AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

ಶನಿವಾರ (ಅಕ್ಟೋಬರ್ 30) ಕೋಣನ ಕುಂಟೆ ಸಮೀಪ ಈ ಅಪಘಾತ ಸಂಭವಿಸಿತ್ತು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ.

ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ
ನಾಗಭೂಷಣ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 03, 2023 | 10:35 AM

Share

ಹಾಸ್ಯ ನಟ ನಾಗಭೂಷಣ್ (Naga Bhushan) ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಇತ್ತೀಚೆಗೆ ಅವರ ಕಾರು ಅಪಘಾತಕ್ಕೆ ಒಳಗಾಯಿತು. ಈ ವೇಳೆ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಪ್ರೇಮಾ ಹೆಸರಿನ ಮಹಿಳೆ ಮೃತಪಟ್ಟರು. ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಇದರ ಜೊತೆಗೆ ನಾಗಭೂಷಣ್ ಮೇಲೆ ಮತ್ತೊಂದು ಕೇಸ್ ದಾಖಲು ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬಕ್ಕೆ ಹಾನಿಯಾದ ಬಗ್ಗೆ ಕೇಸ್ ದಾಖಲಾಗುವ ಸಾಧ್ಯತೆ ಇದೆ.

ಶನಿವಾರ (ಅಕ್ಟೋಬರ್ 30) ಕೋಣನ ಕುಂಟೆ ಸಮೀಪ ಈ ಅಪಘಾತ ಸಂಭವಿಸಿತ್ತು. ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ಕಾರು ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಕೂಡ ಹಾನಿಯಾಗಿದೆ. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ನಾಗಭೂಷಣ್ ವಿರುದ್ಧ್ ದೂರು ದಾಖಲು ಮಾಡುವ ಸಾಧ್ಯತೆ ಇದೆ. ಕಂಬಕ್ಕೆ ಹಾನಿಯಾದ ಬಗ್ಗೆ ಟ್ರಾಫಿಕ್ ಪೊಲೀಸರು ಬೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 3) ನಾಗಭೂಷಣ್ ಮೇಲೆ ಬೆಸ್ಕಾಂ ಅಧಿಕಾರಿಗಳು ದೂರು ನೀಡುವ ಸಾಧ್ಯತೆ ಇದೆ. ದೂರು ಪಡೆದು ನಾಗಭೂಷಣ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಲು ಕೆಎಸ್ ಲೇಔಟ್ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ನಾಗಭೂಷಣ್ ಕಾರು ಅಪಘಾತ, ಪ್ರಕರಣದ ಬಗ್ಗೆ ವಿವರ ನೀಡಿದ ಡಿಸಿಪಿ

 ಇಂದು ವಿಚಾರಣೆ ಸಾಧ್ಯತೆ

ನಟ ನಾಗಭೂಷಣ್ ಅವರಿಗೆ ಸ್ಟೇಷನ್ ಬೇಲ್ ನೀಡಿ ಕಳುಹಿಸಲಾಗಿದೆ. ಅವರಿಗೆ ವಿಚಾರಣೆಗೆ ಬರುವಂತೆ ಈಗಾಗಲೇ ನೋಟಿಸ್ ನೀಡಲಾಗಿದೆ. ಇಂದು ನಾಗಭೂಷಣ್ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ವೇಳೆ ಪೊಲೀಸರು ನಾಗಭೂಷಣ್ ಅವರ ಹೇಳಿಕೆ ಪಡೆಯಲಿದ್ದಾರೆ. ಇನ್ನು, ಕಾರಿನ ಐಎಂವಿ ಟೆಸ್ಟ್ ಮಾಡಲು ಆರ್​ಟಿಓ ಅಧಿಕಾರಿಗಳಿಗೆ ಪೊಲೀಸರು ಪತ್ರ ಬರೆದಿದ್ದಾರೆ. ಈ ಮೂಲಕ ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?