AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಇಲ್ಲದೆ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಖ್ಯಾತ ಸೀರಿಯಲ್​ ನಟಿಯರು

Savdhaan India: ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ನಟಿಯರಿಬ್ಬರು ದುಡ್ಡು ತೆಗೆದುಕೊಂಡು ಹೋಗುತ್ತಿರುವುದು ಪತ್ತೆ ಆಗಿದೆ. ಹಿಡಿದು ವಿಚಾರಣೆ ನಡೆಸಿದಾಗ ದುಡ್ಡು ಕದ್ದಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ.

ಕೆಲಸ ಇಲ್ಲದೆ ಕಳ್ಳತನ ಮಾಡಿ ಸಿಕ್ಕಿ ಬಿದ್ದ ಖ್ಯಾತ ಸೀರಿಯಲ್​ ನಟಿಯರು
ಕಳ್ಳತನ ಮಾಡಿ ಸಿಕ್ಕಿ ಬಿದ್ದ ಖ್ಯಾತ ಸೀರಿಯಲ್​ ನಟಿಯರು
Follow us
ಮದನ್​ ಕುಮಾರ್​
| Updated By: Digi Tech Desk

Updated on:Aug 10, 2021 | 11:14 AM

ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ಪರಿಣಾಮ ಹಲವು ಕಡೆಗಳಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿತ್ತು. ಇದರಿಂದ ಅನೇಕರು ಕೆಲಸ ಇಲ್ಲದೆ ಮನೆಯಲ್ಲಿ ಕೂರುವುದು ಅನಿವಾರ್ಯ ಆಗಿತ್ತು. ಸಿನಿಮಾ ಮತ್ತು ಧಾರಾವಾಹಿ ಶೂಟಿಂಗ್​ ಕೂಡ ಸ್ಥಗಿತ ಆಗಿದ್ದರಿಂದ ಕಲಾವಿದರು ಮತ್ತು ತಂತ್ರಜ್ಞರ ಪರಿಸ್ಥಿತಿ ಸಹ ಹೀನಾಯ ಆಯಿತು. ಪರಿಣಾಮವಾಗಿ ಇಬ್ಬರು ನಟಿಯರು ಕಳ್ಳತನದ ಹಾದಿ ಹಿಡಿದಿದ್ದಾರೆ. ಲಕ್ಷಾಂತರ ರೂಪಾಯಿ ಕದ್ದು ಈಗ ಪೊಲೀಸರ ವಶವಾಗಿದ್ದಾರೆ.

ಹಿಂದಿ ಸೀರಿಯಲ್​ಗಳಲ್ಲಿ ನಟಿಸಿದ್ದ ನಟಿಯರಾದ ಸುರಭಿ ಸುರೇಂದ್ರ ಲಾಲ್​ ಶ್ರೀವತ್ಸ ಹಾಗೂ ಮೊಸಿನಾ ಮುಕ್ತರ್​ ಶೇಕ್​ ಅವರೇ ಕಳ್ಳತನದಲ್ಲಿ ಸಿಕ್ಕಿಬಿದ್ದಿರುವ ನಟಿಯರು. ಶೂಟಿಂಗ್​ ಇಲ್ಲದೇ ಇರುವಾಗ ಅವರು ಮುಂಬೈನ ಒಂದು ಐಷಾರಾಮಿ ಪಿಜಿಗೆ ಸೇರಿಕೊಂಡಿದ್ದರು. ಮೇ 18ರಂದು ಪಿಜಿಗೆ ಸೇರ್ಪಡೆಯಾದ ಈ ನಟಿಯರು ಅದೇ ಪಿಜಿಯಲ್ಲಿದ್ದ ಮಹಿಳೆಯ ಲಾಕರ್​ನಿಂದ 3.28 ಲಕ್ಷ ರೂ.ಗಳನ್ನು ಕದ್ದಿದ್ದಾರೆ. ಹಣ ಕಳೆದುಕೊಂಡ ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು.

ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಸುರಭಿ ಸುರೇಂದ್ರ ಲಾಲ್​ ಶ್ರೀವತ್ಸ ಹಾಗೂ ಮೊಸಿನಾ ಮುಕ್ತರ್​ ಶೇಕ್​ ದುಡ್ಡು ತೆಗೆದುಕೊಂಡು ಹೋಗುತ್ತಿರುವುದು ಪತ್ತೆ ಆಗಿದೆ. ಹಿಡಿದು ವಿಚಾರಣೆ ನಡೆಸಿದಾಗ ದುಡ್ಡು ಕದ್ದಿರುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಸಾವಧಾನ್​ ಇಂಡಿಯಾ, ಕ್ರೈಂ ಪಟ್ರೋಲ್​ ಮುಂತಾದ ಜನಪ್ರಿಯ ಸೀರಿಯಲ್​ಗಳಲ್ಲಿ ಈ ನಟಿಯರು ಬಣ್ಣ ಹಚ್ಚಿದ್ದರು. ಕೆಲವು ವೆಬ್​ ಸಿರೀಸ್​ಗಳಲ್ಲೂ ಕಾಣಿಸಿಕೊಂಡಿದ್ದರು ಎಂಬುದು ತಿಳಿದುಬಂದಿದೆ.

ಪೊಲೀಸರ ಅತಿಥಿಗಳಾಗಿರುವ ಈ ನಟಿಯರಿಂದ ಸದ್ಯ 50 ಸಾವಿರ ರೂ. ವಶಪಡಿಸಿಕೊಳ್ಳಲಾಗಿದೆ. ನ್ಯಾಯಾಲಯದ ಮುಂದೆ ಇಬ್ಬರನ್ನೂ ಹಾಜರು ಪಡಿಸಲಾಗಿದ್ದು, ಜೂ.23ರವರೆಗೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಲಾಕ್​ ಡೌನ್​ ಕಾರಣದಿಂದ ಅನೇಕರ ಪರಿಸ್ಥಿತಿ ಕಷ್ಟ ಆಗಿದೆ. ಕಳೆದ ವರ್ಷ ಲಾಕ್​ ಡೌನ್​ ಸಂದರ್ಭದಲ್ಲಿ ಕೆಲವರು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ಈಗ ನಿಧಾನವಾಗಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗುತ್ತಿದೆ. ಕೆಲವು ನಗರಗಳಲ್ಲಿ ಧಾರಾವಾಹಿ, ಸಿನಿಮಾ ಶೂಟಿಂಗ್​ಗೂ ಅವಕಾಶ ಸಿಕ್ಕಿದೆ.

ಇದನ್ನೂ ಓದಿ:

ಕಳ್ಳತನ ಮಾಡಿ ಖಾರದಪುಡಿ ಮನೆ ತುಂಬಾ ಚೆಲ್ಲುತ್ತಿದ್ದ ಅಸಲಿ ಕಾರಣ ಬಯಲು; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

ಅತ್ತಿಗೆ-ಮೈದುನನ ನಡುವೆ ಇದೆಂಥಾ ಸಂಬಂಧ? ಆ ಒಂದು ದೃಶ್ಯದಿಂದ ಸಿಡಿದೆದ್ದ ಜನರು

Published On - 1:48 pm, Fri, 18 June 21

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ