಿಸಲಿದೆಯಾ ಎಂಬ ಅನುಮಾನ ಮೂಡಿದೆ.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​ ನಟಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕಂತೂ ಇದು ಕೇವಲ ಅಂತೆ ಕಂತೆಯ ಹಂತದಲ್ಲೇ ಇದೆ. ಒಂದು ವೇಳೆ ಸಂಜಯ್​ ದತ್​ ಅವರು ‘ಪುಷ್ಪ 2’ ಸಿನಿಮಾದ ಪಾತ್ರವರ್ಗಕ್ಕೆ ಸೇರಿಕೊಂಡರೆ ಈ ಚಿತ್ರತಂಡದವರು ‘ಕೆಜಿಎಫ್​ 2’ ಸೂತ್ರವನ್ನು ಫಾಲೋ ಮಾಡುತ್ತಿರುವುದು ಖಚಿತ ಆಗಲಿದೆ.

ಇದನ್ನೂ ಓದಿ: ಆಗಸ್ಟ್​ 15ರ ಅಖಾಡದಲ್ಲಿ ‘ಪುಷ್ಪ 2’ ಎದುರು ಘಟಾನುಘಟಿ ನಟರ ಪೈಪೋಟಿ?

ಖ್ಯಾತ ಡೈರೆಕ್ಟರ್​ ಸುಕುಮಾರ್​ ಅವರ ನಿರ್ದೇಶನದಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿದೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದು ಬಹುನಿರೀಕ್ಷಿತ ಸಿನಿಮಾ ಆದ್ದರಿಂದ ಹತ್ತು ಹಲವು ಬಗೆಯ ಗಾಸಿಪ್​ಗಳು ಹುಟ್ಟಿಕೊಳ್ಳುತ್ತಿವೆ. ಯಾವುದನ್ನು ನಂಬುವುದು, ಯಾವುದನ್ನು ಬಿಡುವುದು ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ. ಈ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ದೇವಿ ಶ್ರೀ ಪ್ರಸಾದ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ‘ಪುಷ್ಪ 2’ ನಿರ್ಮಾಪಕರು

ಸಂಜಯ್​ ದತ್​ ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್​ ಬೇಡಿಕೆ ಸೃಷ್ಟಿ ಆಗಿದೆ. ಕನ್ನಡದಲ್ಲಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲೂ ಸಂಜಯ್​ ದತ್​ ಅವರಿಗೆ ಒಂದು ಪ್ರಮುಖ ಪಾತ್ರ ಇದೆ. ಪ್ರೇಮ್​ ನಿರ್ದೇಶನ ಮಾಡುತ್ತಿರುವ ಆ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ