AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ
ಚೆಲ್ಲಾದುರೈ
ರಾಜೇಶ್ ದುಗ್ಗುಮನೆ
|

Updated on:Apr 30, 2021 | 2:57 PM

Share

ತಮಿಳಿನ ಹಿರಿಯ ನಟ ಆರ್​ಎಸ್​ಜಿ ಚೆಲ್ಲಾದುರೈ ಅವರು ಗುರುವಾರ (ಏಪ್ರಿಲ್ 29​) ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಪೆರಿಯಾರ್​ ನಗರದಲ್ಲಿರುವ ತಮ್ಮ ನಿವಾಸದಲ್ಲೇ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್​ ನಟನೆಯ ಕತ್ತಿ, ತೇರಿ, ಧನುಶ್​ ನಟನೆಯ ಮಾರಿ ಹಾಗೂ ಮೊದಲಾದ ಸಿನಿಮಾಗಳಲ್ಲಿ ಚೆಲ್ಲಾದುರೈ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು.

ತಮಿಳು ಚಿತ್ರರಂಗದಲ್ಲಿ ಪ್ರಮುಖ ಪೋಷಕ ಪಾತ್ರಧಾರಿಯಾಗಿದ್ದರು. ಗುರುವಾರ ಅವರು ಬಾತ್​​ರೂಂನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಅವರ ಮಗ ಹೇಳುವ ಪ್ರಕಾರ ಚೆಲ್ಲಾದುರೈ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಶಿವಾಜಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು. ಚೆಲ್ಲಾದುರೈ ಸಾವಿಗೆ ಕಾಲಿವುಡ್​ ಮಂದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ತಮಿಳು ಸಿನಿಮಾ ಪ್ರೇಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ.

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು. ವಿಜಯ್​ ನಟನೆಯ ತೇರಿ ಸಿನಿಮಾದಲ್ಲಿ ತಂದೆ ಪಾತ್ರದಲ್ಲಿ ಚೆಲ್ಲಾದುರೈ ಕಾಣಿಸಿಕೊಂಡಿದ್ದರು. ಕಾಣೆಯಾದ ಮಗಳನ್ನು ಹುಡುಕುವ ತಂದೆಯಾಗಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದರು ಚೆಲ್ಲಾದುರೈ.

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ನಿಧನರಾಗಿದ್ದರು.  ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 2:56 pm, Fri, 30 April 21

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?