AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಈಗ ಲೀಕ್ ಆಗಿರುವ ಫೋಟೋದಲ್ಲಿ ಯಾವುದೇ ಕಲಾವಿದರು ಕಾಣಿಸಿಕೊಂಡಿಲ್ಲವಾದರೂ, ಚಿತ್ರದಲ್ಲಿ ಬಳಸಲಾಗುತ್ತಿರುವ ಬೃಹತ್ ಬ್ಲೂ-ಸ್ಕ್ರೀನ್‌ಗಳು ಈ ಸೀಕ್ವೆನ್ಸ್‌ಗೆ ಬೇಕಾದ ಹೈ-ಲೆವೆಲ್ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವದ ಮುನ್ಸೂಚನೆಯನ್ನು ನೀಡುತ್ತಿವೆ. ಆದರೆ ಪದೇ ಪದೇ ಈ ರೀತಿ ಲೀಕ್ ಆಗುತ್ತಿರುವುದರಿಂದ ಸಿನಿಮಾದ ಹಲವು ಅಂಶಗಳು ಬಹಿರಂಗ ಆದಂತೆ ಆಗುತ್ತಿದೆ.

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ
Mahesh Babu, Varanasi Leaked Photo
ಮದನ್​ ಕುಮಾರ್​
|

Updated on: May 31, 2026 | 12:42 PM

Share

ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಹಾಗೂ ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿರುವ ‘ವಾರಣಾಸಿ’ (Varanasi) ಸಿನಿಮಾದ ಸೆಟ್‌ನಿಂದ ಹೊಸ ಫೋಟೋವೊಂದು ಆನ್‌ಲೈನ್‌ನಲ್ಲಿ ಸೋರಿಕೆಯಾಗಿದೆ. ಚಿತ್ರತಂಡ ಎಷ್ಟು ಮುನ್ನೆಚ್ಚರಿಕೆ ವಹಿಸಿದರೂ ಸೆಟ್‌ನ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಈಗ ರಾಜಮೌಳಿ (SS Rajamouli) ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ವರದಿಗಳ ಪ್ರಕಾರ, ಮೇ 26ರಂದು ಸೋರಿಕೆಯಾದ ಈ ಹೊಸ ಫೋಟೋದಲ್ಲಿ ಸಿನಿಮಾದ ಅದ್ದೂರಿ ಸೆಟ್ ವಿನ್ಯಾಸ ಕಣ್ಣಿಗೆ ಕಟ್ಟುವಂತಿದೆ. ಬೃಹತ್ ಬ್ಲೂ-ಸ್ಕ್ರೀನ್ ಹಿನ್ನೆಲೆಯೊಂದಿಗೆ ಕಲ್ಲಿನ ಕೆತ್ತನೆಗಳು ಮತ್ತು ಕಲಾತ್ಮಕವಾದ ಕಲ್ಲಿನ ಕಂಬಗಳು ಈ ಫೋಟೋದಲ್ಲಿ ಕಾಣಿಸಿಕೊಂಡಿವೆ. ಇದು ಚಿತ್ರದ ಅತ್ಯಂತ ಪ್ರಮುಖ ಭಾಗವಾದ ‘ಉಗ್ರಭಟ್ಟಿ ಗುಹೆಗಳ’ ಸೀಕ್ವೆನ್ಸ್‌ನ ಸೆಟ್ ಎನ್ನಲಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಮಹೇಶ್ ಬಾಬು ಹಾಗೂ ಪ್ರಿಯಾಂಕಾ ಚೋಪ್ರಾ ಅವರ ಕ್ಯಾರೆಕ್ಟರ್ ಪೋಸ್ಟರ್‌ಗಳಲ್ಲಿ ಈ ಗುಹೆಯ ಸಣ್ಣ ಝಲಕ್ ಕಾಣಿಸಿತ್ತು. ಆದರೆ ಈಗ ಲೀಕ್ ಆಗಿರುವ ಫೋಟೋ ಇಡೀ ಸೆಟ್‌ನ ಭವ್ಯತೆಯನ್ನು ಬಹಿರಂಗಪಡಿಸಿದೆ.

ವರದಿಗಳ ಪ್ರಕಾರ, ಈ ಉಗ್ರಭಟ್ಟಿ ಗುಹೆಯ ಸೀಕ್ವೆನ್ಸ್ ಹಿಂದೂ ಪುರಾಣಗಳ ಉಗ್ರ ದೇವತೆಯಾದ ಮಾತಾ ಛಿನ್ನಮಸ್ತಾ ದೇವಿಯ ಸುತ್ತ ಹೆಣೆಯಲಾಗಿದೆ. ಸ್ವಯಂತ್ಯಾಗ, ಪರಿವರ್ತನೆ ಮತ್ತು ಬ್ರಹ್ಮಾಂಡದ ಸಮತೋಲನದ ಸಂಕೇತವಾಗಿರುವ ಈ ದೇವತೆಯ ಕಥೆ ಚಿತ್ರದ ಕಥಾಹಂದರಕ್ಕೆ ಬಹಳ ಮುಖ್ಯವಾಗಿದೆ. ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ದುಷ್ಟ ಶಕ್ತಿಯನ್ನು ಸೋಲಿಸಲು ಈ ದೇವತೆಯ ದೈವಿಕ ಅನುಗ್ರಹವನ್ನು ಪಡೆಯಲು ಈ ಗುಹೆಗೆ ಭೇಟಿ ನೀಡುತ್ತದೆ ಎಂದು ಹೇಳಲಾಗುತ್ತಿದೆ.

ಕೆಲವು ತಿಂಗಳುಗಳ ಹಿಂದೆಯಷ್ಟೇ ವಾರಣಾಸಿ ಶೆಡ್ಯೂಲ್‌ನಲ್ಲಿ ಮಹೇಶ್ ಬಾಬು ಮತ್ತು ಪೃಥ್ವಿರಾಜ್ ಸುಕುಮಾರನ್ ಒಟ್ಟಿಗೆ ಇರುವ ವಿಡಿಯೋವೊಂದು ಲೀಕ್ ಆಗಿತ್ತು. ಇದರಿಂದ ನಿರ್ದೇಶಕ ರಾಜಮೌಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇನ್ನುಮುಂದೆ ಸೆಟ್‌ನಿಂದ ಯಾವುದೇ ಮಾಹಿತಿ ಹೊರಹೋಗಬಾರದು ಎಂದು ಚಿತ್ರದ ಇಡೀ ತಂಡಕ್ಕೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ, ಮೊಬೈಲ್ ಬಳಕೆಯ ಮೇಲೆಯೂ ನಿಯಂತ್ರಣ ಹೇರಿದ್ದರು.

ಇದನ್ನೂ ಓದಿ: ‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ಆದರೆ, ಇಷ್ಟೆಲ್ಲಾ ಕಟ್ಟುನಿಟ್ಟಿನ ಭದ್ರತೆಯ ನಡುವೆಯೂ ಚಿತ್ರದ ಕಥೆಗೆ ಅತ್ಯಂತ ಮುಖ್ಯವಾಗಿರುವ ಉಗ್ರಭಟ್ಟಿ ಗುಹೆಯ ದೃಶ್ಯಗಳು ಲೀಕ್ ಆಗಿರುವುದು ನಿರ್ಮಾಪಕರ ಆತಂಕಕ್ಕೆ ಕಾರಣವಾಗಿದೆ. ಸಾಹಸ ಪ್ರಧಾನವಾಗಿರುವ ಈ ಪ್ಯಾನ್-ವರ್ಲ್ಡ್ ಸಿನಿಮಾವನ್ನು ಒಡಿಶಾ, ಆಫ್ರಿಕಾ ಮತ್ತು ಹೈದರಾಬಾದ್‌ನ ವಿವಿಧ ಭಾಗಗಳಲ್ಲಿ ಅದ್ದೂರಿಯಾಗಿ ಚಿತ್ರೀಕರಿಸಲಾಗುತ್ತಿದೆ. 2027ರಲ್ಲಿ ಈ ಸಿನಿಮಾ ವಿಶ್ವಾದ್ಯಂತ ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ