AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರು ವಾರಿ ಪಾಟ’ ಟ್ರೇಲರ್​ನಲ್ಲಿ ಆ್ಯಕ್ಷನ್ ಮೂಲಕ ಮಿಂಚಿದ ಮಹೇಶ್ ಬಾಬು; ಚಿತ್ರದ ಕಥೆ ಏನು?

‘ಸರ್ಕಾರು ವಾರಿ ಪಾಟ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರು ಸಖತ್ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ.

‘ಸರ್ಕಾರು ವಾರಿ ಪಾಟ’ ಟ್ರೇಲರ್​ನಲ್ಲಿ ಆ್ಯಕ್ಷನ್ ಮೂಲಕ ಮಿಂಚಿದ ಮಹೇಶ್ ಬಾಬು; ಚಿತ್ರದ ಕಥೆ ಏನು?
ಮಹೇಶ್ ಬಾಬು
TV9 Web
| Edited By: |

Updated on:May 02, 2022 | 5:02 PM

Share

ಮಹೇಶ್ ಬಾಬು (Mahesh Babu) ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ಮೇ 12ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಮೂಲಕ ಮಹೇಶ್ ಬಾಬು ಅವರು ಸಖತ್ ಆ್ಯಕ್ಷನ್​ ಮೆರೆಯಲಿದ್ದಾರೆ ಎನ್ನುವ ಸೂಚನೆ ಈ ಮೊದಲೇ ಸಿಕ್ಕಿತ್ತು. ಇಂದು (ಮೇ 2) ರಿಲೀಸ್ ಆದ ಟ್ರೇಲರ್​ನಲ್ಲಿ ಸಿನಿಮಾದ ಝಲಕ್ ಸಿಕ್ಕಿದೆ. ರೊಮ್ಯಾಂಟಿಕ್ ದೃಶ್ಯಗಳು ಹಾಗೂ ಆ್ಯಕ್ಷನ್ ದೃಶ್ಯಗಳ ಸಮ್ಮಿಲನದೊಂದಿಗೆ ‘ಸರ್ಕಾರು ವಾರಿ ಪಾಟ’ ಟ್ರೇಲರ್ (Sarkaru Vaari Paata) ಮೂಡಿ ಬಂದಿದೆ. ಈ ಟ್ರೇಲರ್​ನಿಂದ ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರು ಸಖತ್ ಭಿನ್ನ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದಾರೆ. ‘ನೀವು ನನ್ನ ಪ್ರೇಮವನ್ನು ದೋಚಬಹುದು, ನೀವು ನನ್ನ ಫ್ರೆಂಡ್​ಶಿಪ್​ ಕೂಡ ದೋಚಬಹುದು. ಆದರೆ, ನೀವು ನನ್ನ ಹಣವನ್ನು ಮಾತ್ರ ಕದಿಯಲು ಸಾಧ್ಯವಿಲ್ಲ’ ಎಂಬ ಡೈಲಾಗ್​ ಟ್ರೇಲರ್​ನಲ್ಲಿ ಹೈಲೈಟ್ ಆಗಿದೆ.

ಇದು ಒಂದು ಮುಖವಾದರೆ, ಮತ್ತೊಂದು ಶೇಡ್​ನಲ್ಲಿ ಅವರು ಸಖತ್ ರೊಮ್ಯಾಂಟಿಕ್ ಬಾಯ್ ಆಗಿ ಕಾಣಿಸಿಕೊಂಡಿದ್ದಾರೆ. ಕತ್ತಿನಲ್ಲಿ ಅವರು ಹಾಕಿಸಿಕೊಂಡ ಒಂದು ರೂಪಾಯಿ ನಾಣ್ಯದ ಟ್ಯಾಟೂ ಸಖತ್ ಗಮನ ಸೆಳೆಯುತ್ತಿದೆ. ಹೀರೋ ದುಡ್ಡಿಗಾಗಿ ಏನೂ ಮಾಡೋಕೂ ರೆಡಿ ಇರುತ್ತಾನೆ ಎಂಬುದನ್ನು ಫ್ಯಾನ್ಸ್ ಊಹಿಸುತ್ತಿದ್ದಾರೆ. ಇದೇ ಚಿತ್ರದ ಕಥೆ ಏಂದು ಹೇಳಲಾಗುತ್ತಿದೆ. ಇನ್ನು, ಚಿತ್ರದಲ್ಲಿ ಎಮೋಷನ್ಸ್​ಗೂ ಆದ್ಯತೆ ನೀಡಲಾಗಿದೆ ಎಂಬ ಸೂಚನೆ ಸಿಕ್ಕಿದೆ.

ತೆಲುಗು ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಮೈತ್ರಿ ಮೂವೀ ಮೇಕರ್ಸ್​’ ಬ್ಯಾನರ್​ ಮೂಲಕ ‘ಸರ್ಕಾರು ವಾರಿ ಪಾಟ’ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರಕ್ಕೆ ಪರಶುರಾಮ್​ ನಿರ್ದೇಶನ ಮಾಡಿದ್ದಾರೆ. ಮಹೇಶ್​ ಬಾಬು ಅವರಿಗೆ ಜೋಡಿಯಾಗಿ ಖ್ಯಾತ ನಟಿ ಕೀರ್ತಿ ಸುರೇಶ್​ ಅಭಿನಯಿಸಿದ್ದಾರೆ. ಈಗಾಗಲೇ ‘ಕಲಾವತಿ..’ ಹಾಡಿನಲ್ಲಿ ಇಬ್ಬರ ಕೆಮಿಸ್ಟ್ರೀ ಕಂಡು ಫ್ಯಾನ್ಸ್​ ವಾವ್​ ಎಂದಿದ್ದಾರೆ. ಕೀರ್ತಿ ಸುರೇಶ್ ಅವರಿಗೂ ದಕ್ಷಿಣ ಭಾರತದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಾಗಿ ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ದೊಡ್ಡ ಓಪನಿಂಗ್​ ಸಿಗುವ ನಿರೀಕ್ಷೆ ಇದೆ. ಎಸ್​. ತಮನ್​ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. (Source)

ಇತರೆ ಮನರಂಜನೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. 

ಇದನ್ನೂ ಓದಿ: ‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಬಿಡುಗಡೆಗೂ ಮುನ್ನವೇ ಲೀಕ್​ ಆಯ್ತು ಮಹೇಶ್​ ಬಾಬು ಹೊಸ ಸಿನಿಮಾದ ದೃಶ್ಯಗಳು; ಫ್ಯಾನ್ಸ್​ ಗರಂ

Published On - 4:36 pm, Mon, 2 May 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ