AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sayantani Ghosh: ಬ್ರಾ ಸೈಜ್​ ಕೇಳಿದ ಅಭಿಮಾನಿಗೆ ಗ್ರಹಚಾರ ಬಿಡಿಸಿದ ಕಿರುತೆರೆ ನಟಿ

ಕಿರುತೆರೆ ನಟಿ​ ಈ ಬಗ್ಗೆ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ತಮಗಾದ ಕಹಿ ಅನುಭವ ಹಾಗೂ ಅದಕ್ಕೆ ನೀಡಿದ ಉತ್ತರದ ಬಗ್ಗೆ ಬರೆದುಕೊಂಡಿದ್ದಾರೆ.

Sayantani Ghosh: ಬ್ರಾ ಸೈಜ್​ ಕೇಳಿದ ಅಭಿಮಾನಿಗೆ ಗ್ರಹಚಾರ ಬಿಡಿಸಿದ ಕಿರುತೆರೆ ನಟಿ
ಸಾಯಂತನಿ ಘೋಷ್​
ರಾಜೇಶ್ ದುಗ್ಗುಮನೆ
| Edited By: |

Updated on:Apr 09, 2021 | 5:53 PM

Share

ಸೆಲೆಬ್ರಿಟಿಗಳು ತಾವು ಹಾಕುವ ಬಟ್ಟೆಯ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಆದರೆ, ಅವರು ಹಾಕುವ ದಿರಿಸಿನ ಕಾರಣಕ್ಕಾಗಿ ಕೆಲವೊಮ್ಮೆ ಅಭಿಮಾನಿಗಳಿಂದ ಚಿತ್ರ-ವಿಚಿತ್ರ ಪ್ರಶ್ನೆಗಳನ್ನು ಎದುರಿಸಿ ಪೇಚಿಗೀಡಾಗುತ್ತಾರೆ. ಈ ರೀತಿ ಪ್ರಶ್ನೆ ಕೇಳುವವರಿಗೆ ಕೆಲವರು ಧೈರ್ಯದಿಂದ ತಿರುಗೇಟು ನೀಡಿದರೆ, ಇನ್ನೂ ಕೆಲವರು ತಮಗೇಕೆ ಎಂದು ಸುಮ್ಮನಾಗುತ್ತಾರೆ. ಈಗ ಹಿಂದಿ ಕಿರುತೆರೆ ನಟಿ ಸಾಯಂತನಿ ಘೋಷ್​ಗೂ ಇದೇ ರೀತಿಯ ವಿಚಿತ್ರ ಪ್ರಶ್ನೆ ಎದುರಾಗಿತ್ತು. ಅದಕ್ಕೆ ಅವರು ತಕ್ಕ ಉತ್ತರ ನೀಡಿದ್ದಾರೆ. ಸಾಯಂತನಿ ಘೋಷ್​ ಈ ಬಗ್ಗೆ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ತಮಗಾದ ಕಹಿ ಅನುಭವ ಹಾಗೂ ಅದಕ್ಕೆ ನೀಡಿದ ಉತ್ತರದ ಬಗ್ಗೆ ಬರೆದುಕೊಂಡಿದ್ದಾರೆ. ನಿನ್ನೆ ಅಭಿಮಾನಿಗಳ ಜತೆ ಮಾತುಕತೆ ನಡೆಸುವಾಗ ಓರ್ವ ನನ್ನ ಬ್ರಾ ಸೈಜ್​ ಕೇಳಿದೆ. ಆತನಿಗೆ ನಾನು ಸೂಕ್ತ ಉತ್ತರ ನೀಡಿದ್ದೇನೆ. ಆದಾಗ್ಯೂ ಈ ಬಗ್ಗೆ ಸಾಕಷ್ಟು ಮಾತಾಡುವುದು ಇದೆ ಎಂದು ನನಗೆ ಅನ್ನಿಸುತ್ತಿದೆ. ಬಾಡಿ ಶೇಮಿಂಗ್​ ಮಾಡುವುದು ತಪ್ಪು. ಈ ರೀತಿಯ ಅಸಭ್ಯ ಪ್ರಶ್ನೆ ಕೇಳುವವರ ಮೆಂಟಾಲಿಟಿಯನ್ನು ಅಳತೆ ಮಾಡೋಕೆ ಪ್ರಯತ್ನ ಮಾಡಿದ್ದೇನೆ ಎಂದು ಸಾಯಂತನಿ ಹೇಳಿದ್ದಾರೆ.

ಮುಂದೆ ಬರಬಹುದಾದ ಟ್ರೋಲ್​ಗಳ ಬಗ್ಗೆಯೂ ಸಾಯಂತನಿ ಘೋಷ್ ಈಗಲೇ ಉತ್ತರಿಸಿದ್ದಾರೆ. ಮುಂದಿನ ಸಲ ಯಾರಾದರೂ ನನ್ನ ಕಪ್​ ಸೈಜ್​ ಕೇಳಿದರೆ ನಾನು ಏನು ಉತ್ತರಿಸಬೇಕು ಎಂಬುದು ನನಗೆ ಗೊತ್ತಿದೆ. ನನಗೆ ದೊಡ್ಡ ಕಪ್​ ಎಂದರೆ ಇಷ್ಟ. ಕಾಫಿ ಲವರ್ ಎಂದಮೇಲೆ ದೊಡ್ಡ ಕಪ್​ಅನ್ನೇ ಇಷ್ಟಪಡಬೇಕಲ್ಲವೆ ಎಂದು ವಿಡಂಬನಾತ್ಮಕವಾಗಿ ಸಾಯಂತನಿ ಮಾತನಾಡಿದ್ದಾರೆ.

ಸಾಯಂತನಿ ಹಿಂದಿಯಲ್ಲಿ ಮನೆಮಾತಾಗಿದ್ದಾರೆ. ಅವರು, ಸಾಕಷ್ಟು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕುಂಕುಮ್​-ಏಕ್​ ಪ್ಯಾರ್​ ಸಾ ಬಂಧನ್​, ನಾಮಕರಣ್​, ಬ್ಯಾರಿಸ್ಟರ್​ ಬಾಬು, ಸಂತೋಷಿ ಮಾ, ಮಹಾಭಾರತ್​, ನಾಗಿಣ್​ 4 ಸೇರಿ ಹಲವು ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ರಾಜು ಅಂಕಲ್​, ಸೇರಿ ಸಾಕಷ್ಟು ಬೆಂಗಾಳಿ ಸಿನಿಮಾಗಳಲ್ಲೂ ಸಾಯಂತನಿ ನಟಿಸಿದ್ದಾರೆ.

ಇದನ್ನೂ ಒದಿ: ‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ

Published On - 4:38 pm, Fri, 9 April 21

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್