AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂ ಆರ್​ ಎ ಹೀರೋ; ಸಾರಾ ಅಲಿ ಖಾನ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸೋನು ಸೂದ್​

ಸಹಾಯ ಕೇಳಿ ಸಾಕಷ್ಟು ಜನರು ಸಾರಾ ಅಲಿ ಖಾನ್​ಗೆ ಮೆಸೇಜ್​ ಮಾಡಿದ್ದಾರೆ. ಈ ಸಂದೇಶಗಳನ್ನು ಸಾರಾ ಅಲಿ ಖಾನ್​ ಇನ್​​ಸ್ಟಾಗ್ರಾಂ ಸ್ಟೇಟಸ್​ಗೆ ಹಾಕಿ ಪ್ರತಿಯೊಂದನ್ನು ಸೋನು ಸೂದ್​ಗೆ ಟ್ಯಾಗ್​ ಮಾಡುತ್ತಿದ್ದರು.

ಯೂ ಆರ್​ ಎ ಹೀರೋ; ಸಾರಾ ಅಲಿ ಖಾನ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸೋನು ಸೂದ್​
ಸಾರಾ ಅಲಿ ಖಾನ್​-ಸೋನು ಸೂದ್​
ರಾಜೇಶ್ ದುಗ್ಗುಮನೆ
|

Updated on: May 08, 2021 | 10:09 PM

Share

ಕೊರೊನಾ ವೈರಸ್​ ಎರಡನೇ ಅಲೆ ಸಂದರ್ಭದಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ. ಈ ವೇಳೆ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಜನರ ಸಂಕಷ್ಟಕ್ಕೆ ಕಿವಿಯಾಗುತ್ತಿದ್ದಾರೆ. ಸೋನು ಸೂದ್​ ಜತೆ ಟೊಂಕ ಕಟ್ಟಿ ನಿಂತ ಅದೆಷ್ಟೋ ಸೆಲೆಬ್ರಿಟಿಗಳಿದ್ದಾರೆ. ಅದರಲ್ಲಿ ಬಾಲಿವುಡ್​ ನಟಿ ಸಾರಾ ಅಲಿ ಖಾನ್​ ಕೂಡ ಒಬ್ಬರು. ಕೊವಿಡ್​ ಸಂದರ್ಭದಲ್ಲಿ ಸಾರಾ ಅಲಿ ಖಾನ್​ ಮಾಡಿದ ಸಹಾಯಕ್ಕೆ ಈಗ ಸೋನು ಸೂದ್​ ವಿಶೇಷವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಹಾಯ ಕೇಳಿ ಸಾಕಷ್ಟು ಜನರು ಸಾರಾ ಅಲಿ ಖಾನ್​ಗೆ ಮೆಸೇಜ್​ ಮಾಡಿದ್ದಾರೆ. ಈ ಸಂದೇಶಗಳನ್ನು ಸಾರಾ ಅಲಿ ಖಾನ್​ ಇನ್​​ಸ್ಟಾಗ್ರಾಂ ಸ್ಟೇಟಸ್​ಗೆ ಹಾಕಿ ಪ್ರತಿಯೊಂದನ್ನು ಸೋನು ಸೂದ್​ಗೆ ಟ್ಯಾಗ್​ ಮಾಡುತ್ತಿದ್ದರು. ಈ ಮೂಲಕ ಕಷ್ಟದಲ್ಲಿರುವ ಸಾಮಾನ್ಯರಿಗೆ ಸಹಾಯ ಮಾಡಲು ಅವರು ಸಹಾಯ ಮಾಡಿದ್ದರು. ಇದರ ಜತೆಗೆ ಸೋನು ಸೂದ್​ ಫೌಂಡೇಷನ್​ಗೆ ಹಣ ನೀಡಿದ್ದಾರೆ. ಇದು ಸೋನು ಸೂದ್​ಗೆ ಖುಷಿ ನೀಡಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಸೋನು, ಸಾರಾ ಅವರನ್ನು ಹೀರೋ ಎಂದಿದ್ದಾರೆ.

ಸೋನು ಸೂದ್​ ಫೌಂಡೇಷನ್​ಗೆ ನೀವು ನೀಡಿದ ಕೊಡುಗೆಗಾಗಿ ತುಂಬಾ ಧನ್ಯವಾದಗಳು. ನಿಮ್ಮ ಬಗ್ಗೆ ತುಂಬಾ ಹೆಮ್ಮೆ ಇದೆ. ಒಳ್ಳೆಯ ಕೆಲಸವನ್ನು ಹೀಗೆಯೇ ಮಾಡುತ್ತಿರಿ. ಈ ಕಷ್ಟದ ಸಮಯದಲ್ಲಿ ರಾಷ್ಟ್ರದ ಯುವಕರು ಮುಂದೆ ಬಂದು ಸಹಾಯ ಮಾಡಲು ನೀವು ಸ್ಫೂರ್ತಿ ನೀಡಿದ್ದೀರಿ. ಯೂ ಆರ್ ಎ ಹೀರೋ’ಎಂದು ಬರೆದುಕೊಂಡಿದ್ದಾರೆ.

ಕೊರೊನಾ ಸೋಂಕು ಇಡೀ ಭಾರತವನ್ನು ಇನ್ನಿಲ್ಲದಂತೆ ಪೀಡಿಸುತ್ತಿದೆ. ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಹೆಚ್ಚಾಗಿದೆ. ಇತ್ತೀಚೆಗೆ ಕ್ರಿಕೆಟಿಗ ಸುರೇಶ್ ರೈನಾ ಕೂಡ ಆಕ್ಸಿಜನ್​ಗಾಗಿ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೆ ಇಟ್ಟಿದ್ದರು. 65 ವರ್ಷದ ಚಿಕ್ಕಮ್ಮ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರಿಗೆ ಆಕ್ಸಿಜನ್ ಸಿಲಿಂಡರ್‌ನ ಅವಶ್ಯಕತೆಯಿದೆ. ಅವರನ್ನು ಪ್ರಸ್ತುತ ಮೀರಠ್​​ನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಸುರೇಶ್ ರೈನಾ ಟ್ವೀಟ್ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಜನರ ಸಹಾಯ ಕೇಳಿದ್ದರು. ಇದಕ್ಕೆ ಸೋನು ಸೂದ್​ ಪ್ರತಿಕ್ರಿಯಿಸಿದ್ದರು. ಅಷ್ಟೇ ಅಲ್ಲ, ಅವರು ರೈನಾ ಚಿಕ್ಕಮ್ಮಗೆ ಸಹಾಯ ಕೂಡ ಮಾಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಅಂದು ಹೇಳಿದ್ದ ಮಾತು ಇಷ್ಟು ಬೇಗ ನಿಜವಾಯ್ತೇ?

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ