AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ಮನೆಯಲ್ಲಿರುವ ಐಷಾರಾಮಿ ಹೋಮ್​ ಥಿಯೇಟರ್ ಹೇಗಿದೆ ಗೊತ್ತಾ?; ಇಲ್ಲಿದೆ ಫೋಟೋ

ಮಹೇಶ್​ ಬಾಬು ಹೈದರಾಬಾದ್​ನಲ್ಲಿ ಐಷಾರಾಮಿ ಮನೆ ಹೊಂದಿದ್ದಾರೆ. ಕುಟುಂಬದ ಜತೆ ಹಾಯಾಗಿ ಸಮಯ ಕಳೆಯೋಕೆ ಏನೆಲ್ಲ ವ್ಯವಸ್ಥೆ ಬೇಕೋ ಅದನ್ನು ಮನೆಯಲ್ಲೇ ಮಾಡಿಕೊಂಡಿದ್ದಾರೆ.

ಮಹೇಶ್​ ಬಾಬು ಮನೆಯಲ್ಲಿರುವ ಐಷಾರಾಮಿ ಹೋಮ್​ ಥಿಯೇಟರ್ ಹೇಗಿದೆ ಗೊತ್ತಾ?; ಇಲ್ಲಿದೆ ಫೋಟೋ
ಮಹೇಶ್​ ಬಾಬು ಮನೆಯಲ್ಲಿರುವ ಐಷಾರಾಮಿ ಹೋಮ್​ ಥೀಯೇಟರ್ ಹೇಗಿದೆ ಗೊತ್ತಾ?; ಇಲ್ಲಿದೆ ಫೋಟೋ
TV9 Web
| Edited By: |

Updated on: Aug 28, 2021 | 2:58 PM

Share

ದೊಡ್ಡದೊಡ್ಡ ಸೆಲೆಬ್ರಿಟಿಗಳು ತಾವು ಕಟ್ಟಿಸುವ ಮನೆಯ ಬಗ್ಗೆ ಸಾಕಷ್ಟು ಕನಸು ಕಂಡಿರುತ್ತಾರೆ. ಫಿಟ್​ನೆಸ್ ಕಾಯ್ದುಕೊಳ್ಳೋಕೆ ಜಿಮ್​, ರೆಕಾರ್ಡಿಂಗ್​ ಸ್ಟುಡಿಯೋ, ಸಿನಿಮಾ ವೀಕ್ಷಣೆಗೆ ಹೋಮ್​ ಥಿಯೇಟರ್​ ಅನ್ನು ಮನೆಯಲ್ಲೇ ಹೊಂದಿರುತ್ತಾರೆ. ಇದಕ್ಕೆ ಟಾಲಿವುಡ್​ ನಟ ಮಹೇಶ್​ ಬಾಬು ಕೂಡ ಹೊರತಾಗಿಲ್ಲ. ಅವರು ತಮ್ಮ ಮನೆಯಲ್ಲೇ ಐಷಾರಾಮಿ ಹೋಮ್​ ಥಿಯೇಟರ್​ ಹೊಂದಿದ್ದಾರೆ. ಈ ಫೋಟೋ ಈಗ ವೈರಲ್​ ಆಗಿದೆ.

ಮಹೇಶ್​ ಬಾಬು ಹೈದರಾಬಾದ್​ನಲ್ಲಿ ಐಷಾರಾಮಿ ಮನೆ ಹೊಂದಿದ್ದಾರೆ. ಕುಟುಂಬದ ಜತೆ ಹಾಯಾಗಿ ಸಮಯ ಕಳೆಯೋಕೆ ಏನೆಲ್ಲ ವ್ಯವಸ್ಥೆ ಬೇಕೋ ಅದನ್ನು ಮನೆಯಲ್ಲೇ ಮಾಡಿಕೊಂಡಿದ್ದಾರೆ. ಕುಟುಂಬದ ಜತೆ ಸಿನಿಮಾ ವೀಕ್ಷಿಸೋಕೆ ಮನೆಯಲ್ಲಿ ವಿಶೇಷ ಥಿಯೇಟರ್​ ವ್ಯವಸ್ಥೆ ಕೂಡ ಇದೆ. ಈ ಫೋಟೋವನ್ನು ನಟ ಸುಧೀರ್ ಬಾಬು ಹಂಚಿಕೊಂಡಿದ್ದಾರೆ.

ಸುಧೀರ್ ಬಾಬು ನಟನೆಯ ‘ಶ್ರೀದೇವಿ ಸೋಡಾ ಸೆಂಟರ್​’ ಸಿನಿಮಾ ತೆರೆಗೆ ಬಂದಿದೆ. ಈ ಸಿನಿಮಾವನ್ನು ಮಹೇಶ್​ ಬಾಬು ರಿಲೀಸ್​ಗೂ ಮೊದಲೇ ಹೋಮ್​ ಥಿಯೇಟರ್​ನಲ್ಲಿ ವೀಕ್ಷಣೆ ಮಾಡಿದ್ದಾರೆ. ಈ ಸಿನಿಮಾ ವಿಮರ್ಶೆ ಮಾಡಿರುವ ಅವರು ಅಭಿಮಾನಿಗಳ ಬಳಿ ಸಿನಿಮಾ ನೋಡುವಂತೆ ಮನವಿ ಮಾಡಿದ್ದಾರೆ. ಮಹೇಶ್​ ಬಾಬು ಸಿನಿಮಾ ವೀಕ್ಷಿಸುತ್ತಿರುವ ಫೋಟೋವನ್ನು ಸುಧೀರ್ ಬಾಬು ಹಂಚಿಕೊಂಡಿದ್ದಾರೆ.

‘ಮಹೇಶ್​ ಬಾಬು ಅವರು ನಮ್ಮ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ’ ಎಂದು ಸುಧೀರ್​ ಬಾಬು ಬರೆದುಕೊಂಡಿದ್ದಾರೆ. ಇದರಲ್ಲಿ ಮಹೇಶ್​ ಅವರ ಮನೆಯ ಹೋಮ್​ ಥಿಯೇಟರ್​ ಎಲ್ಲರ ಗಮನ ಸೆಳೆಯುತ್ತಿದೆ. ‘ಶ್ರೀದೇವಿ ಸೋಡಾ ಸೆಂಟರ್ ವೀಕ್ಷಣೆ ಮಾಡಿದ ನಂತರದಲ್ಲಿ ಸಿನಿಮಾ ಬಗ್ಗೆ ಮಹೇಶ್​ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಸುಧೀರ್ ಬಾಬು ಅದ್ಭುತವಾಗಿ ನಟಿಸಿದ್ದಾರೆ ಎಂದಿದ್ದಾರೆ ಮಹೇಶ್​.

‘ಶ್ರೀದೇವಿ ಸೋಡಾ ಸೆಂಟರ್’​ ಸಿನಿಮಾ ಆಗಸ್ಟ್ 27ರಂದು ರಿಲೀಸ್​ ಆಗಿದೆ. ಕೊವಿಡ್​ ಕಾರಣದಿಂದ ಕೆಲ ರಾಜ್ಯಗಳ ಚಿತ್ರಮಂದಿರದಲ್ಲಿ ಶೇ.50 ಆಸನ ವ್ಯವಸ್ಥೆಗೆ ಮಾತ್ರ ಅವಕಾಶ ನೀಡಲಾಗಿದೆ. ಇದರ ಮಧ್ಯೆಯೂ ಸಿನಿಮಾ ರಿಲೀಸ್​ ಮಾಡುವ ಸಾಹಸ ಮಾಡಿದ್ದಾರೆ. ಅಕ್ಷಯ್​ ಕುಮಾರ್​ ನಟನೆಯ ಬೆಲ್​ ಬಾಟಮ್​ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಕೊವಿಡ್​ ಕಾರಣದಿಂದ ಬಾಕ್ಸ್​ ಆಫೀಸ್​ ಕಲೆಕ್ಷನ್​ ಮೇಲೆ ಹೊಡೆತ ಬಿದ್ದಿತ್ತು.

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ