AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sanjay Dutt: ಸಂಜಯ್ ದತ್ ಈಗ ಬಿಗ್ ಬುಲ್; ‘ಡಬಲ್ ಇಸ್ಮಾರ್ಟ್’ಗೆ ಖಡಕ್ ವಿಲನ್

Double iSmart: ಸಂಜಯ್ ದತ್ ‘ಕೆಜಿಎಫ್ 2’ ಚಿತ್ರದಲ್ಲಿ ಅಧೀರನಾಗಿ ಕಾಣಿಸಿಕೊಂಡರು. ಆ ಬಳಿಕ ದಕ್ಷಿಣದಿಂದ ಅವರಿಗೆ ಹೆಚ್ಚು ಆಫರ್​ಗಳು ಬರುತ್ತಿವೆ. ಒಳ್ಳೆಯ ಪಾತ್ರಗಳು ಸಿಕ್ಕರೆ ಅದನ್ನು ಒಪ್ಪಿ ನಟಿಸುತ್ತಿದ್ದಾರೆ.

Sanjay Dutt: ಸಂಜಯ್ ದತ್ ಈಗ ಬಿಗ್ ಬುಲ್; ‘ಡಬಲ್ ಇಸ್ಮಾರ್ಟ್’ಗೆ ಖಡಕ್ ವಿಲನ್
ಸಂಜಯ್ ದತ್
ರಾಜೇಶ್ ದುಗ್ಗುಮನೆ
|

Updated on: Jul 29, 2023 | 12:56 PM

Share

ಸಂಜಯ್ ದತ್ (Sanjay Dutt) ಅವರು ಬಾಲಿವುಡ್​ ಜೊತೆಗೆ ದಕ್ಷಿಣದಲ್ಲೂ ಬ್ಯುಸಿ ಆಗಿದ್ದಾರೆ. ಹೊಸ ಹೊಸ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದಲ್ಲಿ ‘ಕೆಡಿ’ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಈಗ ಅವರು ಹೊಸ ತೆಲುಗು ಸಿನಿಮಾ ಒಪ್ಪಿಕೊಂಡಿದ್ದಾರೆ. ಇಂದು (ಜುಲೈ 29) ಸಂಜಯ್ ದತ್ ಅವರ ಜನ್ಮದಿನ. ಆ ಪ್ರಯುಕ್ತ ಅವರ ಹೊಸ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದೆ. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವರ ರಗಡ್ ಅವತಾರ ಎಲ್ಲರ ಗಮನ ಸೆಳೆದಿದೆ.

ರಾಮ್ ಪೋತಿನೇನಿ ಹಾಗೂ ಪುರಿ ಜಗನ್ನಾಥ್ ಅವರ ಕಾಂಬಿನೇಷನ್​ನಲ್ಲಿ ಮೂಡಿ ಬಂದಿದ್ದ ‘ಇಸ್ಮಾರ್ಟ್ ಶಂಕರ್’ ಚಿತ್ರ ಹಿಟ್ ಆಗಿತ್ತು. ಈಗ ಈ ಜೋಡಿ ‘ಡಬಲ್ ಇಸ್ಮಾರ್ಟ್’ ಚಿತ್ರಕ್ಕಾಗಿ ಮತ್ತೆ ಒಂದಾಗಿದೆ. ಇತ್ತೀಚೆಗೆ ಈ ಚಿತ್ರದ ಶೂಟಿಂಗ್ ಹೈದರಾಬಾದ್​​ನಲ್ಲಿ ಆರಂಭ ಆಗಿದೆ. ಈ ಚಿತ್ರಕ್ಕಾಗಿ ರಾಮ್ ಅವರು ಭಿನ್ನ ಅವತಾರ ತಾಳಿದ್ದಾರೆ. ‘ಪುರಿ ಕನೆಕ್ಟ್ಸ್’ ಲಾಂಛನದ ಅಡಿಯಲ್ಲಿ ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗ ಸಂಜಯ್ ದತ್ ಎಂಟ್ರಿ ಆಗಿದೆ.

ಸಂಜಯ್ ದತ್ ‘ಕೆಜಿಎಫ್ 2’ ಚಿತ್ರದಲ್ಲಿ ಅಧೀರನಾಗಿ ಕಾಣಿಸಿಕೊಂಡರು. ಆ ಬಳಿಕ ದಕ್ಷಿಣದಿಂದ ಅವರಿಗೆ ಹೆಚ್ಚು ಆಫರ್​ಗಳು ಬರುತ್ತಿವೆ. ಒಳ್ಳೆಯ ಪಾತ್ರಗಳು ಸಿಕ್ಕರೆ ಅದನ್ನು ಒಪ್ಪಿ ನಟಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ದಕ್ಷಿಣದ ಸಿನಿಮಾಗಳಲ್ಲಿ ನಟಿಸುತ್ತಿರುವ ಸಂಜಯ್ ದತ್ ‘ಡಬಲ್ ಇಸ್ಮಾರ್ಟ್’ ಚಿತ್ರದ ಭಾಗವಾಗಿದ್ದಾರೆ. ಸಂಜಯ್ ದತ್ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪೋಸ್ಟರ್ ರಿಲೀಸ್ ಮಾಡಿ, ಬರ್ತ್​ಡೇ ಶುಭ ಕೋರಲಾಗಿದೆ.

ಪೋಸ್ಟರ್​ನಲ್ಲಿ ಸಂಜಯ್ ದತ್ ಅವರ ಲುಕ್ ಗಮನ ಸೆಳೆಯುವಂತಿದೆ. ಸ್ಟೈಲಿಶ್ ಆಗಿ ಅವರು ಕಾಣಿಸಿಕೊಂಡಿದ್ದಾರೆ. ಕೈಯಲ್ಲಿ ಸಿಗಾರ್ ಇದೆ. ಬಿಗ್ ಬುಲ್ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಹಿಂದೆಂದೂ ಮಾಡಿರದ ಪಾತ್ರದಲ್ಲಿ ಸಂಜಯ್ ದತ್​ನ ತೋರಿಸಲು ಪುರಿ ಜಗನ್ನಾಥ್ ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 308 ಹುಡುಗಿಯರ ಜೊತೆ ಸಂಜಯ್ ದತ್ ಡೇಟ್; ಬಾಲಿವುಡ್​ನ ಈ ನಟಿಯರ ಜೊತೆಯೂ ಸುತ್ತಾಡಿದ್ದ ನಟ

‘ಡಬಲ್ ಇಸ್ಮಾರ್ಟ್’ ಸಿನಿಮಾಗೆ ಹಾಲಿವುಡ್ ಛಾಯಾಗ್ರಾಹಕರು ಬರಲಿದ್ದಾರೆ. ದೊಡ್ಡ ಬಜೆಟ್​​ನಲ್ಲಿ ಸಿನಿಮಾ ತಯಾರಾಗುತ್ತಿದೆ. 2024ರ ಶಿವರಾತ್ರಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆ ಇದೆ. ಕೇವಲ ತೆಲುಗು ಮಾತ್ರವಲ್ಲದೆ, ಕನ್ನಡ, ತಮಿಳು, ಹಿಂದಿ ಹಾಗೂ‌ ಮಲಯಾಳಂ ಭಾಷೆಗಳಲ್ಲಿ ಸಿನಿಮಾ ಮೂಡಿಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು