AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಸಿನಿಮಾಗೆ ಕೆಜಿಎಫ್​ ವಿಲನ್​; ಟಾಲಿವುಡ್​ ಅಂಗಳದಿಂದ ಹೊಸ ಅಪ್​ಡೇಟ್​

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಈಗ ಪಾರ್ಟ್​ 2 ಸಿದ್ಧಗೊಂಡಿದ್ದು, ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಸಿನಿಮಾ ರಿಲೀಸ್​ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.

ಮಹೇಶ್​ ಬಾಬು ಸಿನಿಮಾಗೆ ಕೆಜಿಎಫ್​ ವಿಲನ್​; ಟಾಲಿವುಡ್​ ಅಂಗಳದಿಂದ ಹೊಸ ಅಪ್​ಡೇಟ್​
ಮಹೇಶ್​ ಬಾಬು
TV9 Web
| Edited By: |

Updated on:Aug 11, 2021 | 4:22 PM

Share

ಮಹೇಶ್​ ಬಾಬು ಅವರು ಸದ್ಯ, ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟೀಸರ್​ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು. ಈಗ ಅವರು ತಮ್ಮ ಮುಂದಿನ ಸಿನಿಮಾಗಾಗಿ ಸ್ಟಾರ್​ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಕೆಜಿಎಫ್​ ವಿಲನ್​ ಎಂಟ್ರಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಈಗ ಪಾರ್ಟ್​ 2 ಸಿದ್ಧಗೊಂಡಿದ್ದು, ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಸಿನಿಮಾ ರಿಲೀಸ್​ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ. ಈ ಚಿತ್ರದಲ್ಲಿ ಅಧೀರನಾಗಿ ಸಂಜಯ್​ ದತ್​ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಪ್ರಮುಖ ವಿಲನ್​ ಅಧೀರನೇ. ಈಗ ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಸಂಜಯ್​ ದತ್​ ಅವರನ್ನು ಕರೆತರಲು ಮಾತುಕತೆ ನಡೆದಿದೆ ಎನ್ನಲಾಗಿದೆ.

ಮಹೇಶ್​ ಬಾಬು ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ಗಳು ಇರುತ್ತವೆ. ಸ್ಟಾರ್​ ವಿಲನ್​ ಕರೆ ತಂದರೆ ಹೀರೋ ಪಾತ್ರಕ್ಕೆ ತೂಕ ಬರಲಿದೆ ಅನ್ನೋದು ಚಿತ್ರತಂಡದ ಆಲೋಚನೆ. ಈ ಕಾರಣಕ್ಕೆ ನಿರ್ದೇಶಕ ತ್ರಿವಿಕ್ರಮ್​ ಅವರು ಸಂಜಯ್​ ದತ್​ ಜತೆ ಮಾತುಕತೆ ನಡೆಸಿದ್ದಾರೆ.

ಸಂಜಯ್​ ದತ್​ಗೆ ಈ ಸಿನಿಮಾದ ಕಥೆ ಇಷ್ಟ ಆಗಿದೆ ಎನ್ನುತ್ತಿವೆ ಮೂಲಗಳು. ಹೀಗಾಗಿ, ಅವರು ವಿಲನ್​ ಆಗೋಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ. ಸಂಜಯ್​ ದತ್​ಗೆ ಇತ್ತೀಚೆಗೆ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಆರಂಭದಲ್ಲೇ ಇದು ಪತ್ತೆಯಾದ ಕಾರಣ ಸಂಜಯ್​ ದತ್​ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸದ್ಯ, ಅವರು ಬೇರೆಬೇರೆ ಪ್ರಾಜೆಕ್ಟ್​​ಗಳಲ್ಲಿ ಬ್ಯುಸಿ ಇದ್ದಾರೆ.

ಕೆಜಿಎಫ್​ 2 ಸಿನಿಮಾ ಮೇಲೆ ದೊಡ್ಟಮಟ್ಟದ ನೀರಿಕ್ಷೆ ಇದೆ. ಸಂಜಯ್​ ದತ್​ ನಿರ್ವಹಣೆ ಮಾಡುತ್ತಿರುವ ಅಧೀರನ ಪಾತ್ರದ ಕೆಲ ಪೋಸ್ಟರ್​ಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇದರಿಂದ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.  ಮಹೇಶ್​ ಬಾಬು ಹಾಗೂ ತ್ರಿವಿಕ್ರಮ್​ ಅವರು ಈ ಮೊದಲು ‘ಅತಡು’ ಮತ್ತು ‘ಖಲೇಜಾ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ.  ಈಗ ಮೂರನೇ ಬಾರಿಗೆ ಇಬ್ಬರೂ ಒಂದಾಗುತ್ತಿದ್ದಾರೆ.

ಇದನ್ನೂ ಓದಿ: 

Mahesh Babu: 46ನೇ ವಸಂತಕ್ಕೆ ಕಾಲಿಟ್ಟ ಪ್ರಿನ್ಸ್​ ಮಹೇಶ್​ ಬಾಬುಗೆ ‘ಬ್ಲಾಸ್ಟರ್’​ ಉಡುಗೊರೆ; ಏನಿದು?

Published On - 4:18 pm, Wed, 11 August 21

ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ