AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

ಶನಿವಾರ (ಅಕ್ಟೋಬರ್ 30) ಕೋಣನ ಕುಂಟೆ ಸಮೀಪ ಈ ಅಪಘಾತ ಸಂಭವಿಸಿತ್ತು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ.

ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ
ನಾಗಭೂಷಣ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 03, 2023 | 10:35 AM

Share

ಹಾಸ್ಯ ನಟ ನಾಗಭೂಷಣ್ (Naga Bhushan) ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಇತ್ತೀಚೆಗೆ ಅವರ ಕಾರು ಅಪಘಾತಕ್ಕೆ ಒಳಗಾಯಿತು. ಈ ವೇಳೆ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪ್ರೇಮಾ ಹೆಸರಿನ ಮಹಿಳೆ ಮೃತಪಟ್ಟರು. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಇದರ ಜೊತೆಗೆ ನಾಗಭೂಷಣ್ ಮೇಲೆ ಮತ್ತೊಂದು ಕೇಸ್ ದಾಖಲು ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಹಾನಿಯಾದ ಬಗ್ಗೆ ಕೇಸ್ ದಾಖಲಾಗುವ ಸಾಧ್ಯತೆ ಇದೆ.

ಶನಿವಾರ (ಅಕ್ಟೋಬರ್ 30) ಕೋಣನ ಕುಂಟೆ ಸಮೀಪ ಈ ಅಪಘಾತ ಸಂಭವಿಸಿತ್ತು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ. ಕಂಬಕ್ಕೆ ಹಾನಿಯಾದ ಬಗ್ಗೆ ಟ್ರಾಫಿಕ್ ಪೊಲೀಸರು ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 3) ನಾಗಭೂಷಣ್ ಮೇಲೆ ಬೆಸ್ಕಾಂ ಅಧಿಕಾರಿಗಳು ದೂರು ನೀಡುವ ಸಾಧ್ಯತೆ ಇದೆ. ದೂರು ಪಡೆದು ನಾಗಭೂಷಣ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲು ಕೆಎಸ್ ಲೇಔಟ್ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ನಾಗಭೂಷಣ್ ಕಾರು ಅಪಘಾತ, ಪ್ರಕರಣದ ಬಗ್ಗೆ ವಿವರ ನೀಡಿದ ಡಿಸಿಪಿ

 ಇಂದು ವಿಚಾರಣೆ ಸಾಧ್ಯತೆ

ನಟ ನಾಗಭೂಷಣ್ ಅವರಿಗೆ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ. ಅವರಿಗೆ ವಿಚಾರಣೆಗೆ ಬರುವಂತೆ ಈಗಾಗಲೇ ನೋಟಿಸ್ ನೀಡಲಾಗಿದೆ. ಇಂದು ನಾಗಭೂಷಣ್ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಪೊಲೀಸರು ನಾಗಭೂಷಣ್ ಅವರ ಹೇಳಿಕೆ ಪಡೆಯಲಿದ್ದಾರೆ. ಇನ್ನು, ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್​ಟಿಓ ಅಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಈ ಮೂಲಕ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ