Sign In

By signing in or creating an account, you agree with Associated Broadcasting Company's Terms & Conditions and Privacy Policy.

Sayantani Ghosh: ಬ್ರಾ ಸೈಜ್​ ಕೇಳಿದ ಅಭಿಮಾನಿಗೆ ಗ್ರಹಚಾರ ಬಿಡಿಸಿದ ಕಿರುತೆರೆ ನಟಿ

ಕಿರುತೆರೆ ನಟಿ​ ಈ ಬಗ್ಗೆ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ತಮಗಾದ ಕಹಿ ಅನುಭವ ಹಾಗೂ ಅದಕ್ಕೆ ನೀಡಿದ ಉತ್ತರದ ಬಗ್ಗೆ ಬರೆದುಕೊಂಡಿದ್ದಾರೆ.

Sayantani Ghosh: ಬ್ರಾ ಸೈಜ್​ ಕೇಳಿದ ಅಭಿಮಾನಿಗೆ ಗ್ರಹಚಾರ ಬಿಡಿಸಿದ ಕಿರುತೆರೆ ನಟಿ
ಸಾಯಂತನಿ ಘೋಷ್​
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Apr 09, 2021 | 5:53 PM

ಸೆಲೆಬ್ರಿಟಿಗಳು ತಾವು ಹಾಕುವ ಬಟ್ಟೆಯ ಮೂಲಕ ಸುದ್ದಿ ಆಗುತ್ತಲೇ ಇರುತ್ತಾರೆ. ಆದರೆ, ಅವರು ಹಾಕುವ ದಿರಿಸಿನ ಕಾರಣಕ್ಕಾಗಿ ಕೆಲವೊಮ್ಮೆ ಅಭಿಮಾನಿಗಳಿಂದ ಚಿತ್ರ-ವಿಚಿತ್ರ ಪ್ರಶ್ನೆಗಳನ್ನು ಎದುರಿಸಿ ಪೇಚಿಗೀಡಾಗುತ್ತಾರೆ. ಈ ರೀತಿ ಪ್ರಶ್ನೆ ಕೇಳುವವರಿಗೆ ಕೆಲವರು ಧೈರ್ಯದಿಂದ ತಿರುಗೇಟು ನೀಡಿದರೆ, ಇನ್ನೂ ಕೆಲವರು ತಮಗೇಕೆ ಎಂದು ಸುಮ್ಮನಾಗುತ್ತಾರೆ. ಈಗ ಹಿಂದಿ ಕಿರುತೆರೆ ನಟಿ ಸಾಯಂತನಿ ಘೋಷ್​ಗೂ ಇದೇ ರೀತಿಯ ವಿಚಿತ್ರ ಪ್ರಶ್ನೆ ಎದುರಾಗಿತ್ತು. ಅದಕ್ಕೆ ಅವರು ತಕ್ಕ ಉತ್ತರ ನೀಡಿದ್ದಾರೆ. ಸಾಯಂತನಿ ಘೋಷ್​ ಈ ಬಗ್ಗೆ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ತಮಗಾದ ಕಹಿ ಅನುಭವ ಹಾಗೂ ಅದಕ್ಕೆ ನೀಡಿದ ಉತ್ತರದ ಬಗ್ಗೆ ಬರೆದುಕೊಂಡಿದ್ದಾರೆ. ನಿನ್ನೆ ಅಭಿಮಾನಿಗಳ ಜತೆ ಮಾತುಕತೆ ನಡೆಸುವಾಗ ಓರ್ವ ನನ್ನ ಬ್ರಾ ಸೈಜ್​ ಕೇಳಿದೆ. ಆತನಿಗೆ ನಾನು ಸೂಕ್ತ ಉತ್ತರ ನೀಡಿದ್ದೇನೆ. ಆದಾಗ್ಯೂ ಈ ಬಗ್ಗೆ ಸಾಕಷ್ಟು ಮಾತಾಡುವುದು ಇದೆ ಎಂದು ನನಗೆ ಅನ್ನಿಸುತ್ತಿದೆ. ಬಾಡಿ ಶೇಮಿಂಗ್​ ಮಾಡುವುದು ತಪ್ಪು. ಈ ರೀತಿಯ ಅಸಭ್ಯ ಪ್ರಶ್ನೆ ಕೇಳುವವರ ಮೆಂಟಾಲಿಟಿಯನ್ನು ಅಳತೆ ಮಾಡೋಕೆ ಪ್ರಯತ್ನ ಮಾಡಿದ್ದೇನೆ ಎಂದು ಸಾಯಂತನಿ ಹೇಳಿದ್ದಾರೆ.

ಮುಂದೆ ಬರಬಹುದಾದ ಟ್ರೋಲ್​ಗಳ ಬಗ್ಗೆಯೂ ಸಾಯಂತನಿ ಘೋಷ್ ಈಗಲೇ ಉತ್ತರಿಸಿದ್ದಾರೆ. ಮುಂದಿನ ಸಲ ಯಾರಾದರೂ ನನ್ನ ಕಪ್​ ಸೈಜ್​ ಕೇಳಿದರೆ ನಾನು ಏನು ಉತ್ತರಿಸಬೇಕು ಎಂಬುದು ನನಗೆ ಗೊತ್ತಿದೆ. ನನಗೆ ದೊಡ್ಡ ಕಪ್​ ಎಂದರೆ ಇಷ್ಟ. ಕಾಫಿ ಲವರ್ ಎಂದಮೇಲೆ ದೊಡ್ಡ ಕಪ್​ಅನ್ನೇ ಇಷ್ಟಪಡಬೇಕಲ್ಲವೆ ಎಂದು ವಿಡಂಬನಾತ್ಮಕವಾಗಿ ಸಾಯಂತನಿ ಮಾತನಾಡಿದ್ದಾರೆ.

ಸಾಯಂತನಿ ಹಿಂದಿಯಲ್ಲಿ ಮನೆಮಾತಾಗಿದ್ದಾರೆ. ಅವರು, ಸಾಕಷ್ಟು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಕುಂಕುಮ್​-ಏಕ್​ ಪ್ಯಾರ್​ ಸಾ ಬಂಧನ್​, ನಾಮಕರಣ್​, ಬ್ಯಾರಿಸ್ಟರ್​ ಬಾಬು, ಸಂತೋಷಿ ಮಾ, ಮಹಾಭಾರತ್​, ನಾಗಿಣ್​ 4 ಸೇರಿ ಹಲವು ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ರಾಜು ಅಂಕಲ್​, ಸೇರಿ ಸಾಕಷ್ಟು ಬೆಂಗಾಳಿ ಸಿನಿಮಾಗಳಲ್ಲೂ ಸಾಯಂತನಿ ನಟಿಸಿದ್ದಾರೆ.

ಇದನ್ನೂ ಒದಿ: ‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ

Published On - 4:38 pm, Fri, 9 April 21

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ