AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ಜೊತೆಗಿನ ಹೊಸ ಚಿತ್ರಕ್ಕಾಗಿ ಲುಕ್​ ಟೆಸ್ಟ್​ ಮಾಡಿದ ಸಂಜಯ್​ ದತ್​? ವಿಲನ್​ಗೆ ಹೆಚ್ಚಿತು ಬೇಡಿಕೆ

ಬಾಲಿವುಡ್​ನಲ್ಲಿ ಹೀರೋ ಆಗಿ ಮಿಂಚಿದ ಸಂಜಯ್ ದತ್​ ಅವರು ಸೌತ್​ ಸಿನಿಮಾಗಳಲ್ಲಿ ವಿಲನ್​ ಆಗಿ ದೊಡ್ಡ ಹೆಸರು ಮಾಡುತ್ತಿದ್ದಾರೆ. ಈಗ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾದಲ್ಲೂ ಸಂಜಯ್​ ದತ್​ ವಿಲನ್​ ಆಗುತ್ತಿದ್ದು, ಅದಕ್ಕಾಗಿ ಮುಂಬೈನಲ್ಲಿ ಲುಕ್​ ಟೆಸ್ಟ್​ ನಡೆದಿದೆ ಎಂದು ಹೇಳಲಾಗುತ್ತಿದೆ.

ಪ್ರಭಾಸ್ ಜೊತೆಗಿನ ಹೊಸ ಚಿತ್ರಕ್ಕಾಗಿ ಲುಕ್​ ಟೆಸ್ಟ್​ ಮಾಡಿದ ಸಂಜಯ್​ ದತ್​? ವಿಲನ್​ಗೆ ಹೆಚ್ಚಿತು ಬೇಡಿಕೆ
ಸಂಜಯ್​ ದತ್
ಮದನ್​ ಕುಮಾರ್​
|

Updated on: Dec 08, 2023 | 12:21 PM

Share

ಬಾಲಿವುಡ್​ನಲ್ಲಿ ಹೀರೋ ಆಗಿ ಮಿಂಚಿದ ಸಂಜಯ್ ದತ್​ (Sanjay Dutt) ಅವರು ಸೌತ್​ ಸಿನಿಮಾಗಳಲ್ಲಿ ವಿಲನ್​ ಆಗಿ ದೊಡ್ಡ ಹೆಸರು ಮಾಡುತ್ತಿದ್ದಾರೆ. ಈಗ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾದಲ್ಲೂ ಸಂಜಯ್​ ದತ್​ ವಿಲನ್​ ಆಗುತ್ತಿದ್ದು, ಅದಕ್ಕಾಗಿ ಮುಂಬೈನಲ್ಲಿ ಲುಕ್​ ಟೆಸ್ಟ್​ ನಡೆದಿದೆ ಎಂದು ಹೇಳಲಾಗುತ್ತಿದೆ.ನಟ ಸಂಜಯ್​ ದತ್​ ಅವರಿಗೆ ದಕ್ಷಿಣ ಭಾರತದಲ್ಲಿ ಬೇಡಿಕೆ ಹೆಚ್ಚಾಗಿದೆ. ಯಶ್​ ಅಭಿನಯದ ‘ಕೆಜಿಎಫ್: ಚಾಪ್ಟರ್​ 2’ ಮತ್ತು ದಳಪತಿ ವಿಜಯ್​ ನಟನೆಯ ‘ಲಿಯೋ’ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಬಳಿಕ ಸಂಜಯ್​ ದತ್​ ಅವರಿಗೆ ಇದ್ದ ಡಿಮ್ಯಾಂಡ್​ ಜಾಸ್ತಿ ಆಗಿದೆ. ಅದರಲ್ಲೂ, ದಕ್ಷಿಣ ಭಾರತದ ಸಿನಿಮಾಗಳಲ್ಲಿ ಅವರನ್ನು ವಿಲನ್​ ಪಾತ್ರಕ್ಕೆ ಹೆಚ್ಚಾಗಿ ಆಯ್ಕೆ ಮಾಡಲಾಗುತ್ತಿದೆ. ನಿರ್ಮಾಪಕರು ಸಂಜಯ್​ ದತ್​ ಅವರ ಕಾಲ್​ಶೀಟ್​ಗಾಗಿ ಕಾಯುವಂತಾಗಿದೆ. ಈಗ ಅವರು ಪ್ರಭಾಸ್​ (Prabhas) ಅಭಿನಯದ ಹೊಸ ಸಿನಿಮಾದಲ್ಲೂ ವಿಲನ್​ ಪಾತ್ರ ಮಾಡಲಿದ್ದಾರೆ ಎಂಬುದು ಗೊತ್ತಾಗಿದೆ.

ಬಾಲಿವುಡ್​ನಲ್ಲಿ ಹೀರೋ ಆಗಿ ಮಿಂಚಿದ ಸಂಜಯ್ ದತ್​ ಅವರು ಸೌತ್​ ಸಿನಿಮಾಗಳಲ್ಲಿ ವಿಲನ್​ ಆಗಿ ದೊಡ್ಡ ಹೆಸರು ಮಾಡುತ್ತಿದ್ದಾರೆ. ಈಗ ನಿರ್ದೇಶಕ ಮಾರುತಿ ಅವರು ಆ್ಯಕ್ಷನ್​-ಕಟ್​ ಹೇಳುತ್ತಿರುವ ಪ್ಯಾನ್-ಇಂಡಿಯಾ ಸಿನಿಮಾದಲ್ಲೂ ಸಂಜಯ್​ ದತ್​ ವಿಲನ್​ ಆಗುತ್ತಿದ್ದು, ಪ್ರಭಾಸ್​ ಎದುರು ಅವರು ಅಬ್ಬರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂದಹಾಗೆ, ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ತಾತ್ಕಾಲಿಕವಾಗಿ ಇದನ್ನು ‘ರಾಜಾ ಸಾಬ್’ ಎಂದು ಕರೆಯಲಾಗುತ್ತಿದೆ.

ಇದನ್ನೂ ಓದಿ: ಸಂಜಯ್​ ದತ್​ಗೆ ಇತ್ತು ಎನ್​ಕೌಂಟರ್ ಭಯ; ಸಿನಿಮೀಯ ಶೈಲಿಯಲ್ಲೇ ಕೊಲ್ಲುತ್ತಾರೆ ಎಂದುಕೊಂಡಿದ್ರು..

ಈ ಚಿತ್ರದಲ್ಲಿ ನಾಯಕಿಯರಾಗಿ ಮಾಳವಿಕಾ ಮೋಹನನ್, ನಿಧಿ ಅಗರ್ವಾಲ್ ಮತ್ತು ರಿದ್ಧಿ ಕುಮಾರ್ ನಟಿಸುತ್ತಿದ್ದಾರೆ. ಸತ್ಯರಾಜ್ ಮತ್ತು ಜರೀನಾ ವಹಾಬ್ ಮುಂತಾದವರು ಗಮನಾರ್ಹ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಈಗ ಸಂಜಯ್​ ದತ್​ ಕೂಡ ಸೇಪರ್ಡೆ ಆಗಿರುವ ಬಗ್ಗೆ ಸುದ್ದಿ ಹರಿದಾಡಿದೆ. ಇತ್ತೀಚೆಗೆ ಸಂಜಯ್ ದತ್ ಅವರ ಲುಕ್ ಟೆಸ್ಟ್‌ ಮಾಡುವ ಸಲುವಾಗಿ ನಿರ್ದೇಶಕ ಮಾರುತಿ ಮತ್ತು ಅವರ ಆಪ್ತ ಸ್ನೇಹಿತ ಎಸ್‌ಕೆಎನ್ ಅವರು ಮುಂಬೈಗೆ ತೆರಳಿದ್ದರು. ಮುಂಬೈನಲ್ಲಿ ಸಂಜಯ್​ ದತ್​ ಅವರ ಮೇಕ್‌ಓವರ್ ಮಾಡಲಾಗಿದೆ. ಅದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸುವ ರೀತಿಯಲ್ಲಿ ಇದೆ ಎಂದು ಹೇಳಲಾಗುತ್ತಿದೆ.

ಸದ್ಯಕ್ಕೆ ಪ್ರಭಾಸ್ ಅವರು ಹೈದರಾಬಾದ್‌ನಲ್ಲಿ ‘ಕಲ್ಕಿ 2898 AD’ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೇ ‘ಸಲಾರ್​’ ಸಿನಿಮಾದ ಪ್ರಮೋಷನ್​ಗಾಗಿಯೂ ಅವರು ಸಮಯ ಮೀಸಲಿಟ್ಟಿದ್ದಾರೆ. ‘ಸಲಾರ್​’ ಬಿಡುಗಡೆ ಆದ ಬಳಿಕ ಅವರು ನಿರ್ದೇಶಕ ಮಾರುತಿ ಜೊತೆಗಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ