AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಾಕ್​ಡೌನ್​ ಮಾಡಿದ್ರೆ ದುರಂತ ಆಗತ್ತೆ; ದುಡ್ಡಿಲ್ಲದೇ ನೋವು ತೋಡಿಕೊಂಡ ಹಿರಿಯ ನಟ

ಇದು ಆಯುಬ್​ ಖಾನ್​ ಅವರೊಬ್ಬರ ಪರಿಸ್ಥಿತಿ ಮಾತ್ರವಲ್ಲ. ಅನೇಕ ಕಲಾವಿದರು ಇಂಥ ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ಕೂಡ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ.

ಮತ್ತೆ ಲಾಕ್​ಡೌನ್​ ಮಾಡಿದ್ರೆ ದುರಂತ ಆಗತ್ತೆ; ದುಡ್ಡಿಲ್ಲದೇ ನೋವು ತೋಡಿಕೊಂಡ ಹಿರಿಯ ನಟ
ನಟ ಆಯುಬ್​ ಖಾನ್​
ಮದನ್​ ಕುಮಾರ್​
|

Updated on: Apr 23, 2021 | 11:30 AM

Share

ಕೊರೊನಾ ವೈರಸ್​ ಎರಡನೇ ಅಲೆಗೆ ಭಾರತದಲ್ಲಿ ಹೆಣಗಳು ಉರುಳುತ್ತಿವೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಪರಿಸ್ಥಿತಿಯಂತೂ ಕೈ ಮೀರಿ ಹೋಗುತ್ತಿದೆ. ಹಾಗಾಗಿ ಅಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಏ.14ರಿಂದ 15 ದಿನಗಳ ಲಾಕ್​ಡೌನ್​ ಜಾರಿಯಲ್ಲಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಅನೇಕ ಕಲಾವಿದರ ಜೀವನಕ್ಕೆ ತೊಂದರೆ ಆಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ತುಂಬ ಕಷ್ಟದ ದಿನಗಳು ಬರಲಿವೆ ಎಂದು ಹಿರಿಯ ನಟ ಆಯುಬ್​ ಖಾನ್​ ಹೇಳಿದ್ದಾರೆ.

ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣ ಸ್ಥಗಿತಗೊಂಡರೆ ಕಲಾವಿದರು ಮತ್ತು ತಂತ್ರಜ್ಞರು ಕಷ್ಟ ಅನುಭವಿಸಬೇಕಾಗುತ್ತದೆ. ಕಳೆದ ವರ್ಷ ಲಾಕ್​ಡೌನ್​ನಲ್ಲಿ ಅನೇಕ ನಟ-ನಟಿಯರು ಆತ್ಮಹತ್ಯೆಗೆ ಶರಣಾದ ಉದಾಹರಣೆ ಇದೆ. ಈ ವರ್ಷ ಮತ್ತೆ ಲಾಕ್​ಡೌನ್​ ಮುಂದುವರಿದರೆ ಸಂಕಷ್ಟ ಎದುರಾಗುತ್ತದೆ ಎಂದು ಆಯುಬ್​ ಖಾನ್​ ಆತಂಕ ಪಟ್ಟಿದ್ದಾರೆ.

ಸದ್ಯ ಆಯುಬ್​​ ಖಾನ್​ ಅವರಿಗೆ 53 ವರ್ಷ. ಕಳೆದ ಒಂದೂವರೆ ವರ್ಷದಿಂದ ಅವರಿಗೆ ಅವಕಾಶಗಳು ಸಿಗುತ್ತಿಲ್ಲ. ಇಷ್ಟು ದಿನಗಳ ಕಾಲ ಕೂಡಿಟ್ಟಿದ್ದ ಹಣವನ್ನು ಅವರು ತುಂಬಾ ಜೋಪಾನವಾಗಿ ಖರ್ಚು ಮಾಡುತ್ತಿದ್ದಾರಂತೆ. ‘ನಾವೆಲ್ಲರೂ ಈಗ ಕಷ್ಟ ಅನುಭವಿಸುತ್ತಿದ್ದೇವೆ. ಲಾಕ್​ಡೌನ್​​ ಮುಂದುವರಿದು, ಮತ್ತೆ ಒಂದೂವರೆ ವರ್ಷ ಕೆಲಸ ಸಿಗದಿದ್ದರೆ ದೊಡ್ಡ ದುರಂತ ಎದುರಾಗಲಿದೆ’ ಎಂದು ಅವರು ಹೇಳಿದ್ದಾರೆ.

ಒಂದೂವರೆ ವರ್ಷದಿಂದ ಆಯುಬ್​ ಖಾನ್​ ಅವರಿಗೆ ಅವಕಾಶಗಳು ಸಿಗದ ಕಾರಣ ಈಗ ಅವರ ಬಳಿ ಸ್ವಲ್ಪ ಮಾತ್ರವೇ ಹಣ ಉಳಿದುಕೊಂಡಿದೆ. ಈಗ ಚಿತ್ರೀಕರಣ ಸ್ಥಗಿತಗೊಂಡಿರುವುದರಿಂದ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಹಾಯಕ್ಕಾಗಿ ಕೈ ಚಾಚದೇ ಬೇರೆ ಗತಿ ಇಲ್ಲ ಎಂದು ಅವರು ಹೇಳಿದ್ದಾರೆ. ಇದು ಆಯುಬ್​ ಖಾನ್​ ಅವರೊಬ್ಬರ ಪರಿಸ್ಥಿತಿ ಮಾತ್ರವಲ್ಲ. ಅನೇಕ ಕಲಾವಿದರು ಇಂಥ ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ಕೂಡ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ವೈರಸ್​ಗೆ ಬಲಿಯಾದ ಹಿರಿಯ ನಟ ಕಿಶೋರ್ ನಂದಲಸ್ಕರ್

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

(Senior Actor Ayub Khan Talks about financial Crisis due to coronavirus lockdown)

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?