AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನಂತೆ ದುಡ್ಡು ಖರ್ಚು ಮಾಡಿ 10 ನಟಿಯರನ್ನು ಕರೆಸಿಕೊಂಡ ‘ಡೇಂಜರಸ್​’​ ವಿಜ್ಞಾನಿ’ ಸರವಣನ್​

The Legend Movie: ಸ್ಟಾರ್​ ನಟರೂ ಕೂಡ ಮಾಡದ ರೀತಿಯಲ್ಲಿ ಸರವಣನ್​ ಅವರು ಪ್ರಚಾರ ಮಾಡುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಮೂಡಿದೆ.

ನೀರಿನಂತೆ ದುಡ್ಡು ಖರ್ಚು ಮಾಡಿ 10 ನಟಿಯರನ್ನು ಕರೆಸಿಕೊಂಡ ‘ಡೇಂಜರಸ್​’​ ವಿಜ್ಞಾನಿ’ ಸರವಣನ್​
‘ದಿ ಲೆಜೆಂಡ್’​ ಸಿನಿಮಾದ ಟ್ರೇಲರ್​ ಲಾಂಚ್​ ಕಾರ್ಯಕ್ರಮಕ್ಕೆ ಬಂದ 10 ಹೀರೋಯಿನ್​ಗಳು
TV9 Web
| Edited By: |

Updated on:May 30, 2022 | 9:36 AM

Share

ಚಿತ್ರರಂಗ ಎಂಬುದು ಮಾಯಾ ಲೋಕ. ಇಲ್ಲಿ ಏನು ಬೇಕಾದರೂ ಆಗಬಹುದು. ಅಂಥದ್ದೆಲ್ಲ ಆಗಬೇಕು ಎಂದರೆ ಹಣವನ್ನು ನೀರಿನಂತೆ ಖರ್ಚು ಮಾಡಬೇಕು. ಈ ಕಾರಣಕ್ಕಾಗಿ ಉದ್ಯಮಿ ಕಮ್​ ನಟ ಸರವಣನ್​ ಅರುಲ್ (Saravanan Arul)​ ಅವರು ಸುದ್ದಿ ಆಗುತ್ತಿದ್ದಾರೆ. ಅವರು ನಟಿಸಿರುವ ‘ದಿ ಲೆಜೆಂಡ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸಿಕ್ಕಾಪಟ್ಟೆ ಅದ್ದೂರಿಯಾಗಿ ಈ ಚಿತ್ರದ ಆಡಿಯೋ ಮತ್ತು ಟ್ರೇಲರ್​ ರಿಲೀಸ್​ ಮಾಡಲಾಗಿದೆ. ಸರಣವನ್​ ಅವರು ಸೌಂಡು ಮಾಡುತ್ತಿರುವುದು ನೋಡಿ ಕಾಲಿವುಡ್​ (Kollywood) ಮಂದಿ ದಂಗಾಗಿದ್ದಾರೆ. ಹೌದು, ತುಂಬ ಅದ್ದೂರಿಯಾಗಿ ಈ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ‘ದಿ ಲೆಜೆಂಡ್​’ (The Legend Movie) ಸಿನಿಮಾದಲ್ಲಿ ಸರವಣನ್​​ ಅವರು ವಿಜ್ಞಾನಿ ಮತ್ತು ಗ್ಯಾಂಗ್​ಸ್ಟರ್​ ಪಾತ್ರ ಮಾಡಿದ್ದಾರೆ. ಆ ಪಾತ್ರವನ್ನು ಮೋಸ್ಟ್​ ಡೇಂಜರಸ್​ ವಿಜ್ಞಾನಿ ಎಂದು ಟ್ರೇಲರ್​ನಲ್ಲಿ ಬಣ್ಣಿಸಲಾಗಿದೆ. ಟ್ರೇಲರ್​ ಲಾಂಚ್​ ಸಲುವಾಗಿ ಅವರು ಬರೋಬ್ಬರಿ 10 ಟಾಪ್​ ನಾಯಕಿಯರನ್ನು ವೇದಿಕೆಗೆ ಆಹ್ವಾನಿಸಿರುವುದು ಸುದ್ದಿ ಆಗಿದೆ. ಇದಕ್ಕಾಗಿ ಅವರು ಹಣವನ್ನು ನೀರಿನಂತೆ ಖರ್ಚು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಂಥ ಹಲವು ಕಾರಣಗಳಿಂದಾಗಿ ಈ ಸಿನಿಮಾ ಗಮನ ಸೆಳೆಯುತ್ತಿದೆ.

ಯಾವುದೇ ಸಿನಿಮಾಗೆ ಪ್ರಚಾರ ಎಂಬುದು ತುಂಬ ಮುಖ್ಯ. ಕೆಲವೊಮ್ಮೆ ತಾವೇ ನಟಿಸಿದ ಸಿನಿಮಾ ಪ್ರಚಾರಕ್ಕೆ ನಟಿಯರು ಬರುವುದಿಲ್ಲ. ಆದರೆ ‘ದಿ ಲೆಜೆಂಡ್​’ ಸಿನಿಮಾ ವಿಚಾರದಲ್ಲಿ ಬೇರೆಯದೇ ಆಗಿದೆ. ಚಿತ್ರಕ್ಕೆ ಸಂಬಂಧವೇ ಇಲ್ಲದ ಹಲವು ನಟಿಯರು ಆಗಮಿಸಿ ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದಾರೆ. ಇದಕ್ಕಾಗಿ ಅವರೆಲ್ಲರಿಗೂ ದುಬಾರಿ ಸಂಭಾವನೆ ನೀಡಲಾಗಿದೆ. ಖಾಸಗಿ ವಿಮಾನ ಕಳಿಸಿಕೊಟ್ಟು ಎಲ್ಲರನ್ನೂ ಕರೆಸಿಕೊಳ್ಳಲಾಗಿದೆ ಎಂದು ಸುದ್ದಿ ಆಗಿದೆ.

ಚೆನ್ನೈನ ಜವಾಹರಲಾಲ್​ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ‘ದಿ ಲೆಜೆಂಡ್​’ ಸಿನಿಮಾದ ಟ್ರೇಲರ್​ ಲಾಂಚ್​ ಮಾಡಲಾಗಿದೆ. ನಟಿಯರಾದ ಶ್ರದ್ಧಾ ಶ್ರೀನಾಥ್​, ಪೂಜಾ ಹೆಗ್ಡೆ, ಶ್ರೀಲೀಲಾ, ತಮನ್ನಾ ಭಾಟಿಯಾ, ಊರ್ವಶಿ ರೌಟೇಲಾ, ಹನ್ಸಿಕಾ ಮೋಟ್ವಾನಿ, ಲಕ್ಷ್ಮೀ ರೈ, ಡಿಂಪಲ್​ ಹಯಾತಿ, ಯಶಿಕಾ ಆನಂದ್​, ನೂಪುರ್​ ಸನನ್​ ಅವರು ಈ ಕಾರ್ಯಕ್ರಮಕ್ಕೆ ಬಂದು ಶುಭ ಹಾರೈಸಿದ್ದಾರೆ. ಸ್ಟಾರ್​ ನಟರೂ ಕೂಡ ಮಾಡದ ರೀತಿಯಲ್ಲಿ ಸರವಣನ್​ ಅವರು ಪ್ರಚಾರ ಮಾಡುತ್ತಿದ್ದಾರೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ
Image
ರಾಕಿ ಭಾಯ್​ಗೆ ಈದ್​ ಗಿಫ್ಟ್​; ಹಬ್ಬದ ದಿನವೇ ಹಿಂದಿ ಬಾಕ್ಸ್​ ಆಫೀಸ್​ನಲ್ಲಿ 9.57 ಕೋಟಿ ರೂ. ಬಾಚಿದ ‘ಕೆಜಿಎಫ್​ 2’
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​
Image
KGF 3: ‘ಕೆಜಿಎಫ್ ಚಾಪ್ಟರ್ 2’ ಕೊನೆಯಲ್ಲಿ ಬಿಗ್ ಸರ್ಪ್ರೈಸ್ ನೋಡಿ ಥ್ರಿಲ್ ಆದ ಅಭಿಮಾನಿಗಳು; ಟ್ರೆಂಡ್ ಆಯ್ತು ‘ಕೆಜಿಎಫ್ 3’
Image
‘ಕೆಜಿಎಫ್’ ಚಿತ್ರವನ್ನೇ​ ಮೀರಿಸಲಿದೆ ಪ್ರಭಾಸ್​ ‘ಸಲಾರ್’​? ಟಾಲಿವುಡ್​ ಅಂಗಳದಿಂದ ಬಿಗ್​ ಅಪ್​ಡೇಟ್​

‘ದಿ ಲೆಜೆಂಡ್​’ ಸಿನಿಮಾಗೆ ಜೆ.ಡಿ. ಜೆರ್ರಿ ಅವರು ನಿರ್ದೇಶನ ಮಾಡಿದ್ದಾರೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಸಿನಿಮಾದ ಟ್ರೇಲರ್​ 30 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಹೀರೋ ಆಗಿ ನಟಿಸಿರುವ ಸರವಣನ್​ ಅವರೇ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಊರ್ವಶಿ ರೌಟೇಲಾ ಅವರು ನಾಯಕಿಯಾಗಿ ನಟಿಸಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ನಾಸರ್​, ಯೋಗಿ ಬಾಬು, ಗೀತಿಕಾ ಮುಂತಾದವರು ಕೂಡ ಅಭಿನಯಿಸಿದ್ದಾರೆ. ಟ್ರೇಲರ್​ನಲ್ಲಿ ಆ್ಯಕ್ಷನ್​ ದೃಶ್ಯಗಳು ಹೈಲೈಟ್​ ಆಗಿವೆ. ಶೀಘ್ರದಲ್ಲೇ ಈ ಸಿನಿಮಾ ರಿಲೀಸ್​ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:09 am, Mon, 30 May 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ