AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ

Mannava Balayya Death: ಮನ್ನವ ಬಾಲಯ್ಯ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು.

Mannava Balayya: 300ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ ಮನ್ನವ ಬಾಲಯ್ಯ ನಿಧನ; ಕಂಬನಿ ಮಿಡಿದ ಚಿತ್ರರಂಗ
ಮನ್ನವ ಬಾಲಯ್ಯ
TV9 Web
| Edited By: |

Updated on:Apr 09, 2022 | 1:43 PM

Share

ತೆಲುಗು ಚಿತ್ರರಂಗದ ಹಿರಿಯ ನಟ ಮನ್ನವ ಬಾಲಯ್ಯ (Mannava Balayya) ನಿಧನರಾಗಿದ್ದಾರೆ. ಅವರ ಮರಣದ (Mannava Balayya Death) ಸುದ್ದಿ ಕೇಳಿ ಟಾಲಿವುಡ್​ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅಭಿನಯದ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದಿದ್ದ ಮನ್ನವ ಬಾಲಯ್ಯ ಅವರು ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಸಕ್ರಿಯರಾಗಿದ್ದರು. ನಟನೆ ಮಾತ್ರವಲ್ಲದೇ ನಿರ್ದೇಶನ, ನಿರ್ಮಾಣದಲ್ಲೂ ಅವರು ಗುರುತಿಸಿಕೊಂಡಿದ್ದರು. ಮನ್ನವ ಬಾಲಯ್ಯ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಹೈದರಾಬಾದ್​ನಲ್ಲಿ ಶನಿವಾರ (ಏ.9) ಬೆಳಗ್ಗೆ ನಿಧನರಾದರು ಎಂದು ವರದಿ ಆಗಿದೆ. ನಂದಮುರಿ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು ಮನ್ನವ ಬಾಲಯ್ಯ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಚೆನ್ನೈನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಮನ್ನವ ಬಾಲಯ್ಯ ಅವರು ಮೆಕಾನಿಕಲ್​ ಇಂಜಿನಿಯರಿಂಗ್​ನಲ್ಲಿ ಪದವಿ ಪಡೆದಿದ್ದರು. ಕಾಲೇಜು ದಿನಗಳಲ್ಲಿ ನಾಟಕದ ಬಗ್ಗೆ ಆಸಕ್ತಿ ಬೆಳೆಸಿಕೊಂಡಿದ್ದ ಅವರು ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. 1958ರಲ್ಲಿ ಅವರು ಬಣ್ಣದ ಲೋಕದಲ್ಲಿ ಜರ್ನಿ ಆರಂಭಿಸಿದರು. ಹಲವು ದಶಕಗಳ ತಮ್ಮ ವೃತ್ತಿ ಜೀವನದಲ್ಲಿ ಅನೇಕ ಗಮನಾರ್ಹ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದರು. ಕುಂಕುಮ ರೇಖಾ, ಭಾಗ್ಯ ದೇವತ, ಪಾರ್ವತಿ ಕಲ್ಯಾಣ ಮುಂತಾದ ಸಿನಿಮಾಗಳಲ್ಲಿನ ಅವರ ನಟನೆಗೆ ಅಭಿಮಾನಿಗಳು ಮನಸೋತಿದ್ದರು.

ಹತ್ತಕ್ಕೂ ಅಧಿಕ ಸಿನಿಮಾಗಳನ್ನು ಮನ್ನವ ಬಾಲಯ್ಯ ನಿರ್ಮಾಣ ಮಾಡಿದ್ದರು. ನಿರ್ದೇಶಕನಾಗಿ, ಕಥೆಗಾರನಾಗಿ ಹಲವು ಸಿನಿಮಾಗಳಿಗೆ ಅವರು ಕೆಲಸ ಮಾಡಿದ್ದರು. ‘ಚೆಲ್ಲೆಲಿ ಕಾಪುರಮ್​’ ಸಿನಿಮಾದಲ್ಲಿನ ನಟನೆಗಾಗಿ ಅವರು ನಂದಿ ಪ್ರಶಸ್ತಿ ಪಡೆದಿದ್ದರು. ಆ ಸಿನಿಮಾಗೆ ಅವರೇ ಕಥೆ ಬರೆದಿದ್ದರು. ಹಲವು ರೀತಿಯಲ್ಲಿ ತೆಲುಗು ಚಿತ್ರರಂಗಕ್ಕೆ ಮನ್ನವ ಬಾಲಯ್ಯ ಅವರು ಕೊಡುಗೆ ನೀಡಿದ್ದರು. ಅವರ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:

ಹಿರಿಯ ನಟ ನಿಧನ, ಸಂತಾಪ ಸೂಚಿಸಿದ ಸಿಎಂ; ನಿಖರವಾಗಿ ತಿಳಿಯಲೇ ಇಲ್ಲ ಸಾವಿಗೆ ಕಾರಣ

33ನೇ ವಯಸ್ಸಿಗೆ ಕ್ಯಾನ್ಸರ್​ನಿಂದ ಖ್ಯಾತ ಸಿಂಗರ್​ ನಿಧನ; ಸಂತಾಪ ಸೂಚಿಸಿದ ಯುವರಾಜ್​ ಸಿಂಗ್

Published On - 12:53 pm, Sat, 9 April 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ