AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಲಾಕ್​ಡೌನ್​ ಮಾಡಿದ್ರೆ ದುರಂತ ಆಗತ್ತೆ; ದುಡ್ಡಿಲ್ಲದೇ ನೋವು ತೋಡಿಕೊಂಡ ಹಿರಿಯ ನಟ

ಇದು ಆಯುಬ್​ ಖಾನ್​ ಅವರೊಬ್ಬರ ಪರಿಸ್ಥಿತಿ ಮಾತ್ರವಲ್ಲ. ಅನೇಕ ಕಲಾವಿದರು ಇಂಥ ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ಕೂಡ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ.

ಮತ್ತೆ ಲಾಕ್​ಡೌನ್​ ಮಾಡಿದ್ರೆ ದುರಂತ ಆಗತ್ತೆ; ದುಡ್ಡಿಲ್ಲದೇ ನೋವು ತೋಡಿಕೊಂಡ ಹಿರಿಯ ನಟ
ನಟ ಆಯುಬ್​ ಖಾನ್​
Follow us
ಮದನ್​ ಕುಮಾರ್​
|

Updated on: Apr 23, 2021 | 11:30 AM

ಕೊರೊನಾ ವೈರಸ್​ ಎರಡನೇ ಅಲೆಗೆ ಭಾರತದಲ್ಲಿ ಹೆಣಗಳು ಉರುಳುತ್ತಿವೆ. ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಪರಿಸ್ಥಿತಿಯಂತೂ ಕೈ ಮೀರಿ ಹೋಗುತ್ತಿದೆ. ಹಾಗಾಗಿ ಅಲ್ಲಿ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಏ.14ರಿಂದ 15 ದಿನಗಳ ಲಾಕ್​ಡೌನ್​ ಜಾರಿಯಲ್ಲಿದೆ. ಸಿನಿಮಾ, ಧಾರಾವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಅನೇಕ ಕಲಾವಿದರ ಜೀವನಕ್ಕೆ ತೊಂದರೆ ಆಗುತ್ತಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ತುಂಬ ಕಷ್ಟದ ದಿನಗಳು ಬರಲಿವೆ ಎಂದು ಹಿರಿಯ ನಟ ಆಯುಬ್​ ಖಾನ್​ ಹೇಳಿದ್ದಾರೆ.

ಸಿನಿಮಾ ಮತ್ತು ಧಾರಾವಾಹಿ ಚಿತ್ರೀಕರಣ ಸ್ಥಗಿತಗೊಂಡರೆ ಕಲಾವಿದರು ಮತ್ತು ತಂತ್ರಜ್ಞರು ಕಷ್ಟ ಅನುಭವಿಸಬೇಕಾಗುತ್ತದೆ. ಕಳೆದ ವರ್ಷ ಲಾಕ್​ಡೌನ್​ನಲ್ಲಿ ಅನೇಕ ನಟ-ನಟಿಯರು ಆತ್ಮಹತ್ಯೆಗೆ ಶರಣಾದ ಉದಾಹರಣೆ ಇದೆ. ಈ ವರ್ಷ ಮತ್ತೆ ಲಾಕ್​ಡೌನ್​ ಮುಂದುವರಿದರೆ ಸಂಕಷ್ಟ ಎದುರಾಗುತ್ತದೆ ಎಂದು ಆಯುಬ್​ ಖಾನ್​ ಆತಂಕ ಪಟ್ಟಿದ್ದಾರೆ.

ಸದ್ಯ ಆಯುಬ್​​ ಖಾನ್​ ಅವರಿಗೆ 53 ವರ್ಷ. ಕಳೆದ ಒಂದೂವರೆ ವರ್ಷದಿಂದ ಅವರಿಗೆ ಅವಕಾಶಗಳು ಸಿಗುತ್ತಿಲ್ಲ. ಇಷ್ಟು ದಿನಗಳ ಕಾಲ ಕೂಡಿಟ್ಟಿದ್ದ ಹಣವನ್ನು ಅವರು ತುಂಬಾ ಜೋಪಾನವಾಗಿ ಖರ್ಚು ಮಾಡುತ್ತಿದ್ದಾರಂತೆ. ‘ನಾವೆಲ್ಲರೂ ಈಗ ಕಷ್ಟ ಅನುಭವಿಸುತ್ತಿದ್ದೇವೆ. ಲಾಕ್​ಡೌನ್​​ ಮುಂದುವರಿದು, ಮತ್ತೆ ಒಂದೂವರೆ ವರ್ಷ ಕೆಲಸ ಸಿಗದಿದ್ದರೆ ದೊಡ್ಡ ದುರಂತ ಎದುರಾಗಲಿದೆ’ ಎಂದು ಅವರು ಹೇಳಿದ್ದಾರೆ.

ಒಂದೂವರೆ ವರ್ಷದಿಂದ ಆಯುಬ್​ ಖಾನ್​ ಅವರಿಗೆ ಅವಕಾಶಗಳು ಸಿಗದ ಕಾರಣ ಈಗ ಅವರ ಬಳಿ ಸ್ವಲ್ಪ ಮಾತ್ರವೇ ಹಣ ಉಳಿದುಕೊಂಡಿದೆ. ಈಗ ಚಿತ್ರೀಕರಣ ಸ್ಥಗಿತಗೊಂಡಿರುವುದರಿಂದ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಸಹಾಯಕ್ಕಾಗಿ ಕೈ ಚಾಚದೇ ಬೇರೆ ಗತಿ ಇಲ್ಲ ಎಂದು ಅವರು ಹೇಳಿದ್ದಾರೆ. ಇದು ಆಯುಬ್​ ಖಾನ್​ ಅವರೊಬ್ಬರ ಪರಿಸ್ಥಿತಿ ಮಾತ್ರವಲ್ಲ. ಅನೇಕ ಕಲಾವಿದರು ಇಂಥ ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ಕೂಡ ಜೀವನ ನಡೆಸಲು ಹೆಣಗಾಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ವೈರಸ್​ಗೆ ಬಲಿಯಾದ ಹಿರಿಯ ನಟ ಕಿಶೋರ್ ನಂದಲಸ್ಕರ್

ಸ್ಯಾಂಡಲ್​ವುಡ್​ ಯುವ ನಟ, ನಿರ್ಮಾಪಕ ಕೊರೊನಾಗೆ ಬಲಿ

(Senior Actor Ayub Khan Talks about financial Crisis due to coronavirus lockdown)

ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ