AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​? ನೆನಪಾಗುತ್ತಿದೆ ‘ಕೆಜಿಎಫ್​ 2’ ಸೂತ್ರ

ಸೌತ್​ ಸಿನಿಮಾ ಮಂದಿಗೆ ಸಂಜಯ್​ ದತ್​ ಅವರು ಈಗ ಫೇವರಿಟ್​ ನಟನಾಗಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಅಧೀರನ ಪಾತ್ರವನ್ನು ಮಾಡಿದ ಬಳಿಕ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಂಜಯ್​ ದತ್​ ಅವರ ಬೇಡಿಕೆ ಹೆಚ್ಚಾಗಿದೆ. ಈಗ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ 2’ ಸಿನಿಮಾದಲ್ಲೂ ಸಂಜಯ್​ ದತ್​ ನಟಿಸುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​? ನೆನಪಾಗುತ್ತಿದೆ ‘ಕೆಜಿಎಫ್​ 2’ ಸೂತ್ರ
ಸಂಜಯ್​ ದತ್​, ಅಲ್ಲು ಅರ್ಜುನ್​
ಮದನ್​ ಕುಮಾರ್​
|

Updated on: Mar 07, 2024 | 8:54 PM

Share

ದಿನ ಕಳೆದಂತೆಲ್ಲ ‘ಪುಷ್ಪ 2’ (Pushpa 2) ಸಿನಿಮಾದ ಮೇಲಿನ ನಿರೀಕ್ಷೆ ಜಾಸ್ತಿ ಆಗುತ್ತಲೇ ಇದೆ. ‘ಪುಷ್ಪ’ ಚಿತ್ರ ಬ್ಲಾಕ್​ ಬಸ್ಟರ್​ ಹಿಟ್​ ಆಗಿದ್ದರಿಂದ ಈಗ ಸೀಕ್ವೆಲ್​ ಮೇಲೆ ಹೈಪ್​ ಹೆಚ್ಚಾಗಿದೆ. ಹೇಗಾದರೂ ಮಾಡಿ ಈ ಸಿನಿಮಾದ ಕಲೆಕ್ಷನ್​ ಅನ್ನು ಸಾವಿರ ಕೋಟಿ ರೂಪಾಯಿ ಮುಟ್ಟಿಸಬೇಕು ಎಂಬ ಗುರಿ ಚಿತ್ರತಂಡಕ್ಕೆ ಇದ್ದಂತಿದೆ. ಯಾಕೆಂದರೆ, 1000 ಕೋಟಿ ರೂಪಾಯಿ ಎಂಬುದು ಈಗಿನ ಹೊಸ ಮೈಲಿಗಲ್ಲು. ಅಲ್ಲು ಅರ್ಜುನ್ (Allu Arjun)​ ಅಭಿನಯದ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಫಹಾದ್​ ಫಾಸಿಲ್​ ಮುಂತಾದವರು ನಟಿಸುತ್ತಿದ್ದಾರೆ. ‘ಪುಷ್ಪ 2’ ಬಳಗಕ್ಕೆ ಹೊಸ ಪಾತ್ರಗಳು ಎಂಟ್ರಿ ಆಗುವ ಸಾಧ್ಯತೆ ಇದೆ. ವರದಿಗಳ ಪ್ರಕಾರ ಸಂಜಯ್​ ದತ್​ (Sanjay Dutt) ಕೂಡ ಈ ಸಿನಿಮಾದ ಪಾತ್ರವರ್ಗಕ್ಕೆ ಸೇರ್ಪಡೆ ಆಗುವ ನಿರೀಕ್ಷೆ ಇದೆ.

ಮೊದಲಿನಿಂದಲೂ ‘ಪುಷ್ಪ’ ಮತ್ತು ‘ಕೆಜಿಎಫ್​’ ತಂಡದ ನಡುವೆ ಹೋಲಿಕೆ ಮತ್ತು ಸಾಮ್ಯತೆ ಕಾಣಿಸುತ್ತಿದೆ. ‘ಕೆಜಿಎಫ್​’ ಗೆದ್ದ ಬಳಿಕ ‘ಕೆಜಿಎಫ್​ 2’ ಸಿನಿಮಾಗೆ ಬಾಲಿವುಡ್​​ನ ಕಲಾವಿದರನ್ನು ಸೇರಿಸಿಕೊಳ್ಳಲಾಗಿತ್ತು. ರವೀನಾ ಟಂಡನ್​, ಸಂಜಯ್ ದತ್​ ಅವರ ಆಗಮನದಿಂದ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಮೆರುಗು ಹೆಚ್ಚಿತು. ಈಗ ‘ಪುಷ್ಪ 2’ ಚಿತ್ರತಂಡ ಕೂಡ ಅದೇ ಸೂತ್ರವನ್ನು ಅನುಸರಿಸಲಿದೆಯಾ ಎಂಬ ಅನುಮಾನ ಮೂಡಿದೆ.

‘ಪುಷ್ಪ 2’ ಸಿನಿಮಾದಲ್ಲಿ ಸಂಜಯ್​ ದತ್​ ನಟಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಸದ್ಯಕ್ಕಂತೂ ಇದು ಕೇವಲ ಅಂತೆ ಕಂತೆಯ ಹಂತದಲ್ಲೇ ಇದೆ. ಒಂದು ವೇಳೆ ಸಂಜಯ್​ ದತ್​ ಅವರು ‘ಪುಷ್ಪ 2’ ಸಿನಿಮಾದ ಪಾತ್ರವರ್ಗಕ್ಕೆ ಸೇರಿಕೊಂಡರೆ ಈ ಚಿತ್ರತಂಡದವರು ‘ಕೆಜಿಎಫ್​ 2’ ಸೂತ್ರವನ್ನು ಫಾಲೋ ಮಾಡುತ್ತಿರುವುದು ಖಚಿತ ಆಗಲಿದೆ.

ಇದನ್ನೂ ಓದಿ: ಆಗಸ್ಟ್​ 15ರ ಅಖಾಡದಲ್ಲಿ ‘ಪುಷ್ಪ 2’ ಎದುರು ಘಟಾನುಘಟಿ ನಟರ ಪೈಪೋಟಿ?

ಖ್ಯಾತ ಡೈರೆಕ್ಟರ್​ ಸುಕುಮಾರ್​ ಅವರ ನಿರ್ದೇಶನದಲ್ಲಿ ‘ಪುಷ್ಪ 2’ ಸಿನಿಮಾ ಮೂಡಿಬರುತ್ತಿದೆ. ಆಗಸ್ಟ್​ 15ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದು ಬಹುನಿರೀಕ್ಷಿತ ಸಿನಿಮಾ ಆದ್ದರಿಂದ ಹತ್ತು ಹಲವು ಬಗೆಯ ಗಾಸಿಪ್​ಗಳು ಹುಟ್ಟಿಕೊಳ್ಳುತ್ತಿವೆ. ಯಾವುದನ್ನು ನಂಬುವುದು, ಯಾವುದನ್ನು ಬಿಡುವುದು ಎಂಬ ಗೊಂದಲ ಅಭಿಮಾನಿಗಳಲ್ಲಿ ಮೂಡಿದೆ. ಈ ಸಿನಿಮಾಗೆ ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಬಂಡವಾಳ ಹೂಡುತ್ತಿದೆ. ದೇವಿ ಶ್ರೀ ಪ್ರಸಾದ್​ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ಅರ್ಧ ಗಂಟೆಯ ದೃಶ್ಯಕ್ಕೆ 50 ಕೋಟಿ ರೂಪಾಯಿ ಸುರಿದ ‘ಪುಷ್ಪ 2’ ನಿರ್ಮಾಪಕರು

ಸಂಜಯ್​ ದತ್​ ಅವರಿಗೆ ದಕ್ಷಿಣ ಭಾರತದಲ್ಲಿ ಸಖತ್​ ಬೇಡಿಕೆ ಸೃಷ್ಟಿ ಆಗಿದೆ. ಕನ್ನಡದಲ್ಲಿ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲೂ ಸಂಜಯ್​ ದತ್​ ಅವರಿಗೆ ಒಂದು ಪ್ರಮುಖ ಪಾತ್ರ ಇದೆ. ಪ್ರೇಮ್​ ನಿರ್ದೇಶನ ಮಾಡುತ್ತಿರುವ ಆ ಸಿನಿಮಾಗಾಗಿ ಫ್ಯಾನ್ಸ್​ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ