ಸೆಂಚುರಿ ಬಾರಿಸಿದ ಸತ್ಯ; 100 ಎಪಿಸೋಡ್​ ಪೂರೈಸಿದ ಸಂಭ್ರಮ

Sathya Kannada Serial: ಪ್ರಸಾರ ಆರಂಭಿಸಿದ ಕೆಲವೇ ದಿನಗಳಲ್ಲಿ ನಂ.1 ಸ್ಥಾನಕ್ಕೆ ಜಿಗಿದಿದ್ದು ‘ಸತ್ಯ’ ಧಾರಾವಾಹಿಯ ಹೆಚ್ಚುಗಾರಿಕೆ. ಈಗ ಈ ಸೀರಿಯಲ್​100 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದ ಸಂಭ್ರಮದಲ್ಲಿದೆ.

ಸೆಂಚುರಿ ಬಾರಿಸಿದ ಸತ್ಯ; 100 ಎಪಿಸೋಡ್​ ಪೂರೈಸಿದ ಸಂಭ್ರಮ
ಸತ್ಯ ಧಾರಾವಾಹಿಯಲ್ಲಿ ಗೌತಮಿ ಜಾಧವ್​ - ಸಾಗರ್​ ಬಿಳಿಗೌಡ
Follow us
| Updated By: ರಾಜೇಶ್ ದುಗ್ಗುಮನೆ

Updated on: Apr 23, 2021 | 4:40 PM

ಕನ್ನಡ ಕಿರುತೆರೆ ಲೋಕದಲ್ಲಿ ಧಾರಾವಾಹಿಗಳ ನಡುವೆ ಸಿಕ್ಕಾಪಟ್ಟೆ ಪೈಪೋಟಿ ಇದೆ. ಎಲ್ಲ ಮನರಂಜನಾ ವಾಹಿನಿಗಳು ಧಾರಾವಾಹಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಟಿಆರ್​ಪಿಯಲ್ಲಿ ನಂ.1 ಸ್ಥಾನ ಪಡೆದುಕೊಳ್ಳಬೇಕು ಎಂದು ಎಲ್ಲರೂ ಪ್ರಯತ್ನಿಸುತ್ತಾರೆ. ಆದರೆ ಅಂಥ ಸಾಧನೆ ಸಾಧ್ಯವಾಗುವುದು ಕೆಲವೇ ಸೀರಿಯಲ್​ಗಳಿಗೆ ಮಾತ್ರ. ಟಿಆರ್​ಪಿ ರೇಸ್​ನಲ್ಲಿ ಹಲವು ವಾರಗಳ ಕಾಲ ನಂ.1 ಪಟ್ಟ ಕಾಪಾಡಿಕೊಂಡ ಸತ್ಯ ಸೀರಿಯಲ್ ಈಗ ಇನ್ನೊಂದು ಮೈಲಿಗಲ್ಲು ತಲುಪಿದೆ.

ಕಳೆದ ವರ್ಷ ಲಾಕ್​ಡೌನ್ ಸಡಿಲಿಕೆ ಆದ ಬಳಿಕ ಜೀ ಕನ್ನಡ ವಾಹಿನಿಯಲ್ಲಿ ಸತ್ಯ ಸೀರಿಯಲ್​ ಆರಂಭ ಆಗಿತ್ತು. ಕಿರುತೆರೆಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಸ್ವಪ್ನ ಕೃಷ್ಣ ಅವರು ಈ ಧಾರಾವಾಹಿಗೆ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ಬಗೆಯ ಕಥೆ ಮತ್ತು ನಿರೂಪಣೆ ಶೈಲಿಯಿಂದ ಗಮನ ಸೆಳೆಯುತ್ತಿರುವ ಈ ಸೀರಿಯಲ್​ ಜನಮೆಚ್ಚುಗೆ ಗಳಿಸಿದೆ. ಆರಂಭದಲ್ಲಿಯೇ ನಂ.1 ಸ್ಥಾನಕ್ಕೆ ಜಿಗಿದಿದ್ದು ‘ಸತ್ಯ’ ಧಾರಾವಾಹಿಯ ಹೆಚ್ಚುಗಾರಿಕೆ. ಈಗ ಈ ಧಾರಾವಾಹಿ 100 ಎಪಿಸೋಡ್​ಗಳನ್ನು ಪೂರ್ಣಗೊಳಿಸಿದ ಸಂಭ್ರಮದಲ್ಲಿದೆ.

ಸತ್ಯ ಎಂಬ ದಿಟ್ಟ ಹುಡುಗಿಯ ಕಥೆಯನ್ನು ಧಾರಾವಾಹಿ ಹೊಂದಿದೆ. ಸತ್ಯ ಪಾತ್ರದಲ್ಲಿ ನಟಿ ಗೌತಮಿ ಜಾಧವ್​ ಅಭಿನಯಿಸಿದ್ದಾರೆ. ಟಾಮ್​ ಬಾಯ್ ರೀತಿ ಇರುವ ಆ ಪಾತ್ರಕ್ಕೆ ಗೌತಮಿ ಜೀವ ತುಂಬಿದ್ದಾರೆ. ಅವರ ಹೇರ್​ಸ್ಟೈಲ್​, ಮ್ಯಾನರಿಸಂ ಮತ್ತು ಅಭಿನಯದ ಶೈಲಿಗೆ ಕಿರುತೆರೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಚಿಕ್ಕ ಮಕ್ಕಳು ಕೂಡ ಈ ಪಾತ್ರವನ್ನು ಇಷ್ಟಪಡುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ನಟಿಸಲು ಆರಂಭಿಸಿದ ಬಳಿಕ ಗೌತಮಿ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ.

ಸಾಗರ್​ ಬಿಳಿ ಗೌಡ, ಶ್ರೀನಿವಾಸ್​ ಮೂರ್ತಿ, ಅಭಿಜಿತ್​, ತ್ರಿವೇಣಿ ಮುಂತಾದವರು ಸತ್ಯ ಧಾರಾವಾಹಿಯ ಇನ್ನುಳಿದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಪ್ರೀತಿ-ಪ್ರೇಮ, ಕಾಮಿಡಿ, ಫ್ಯಾಮಿಲಿ ಸೆಂಟಿಮೆಂಟ್​ ಸೇರಿದಂತೆ ಅನೇಕ ಬಗೆಯಲ್ಲಿ ಪ್ರೇಕ್ಷಕರನ್ನು ಈ ಧಾರಾವಾಹಿ ಸೆಳೆದುಕೊಳ್ಳುತ್ತಿದೆ. 100 ಸಂಚಿಕೆಗಳನ್ನು ಪೂರೈಸಿರುವುದು ಇಡೀ ತಂಡಕ್ಕೆ ಸಂಭ್ರಮ ತಂದಿದೆ. ಜೀ ಕನ್ನಡ ವಾಹಿನಿ ಈ ಬಗ್ಗೆ ಹೆಮ್ಮೆಯ ಮಾತುಗಳನ್ನು ಆಡುತ್ತಿದೆ.

‘ಮಹಿಳೆಯರಿಗೆ ಪ್ರೇರಕಶಕ್ತಿಯಾಗಿರುವ ಸತ್ಯ ಧಾರಾವಾಹಿ ನೂರು ಕಂತಿನ ಮೈಲಿಗಲ್ಲು ಮುಟ್ಟಿರುವುದು ಅವರ ಅಭೂತಪೂರ್ವ ಪ್ರೀತಿಗೆ ದ್ಯೋತಕವಾಗಿದೆ. ಜೀ ಕನ್ನಡ ವೀಕ್ಷಕರನ್ನು ರಂಜಿಸುವ ಮತ್ತಷ್ಟು ವಿನೂತನ ಕಾರ್ಯಕ್ರಮಗಳನ್ನು ನಾವು ನೀಡಲು ಇದು ಪ್ರೇರಣೆ ನೀಡಿದೆ’ ಎಂದು ಜೀ ಕನ್ನಡ ವಾಹಿನಿಯ ಬ್ಯುಸಿನೆಸ್​ ಹೆಡ್​ ರಾಘವೇಂದ್ರ ಹುಣಸೂರು ಹೇಳಿದ್ದಾರೆ.

ಇದನ್ನೂ ಓದಿ: ‘ನಾಗಿಣಿ 2’ ತ್ರಿಶೂಲ್ ಹಾಗೂ ಶಿವಾನಿ ಅದ್ದೂರಿ ಆರತಕ್ಷತೆ; ಅಭಿಮಾನಿಗಳಿಗೆ ಹಬ್ಬದೂಟ

ಟಿ.ಎನ್.​ ಸೀತಾರಾಮ್ ಹೊಸ ಧಾರಾವಾಹಿಗೆ ಟೈಟಲ್​ ಫಿಕ್ಸ್​; ಮೇಧಾ ವಿದ್ಯಾಭೂಷಣ​ ನಾಯಕಿ!

(Sathya Kannada Serial completes 100 successful episodes on Zee Kannada)

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ