AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲೀಡರ್ 2’ ಚಿತ್ರಕತೆ ರೆಡಿ ಇದೆ, ಆದರೆ…: ನಿರ್ದೇಶಕ ಹೇಳಿದ್ದೇನು?

Leader movie: 2010 ರಲ್ಲಿ ಬಿಡುಗಡೆ ಆಗಿದ್ದ ತೆಲುಗು ಸಿನಿಮಾ ‘ಲೀಡರ್’ ಭಾರಿ ಹಿಟ್ ಆಗಿತ್ತು. ಕಾಲ ಕಳೆದಂತೆ ಸಿನಿಮಾಕ್ಕೆ ಅಭಿಮಾನಿಗಳು ಹೆಚ್ಚಾಗುತ್ತಲೇ ಹೋಗುತ್ತಿದ್ದಾರೆ. ‘ಲೀಡರ್’ ಸಿನಿಮಾ, ಆಂಧ್ರ ರಾಜಕೀಯದ ಮೇಲೂ ಪ್ರಭಾವ ಬೀರಿತ್ತು. ಸಿನಿಮಾ ನಿರ್ದೇಶಿಸಿದ್ದ ಶೇಖರ್ ಕಮ್ಮುಲ, ಇದೀಗ ‘ಲೀಡರ್’ ಸಿನಿಮಾದ ಸೀಕ್ವೆಲ್ ಬಗ್ಗೆ ಮಾತನಾಡಿದ್ದಾರೆ.

‘ಲೀಡರ್ 2’ ಚಿತ್ರಕತೆ ರೆಡಿ ಇದೆ, ಆದರೆ...: ನಿರ್ದೇಶಕ ಹೇಳಿದ್ದೇನು?
Leader
ಮಂಜುನಾಥ ಸಿ.
|

Updated on: Jun 19, 2025 | 1:03 PM

Share

ರಾಣಾ ದಗ್ಗುಬಾಟಿ (Rana Daggubati) ಇಂದು ಪ್ಯಾನ್ ಇಂಡಿಯಾ (Pan India) ಸ್ಟಾರ್ ನಟ. ತೆಲುಗು, ತಮಿಳು, ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ‘ಲೀಡರ್’ ಹೆಸರಿನ ಅದ್ಭುತ ರಾಜಕೀಯ ಥ್ರಿಲ್ಲರ್ ಸಿನಿಮಾ ಮೂಲಕ. ಒಂದೇ ಒಂದು ಫೈಟ್, ರೊಮ್ಯಾಂಟಿಕ್ ಹಾಡುಗಳಿಲ್ಲದ ಆದರೆ ಪ್ರೇಕ್ಷಕರನ್ನು ಕುರ್ಚಿಯ ತುದಿಗೆ ಕೂತು ನೋಡುವಂತೆ ಮಾಡಿದ್ದ ಸಿನಿಮಾ ಅದು. ಹಲವಾರು ರಾಜಕೀಯ ಥ್ರಿಲ್ಲರ್ ಸಿನಿಮಾಗಳಿಗೆ ಹಾದಿ ಮಾಡಿಕೊಟ್ಟ ಸಿನಿಮಾ ಅದು. 2010 ರಲ್ಲಿ ಬಿಡುಗಡೆ ಆಗಿದ್ದ ಆ ಸಿನಿಮಾದ ಸೀಕ್ವೆಲ್​​ ಬಗ್ಗೆ ಇದೀಗ ನಿರ್ದೇಶಕ ಶೇಖರ್ ಕಮ್ಮುಲ ಮಾತನಾಡಿದ್ದಾರೆ.

ಅವಿಭಜಿತ ಆಂಧ್ರ ಪ್ರದೇಶದ ರಾಜಕೀಯದ ಮೇಲೆ ದೊಡ್ಡ ಮಟ್ಟದ ಪ್ರಭಾವ ಬೀರಿದ ಸಿನಿಮಾ ‘ಲೀಡರ್’ ಜೊತೆಗೆ ರಾಜಕೀಯ ಜಾಗೃತಿ ಮೂಡಿಸಲು ಸಹ ಈ ಸಿನಿಮಾ ಕಾರಣವಾಗಿತ್ತು. ಶೇಖರ್ ಕಮ್ಮುಲ ಈ ಸಿನಿಮಾದ ನಿರ್ದೇಶನ ಮಾಡಿದ್ದರು. ‘ಲೀಡರ್ 2’ ಸಿನಿಮಾ ಬರಬೇಕೆಂಬ ಬೇಡಿಕೆ ಹಲವು ವರ್ಷಗಳಿಂದಲೂ ಇತ್ತು. ಇದೀಗ ಶೇಖರ್ ಕಮ್ಮುಲ ನಿರ್ದೇಶನದ ‘ಕುಬೇರ’ ಸಿನಿಮಾ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ‘ಲೀಡರ್ 2’ ಸಿನಿಮಾದ ಬಗ್ಗೆ ಶೇಖರ್ ಕಮ್ಮುಲ ಮಾತನಾಡಿದ್ದಾರೆ.

‘ಲೀಡರ್’ ಸಿನಿಮಾದ ಸೀಕ್ವೆಲ್ ಮಾಡುವ ಆಲೋಚನೆ ನನಗೆ ಇತ್ತು. ಆದರೆ ಕಾಲಾಂತರದಲ್ಲಿ ಭಾರತದ ರಾಜಕೀಯ ಬದಲಾಗಿದೆ. ಜನಗಳು ಸಹ ಬದಲಾಗಿದ್ದಾರೆ. ಈಗ ಜನರು ರಾಜಕಾರಣಿಗಳಿಗಿಂತಲೂ ಹೆಚ್ಚಿನವರಾಗಿಬಿಟ್ಟಿದ್ದಾರೆ. ಹೀಗಿರುವಾಗ ‘ಲೀಡರ್ 2’ ಸಿನಿಮಾ ಮಾಡಲು ಸರಿಯಾದ ಮತ್ತು ಗಟ್ಟಿಯಾದ ಕಾರಣ ಅಥವಾ ಸಮಸ್ಯೆ ಸಿಗಬೇಕಿದೆ. ಅದರ ಮೇಲೆ ಕತೆಯನ್ನು ರಚಿಸಿ, ಸಿನಿಮಾ ಮಾಡಬಹುದು, ನನ್ನ ಬಳಿ ಈಗಾಗಲೇ ಒಂದು ಚಿತ್ರಕತೆ ಇದೆ, ಆದರೆ ಅದು ಈಗಿನ ರಾಜಕೀಯ ವ್ಯವಸ್ಥೆಯನ್ನು ಪ್ರತಿನಿಧಿಸುತ್ತದೆ ಎಂಬುದು ಖಾತ್ರಿಯಿಲ್ಲ. ‘ಲೀಡರ್’ ಸಿನಿಮಾದ ಸೀಕ್ವೆಲ್, ಈಗಿನ ರಾಜಕೀಯ ವ್ಯವಸ್ಥೆಯ ಪ್ರತಿಬಿಂಬ ಆಗಿರಬೇಕೆ ಹೊರತು ಹಳೆಯ ಕಾಲದ ರಾಜಕೀಯ ವ್ಯವಸ್ಥೆಯ ಮೆಲುಕು ಎಂಬಂತಾಗಬಾರದು’ ಎಂದಿದ್ದಾರೆ.

ಇದನ್ನೂ ಓದಿ:ಧನುಶ್-ರಶ್ಮಿಕಾ ಮಂದಣ್ಣ ಸಿನಿಮಾಕ್ಕೆ ಹೆಸರು ಸಿಕ್ಕಿತು

ಶೇಖರ್ ಕಮ್ಮುಲ ನಿರ್ದೇಶಿಸಿರುವ ‘ಕುಬೇರ’ ಸಿನಿಮಾ ಜೂನ್ 20ಕ್ಕೆ ತೆರೆಗೆ ಬರಲಿದೆ. ಸಿನಿಮಾನಲ್ಲಿ ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ಅವರುಗಳು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಬಳಿಕ ನಟ ನಾನಿ ಜೊತೆಗೆ ಹೊಸ ಸಿನಿಮಾ ಒಂದನ್ನು ಶೇಖರ್ ಕಮ್ಮುಲ ಮಾಡಲಿದ್ದಾರೆ. ಅದರ ಬಳಿಕವಷ್ಟೆ ಅವರು ‘ಲೀಡರ್ 2’ ಸಿನಿಮಾದ ಬಗ್ಗೆ ಯೋಚಿಸುವ ಸಾಧ್ಯತೆ ಇದೆ. ಅಲ್ಲದೆ, ಪ್ರಸ್ತುತ ಕಾಲದಲ್ಲಿ ರಾಜಕೀಯದ ಬಗ್ಗೆ ಸಿನಿಮಾ ಮಾಡುವುದು ಮತ್ತು ಅದು ಎಲ್ಲರಿಗೂ ಇಷ್ಟವಾಗುವಂತೆ ಮಾಡುವುದು ಬಹುತೇಕ ಅಸಾಧ್ಯ ಎನ್ನಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ