AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂ ಆರ್​ ಎ ಹೀರೋ; ಸಾರಾ ಅಲಿ ಖಾನ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸೋನು ಸೂದ್​

ಸಹಾಯ ಕೇಳಿ ಸಾಕಷ್ಟು ಜನರು ಸಾರಾ ಅಲಿ ಖಾನ್​ಗೆ ಮೆಸೇಜ್​ ಮಾಡಿದ್ದಾರೆ. ಈ ಸಂದೇಶಗಳನ್ನು ಸಾರಾ ಅಲಿ ಖಾನ್​ ಇನ್​​ಸ್ಟಾಗ್ರಾಂ ಸ್ಟೇಟಸ್​ಗೆ ಹಾಕಿ ಪ್ರತಿಯೊಂದನ್ನು ಸೋನು ಸೂದ್​ಗೆ ಟ್ಯಾಗ್​ ಮಾಡುತ್ತಿದ್ದರು.

ಯೂ ಆರ್​ ಎ ಹೀರೋ; ಸಾರಾ ಅಲಿ ಖಾನ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸೋನು ಸೂದ್​
ಸಾರಾ ಅಲಿ ಖಾನ್​-ಸೋನು ಸೂದ್​
ರಾಜೇಶ್ ದುಗ್ಗುಮನೆ
|

Updated on: May 08, 2021 | 10:09 PM

Share

ಕೊರೊನಾ ವೈರಸ್​ ಎರಡನೇ ಅಲೆ ಸಂದರ್ಭದಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ. ಈ ವೇಳೆ ನಟ ಸೋನು ಸೂದ್​ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಜನರ ಸಂಕಷ್ಟಕ್ಕೆ ಕಿವಿಯಾಗುತ್ತಿದ್ದಾರೆ. ಸೋನು ಸೂದ್​ ಜತೆ ಟೊಂಕ ಕಟ್ಟಿ ನಿಂತ ಅದೆಷ್ಟೋ ಸೆಲೆಬ್ರಿಟಿಗಳಿದ್ದಾರೆ. ಅದರಲ್ಲಿ ಬಾಲಿವುಡ್​ ನಟಿ ಸಾರಾ ಅಲಿ ಖಾನ್​ ಕೂಡ ಒಬ್ಬರು. ಕೊವಿಡ್​ ಸಂದರ್ಭದಲ್ಲಿ ಸಾರಾ ಅಲಿ ಖಾನ್​ ಮಾಡಿದ ಸಹಾಯಕ್ಕೆ ಈಗ ಸೋನು ಸೂದ್​ ವಿಶೇಷವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಹಾಯ ಕೇಳಿ ಸಾಕಷ್ಟು ಜನರು ಸಾರಾ ಅಲಿ ಖಾನ್​ಗೆ ಮೆಸೇಜ್​ ಮಾಡಿದ್ದಾರೆ. ಈ ಸಂದೇಶಗಳನ್ನು ಸಾರಾ ಅಲಿ ಖಾನ್​ ಇನ್​​ಸ್ಟಾಗ್ರಾಂ ಸ್ಟೇಟಸ್​ಗೆ ಹಾಕಿ ಪ್ರತಿಯೊಂದನ್ನು ಸೋನು ಸೂದ್​ಗೆ ಟ್ಯಾಗ್​ ಮಾಡುತ್ತಿದ್ದರು. ಈ ಮೂಲಕ ಕಷ್ಟದಲ್ಲಿರುವ ಸಾಮಾನ್ಯರಿಗೆ ಸಹಾಯ ಮಾಡಲು ಅವರು ಸಹಾಯ ಮಾಡಿದ್ದರು. ಇದರ ಜತೆಗೆ ಸೋನು ಸೂದ್​ ಫೌಂಡೇಷನ್​ಗೆ ಹಣ ನೀಡಿದ್ದಾರೆ. ಇದು ಸೋನು ಸೂದ್​ಗೆ ಖುಷಿ ನೀಡಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿರುವ ಸೋನು, ಸಾರಾ ಅವರನ್ನು ಹೀರೋ ಎಂದಿದ್ದಾರೆ.

ಸೋನು ಸೂದ್​ ಫೌಂಡೇಷನ್​ಗೆ ನೀವು ನೀಡಿದ ಕೊಡುಗೆಗಾಗಿ ತುಂಬಾ ಧನ್ಯವಾದಗಳು. ನಿಮ್ಮ ಬಗ್ಗೆ ತುಂಬಾ ಹೆಮ್ಮೆ ಇದೆ. ಒಳ್ಳೆಯ ಕೆಲಸವನ್ನು ಹೀಗೆಯೇ ಮಾಡುತ್ತಿರಿ. ಈ ಕಷ್ಟದ ಸಮಯದಲ್ಲಿ ರಾಷ್ಟ್ರದ ಯುವಕರು ಮುಂದೆ ಬಂದು ಸಹಾಯ ಮಾಡಲು ನೀವು ಸ್ಫೂರ್ತಿ ನೀಡಿದ್ದೀರಿ. ಯೂ ಆರ್ ಎ ಹೀರೋ’ಎಂದು ಬರೆದುಕೊಂಡಿದ್ದಾರೆ.

ಕೊರೊನಾ ಸೋಂಕು ಇಡೀ ಭಾರತವನ್ನು ಇನ್ನಿಲ್ಲದಂತೆ ಪೀಡಿಸುತ್ತಿದೆ. ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಹೆಚ್ಚಾಗಿದೆ. ಇತ್ತೀಚೆಗೆ ಕ್ರಿಕೆಟಿಗ ಸುರೇಶ್ ರೈನಾ ಕೂಡ ಆಕ್ಸಿಜನ್​ಗಾಗಿ ಸಾಮಾಜಿಕ ಜಾಲತಾಣದಲ್ಲಿ ಬೇಡಿಕೆ ಇಟ್ಟಿದ್ದರು. 65 ವರ್ಷದ ಚಿಕ್ಕಮ್ಮ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರಿಗೆ ಆಕ್ಸಿಜನ್ ಸಿಲಿಂಡರ್‌ನ ಅವಶ್ಯಕತೆಯಿದೆ. ಅವರನ್ನು ಪ್ರಸ್ತುತ ಮೀರಠ್​​ನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಸುರೇಶ್ ರೈನಾ ಟ್ವೀಟ್ ಮಾಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಜನರ ಸಹಾಯ ಕೇಳಿದ್ದರು. ಇದಕ್ಕೆ ಸೋನು ಸೂದ್​ ಪ್ರತಿಕ್ರಿಯಿಸಿದ್ದರು. ಅಷ್ಟೇ ಅಲ್ಲ, ಅವರು ರೈನಾ ಚಿಕ್ಕಮ್ಮಗೆ ಸಹಾಯ ಕೂಡ ಮಾಡಿದ್ದರು.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಅಂದು ಹೇಳಿದ್ದ ಮಾತು ಇಷ್ಟು ಬೇಗ ನಿಜವಾಯ್ತೇ?

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!