AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಸಿನಿಮಾಗೆ ಕೆಜಿಎಫ್​ ವಿಲನ್​; ಟಾಲಿವುಡ್​ ಅಂಗಳದಿಂದ ಹೊಸ ಅಪ್​ಡೇಟ್​

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಈಗ ಪಾರ್ಟ್​ 2 ಸಿದ್ಧಗೊಂಡಿದ್ದು, ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಸಿನಿಮಾ ರಿಲೀಸ್​ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ.

ಮಹೇಶ್​ ಬಾಬು ಸಿನಿಮಾಗೆ ಕೆಜಿಎಫ್​ ವಿಲನ್​; ಟಾಲಿವುಡ್​ ಅಂಗಳದಿಂದ ಹೊಸ ಅಪ್​ಡೇಟ್​
ಮಹೇಶ್​ ಬಾಬು
TV9 Web
| Edited By: |

Updated on:Aug 11, 2021 | 4:22 PM

Share

ಮಹೇಶ್​ ಬಾಬು ಅವರು ಸದ್ಯ, ‘ಸರ್ಕಾರು ವಾರಿ ಪಾಟ’ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ರಿಲೀಸ್​ ಆಗಿದ್ದ ಸಿನಿಮಾ ಟೀಸರ್​ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿತ್ತು. ಈಗ ಅವರು ತಮ್ಮ ಮುಂದಿನ ಸಿನಿಮಾಗಾಗಿ ಸ್ಟಾರ್​ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ ಕೆಜಿಎಫ್​ ವಿಲನ್​ ಎಂಟ್ರಿ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್’​ ಸಿನಿಮಾ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿತ್ತು. ಈಗ ಪಾರ್ಟ್​ 2 ಸಿದ್ಧಗೊಂಡಿದ್ದು, ಕೊನೆಯ ಹಂತದ ಕೆಲಸಗಳು ನಡೆಯುತ್ತಿವೆ. ಸಿನಿಮಾ ರಿಲೀಸ್​ ದಿನಾಂಕ ಇನ್ನಷ್ಟೇ ಗೊತ್ತಾಗಬೇಕಿದೆ. ಈ ಚಿತ್ರದಲ್ಲಿ ಅಧೀರನಾಗಿ ಸಂಜಯ್​ ದತ್​ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಪ್ರಮುಖ ವಿಲನ್​ ಅಧೀರನೇ. ಈಗ ಮಹೇಶ್​ ಬಾಬು ಮುಂದಿನ ಚಿತ್ರಕ್ಕೆ ಸಂಜಯ್​ ದತ್​ ಅವರನ್ನು ಕರೆತರಲು ಮಾತುಕತೆ ನಡೆದಿದೆ ಎನ್ನಲಾಗಿದೆ.

ಮಹೇಶ್​ ಬಾಬು ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ಗಳು ಇರುತ್ತವೆ. ಸ್ಟಾರ್​ ವಿಲನ್​ ಕರೆ ತಂದರೆ ಹೀರೋ ಪಾತ್ರಕ್ಕೆ ತೂಕ ಬರಲಿದೆ ಅನ್ನೋದು ಚಿತ್ರತಂಡದ ಆಲೋಚನೆ. ಈ ಕಾರಣಕ್ಕೆ ನಿರ್ದೇಶಕ ತ್ರಿವಿಕ್ರಮ್​ ಅವರು ಸಂಜಯ್​ ದತ್​ ಜತೆ ಮಾತುಕತೆ ನಡೆಸಿದ್ದಾರೆ.

ಸಂಜಯ್​ ದತ್​ಗೆ ಈ ಸಿನಿಮಾದ ಕಥೆ ಇಷ್ಟ ಆಗಿದೆ ಎನ್ನುತ್ತಿವೆ ಮೂಲಗಳು. ಹೀಗಾಗಿ, ಅವರು ವಿಲನ್​ ಆಗೋಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ. ಸಂಜಯ್​ ದತ್​ಗೆ ಇತ್ತೀಚೆಗೆ ಶ್ವಾಸಕೋಶದ ಕ್ಯಾನ್ಸರ್ ಕಾಣಿಸಿಕೊಂಡಿತ್ತು. ಆರಂಭದಲ್ಲೇ ಇದು ಪತ್ತೆಯಾದ ಕಾರಣ ಸಂಜಯ್​ ದತ್​ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸದ್ಯ, ಅವರು ಬೇರೆಬೇರೆ ಪ್ರಾಜೆಕ್ಟ್​​ಗಳಲ್ಲಿ ಬ್ಯುಸಿ ಇದ್ದಾರೆ.

ಕೆಜಿಎಫ್​ 2 ಸಿನಿಮಾ ಮೇಲೆ ದೊಡ್ಟಮಟ್ಟದ ನೀರಿಕ್ಷೆ ಇದೆ. ಸಂಜಯ್​ ದತ್​ ನಿರ್ವಹಣೆ ಮಾಡುತ್ತಿರುವ ಅಧೀರನ ಪಾತ್ರದ ಕೆಲ ಪೋಸ್ಟರ್​ಗಳನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಇದರಿಂದ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.  ಮಹೇಶ್​ ಬಾಬು ಹಾಗೂ ತ್ರಿವಿಕ್ರಮ್​ ಅವರು ಈ ಮೊದಲು ‘ಅತಡು’ ಮತ್ತು ‘ಖಲೇಜಾ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದಾರೆ.  ಈಗ ಮೂರನೇ ಬಾರಿಗೆ ಇಬ್ಬರೂ ಒಂದಾಗುತ್ತಿದ್ದಾರೆ.

ಇದನ್ನೂ ಓದಿ: 

Mahesh Babu: 46ನೇ ವಸಂತಕ್ಕೆ ಕಾಲಿಟ್ಟ ಪ್ರಿನ್ಸ್​ ಮಹೇಶ್​ ಬಾಬುಗೆ ‘ಬ್ಲಾಸ್ಟರ್’​ ಉಡುಗೊರೆ; ಏನಿದು?

Published On - 4:18 pm, Wed, 11 August 21

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ