AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sathyaraj: ಪ್ರಧಾನಿ ಮೋದಿ ಪಾತ್ರ ಮಾಡೋ ವಿಚಾರ; ಕೊನೆಗೂ ಮೌನಮುರಿದ ಕಟ್ಟಪ್ಪ

ತಮಿಳು ನ್ಯೂಸ್ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಸತ್ಯರಾಜ್. ‘ನಾನು ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್​ನಲ್ಲಿ ನಟಿಸುತ್ತೇನೆ ಎನ್ನುವ ಸುದ್ದಿ ಇದೆ. ಆದರೆ, ಯಾರೋಬ್ಬರೂ ಪ್ರಧಾನಿ ಮೋದಿ ಪಾತ್ರ ಮಾಡಿ ಎಂದು ನನ್ನನ್ನು ಸಂಪರ್ಕಿಸಿಲ್ಲ’ ಎಂದಿದ್ದಾರೆ ಅವರು.

Sathyaraj: ಪ್ರಧಾನಿ ಮೋದಿ ಪಾತ್ರ ಮಾಡೋ ವಿಚಾರ; ಕೊನೆಗೂ ಮೌನಮುರಿದ ಕಟ್ಟಪ್ಪ
ಮೋದಿ-ಸತ್ಯರಾಜ್
ರಾಜೇಶ್ ದುಗ್ಗುಮನೆ
|

Updated on: May 22, 2024 | 7:28 AM

Share

ತೆಲುಗು ನಟ ಸತ್ಯರಾಜ್ (Sathyaraj) ಅವರು ‘ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪನ ಪಾತ್ರ ಮಾಡೋ ಮೂಲಕ ಎಲ್ಲರ ಮನ ಗೆದ್ದರು. ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಾ ಬಂದಿರುವ ಅವರು ಈ ಚಿತ್ರದಿಂದ ದೊಡ್ಡ ಅಭಿಮಾನಿ ಬಳಗವನ್ನು ಪಡೆದರು. ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್​ನಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಈ ಬಗ್ಗೆ ಹರಿದಾಡಿರೋ ವದಂತಿ ಬಗ್ಗೆ ಸ್ವತಃ ಅವರೇ ಮಾತನಾಡಿದ್ದಾರೆ. ಆದರೆ, ಇದರಲ್ಲಿ ಸತ್ಯ ಇಲ್ಲ ಎಂದಿದ್ದಾರೆ ಸತ್ಯರಾಜ್.

ತಮಿಳು ನ್ಯೂಸ್ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ ಸತ್ಯರಾಜ್. ‘ನಾನು ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್​ನಲ್ಲಿ ನಟಿಸುತ್ತೇನೆ ಎನ್ನುವ ಸುದ್ದಿ ಇದೆ. ಆದರೆ, ಯಾರೋಬ್ಬರೂ ಪ್ರಧಾನಿ ಮೋದಿ ಪಾತ್ರ ಮಾಡಿ ಎಂದು ನನ್ನನ್ನು ಸಂಪರ್ಕಿಸಿಲ್ಲ. ಜನರು ಸೋಶಿಯಲ್ ಮೀಡಿಯಾದಲ್ಲಿ ವದಂತಿ ಹಬ್ಬಿಸಿದ್ದಾರೆ’ ಎಂದಿದ್ದಾರೆ ಸತ್ಯರಾಜ್.

‘ಯುವತಿಯ ಕೊಲೆ, ಅಕ್ರಮ ಸಂಬಂಧವೇ ಕಾರಣ? ಈ ರೀತಿಯ ಸುದ್ದಿಗಳು ಈ ಮೊದಲು ನ್ಯೂಸ್ ಪೇಪರ್​ಗಳಲ್ಲಿ ಬರುತ್ತಿತ್ತು. ಇದೇ ರೀತಿ, ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ನಿಜವಿಲ್ಲದ ವಿಚಾರಗಳನ್ನು ಹರಡುವ ಕೆಲಸ ಆಗುತ್ತಿದೆ’ ಎಂದಿದ್ದಾರೆ ಸತ್ಯರಾಜ್. ಈ ಮೂಲಕ ಪ್ರಧಾನಿ ಮೋದಿ ಬಯೋಪಿಕ್​ನಲ್ಲಿ ನಟಿಸಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಸತ್ಯರಾಜ್ ಅವರು ದ್ರಾವಿಡ ಚಳುವಳಿಯನ್ನು ಬೆಂಬಲಿಸುವವರು. ದ್ರಾವಿಡ ವಿರೋಧಿ ಚಿಂತನೆಗಳನ್ನು ಹೊಂದಿರುವ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ಅವರು ಹೇಳಿದ್ದರು. ಈ ಮಧ್ಯೆ ಅವರು ಪ್ರಧಾನಿ ನರೇಂದ್ರ ಬಯೋಪಿಕ್​ನ ಒಪ್ಪಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ: ಮೋದಿ ಪಾತ್ರದಲ್ಲಿ ಕಟ್ಟಪ್ಪ ಅಲಿಯಾಸ್ ಸತ್ಯರಾಜ್​? ಬರಲಿದೆ ಹೊಸ ಬಯೋಪಿಕ್​

ಸತ್ಯರಾಜ್​ ಅವರು ‘ವೆಪಮ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಸೂಪರ್​ಹ್ಯೂಮನ್ ಪಾತ್ರ ಮಾಡುತ್ತಿದ್ದಾರೆ. ರಾಜೀವ್ ಮೆನನ್ ಹಾಗೂ ವಸಂತ್ ರವಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.  ಈ ಚಿತ್ರ ಮೇ 23ರಂದು ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ