AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ
ಚೆಲ್ಲಾದುರೈ
ರಾಜೇಶ್ ದುಗ್ಗುಮನೆ
|

Updated on:Apr 30, 2021 | 2:57 PM

Share

ತಮಿಳಿನ ಹಿರಿಯ ನಟ ಆರ್​ಎಸ್​ಜಿ ಚೆಲ್ಲಾದುರೈ ಅವರು ಗುರುವಾರ (ಏಪ್ರಿಲ್ 29​) ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಪೆರಿಯಾರ್​ ನಗರದಲ್ಲಿರುವ ತಮ್ಮ ನಿವಾಸದಲ್ಲೇ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್​ ನಟನೆಯ ಕತ್ತಿ, ತೇರಿ, ಧನುಶ್​ ನಟನೆಯ ಮಾರಿ ಹಾಗೂ ಮೊದಲಾದ ಸಿನಿಮಾಗಳಲ್ಲಿ ಚೆಲ್ಲಾದುರೈ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು.

ತಮಿಳು ಚಿತ್ರರಂಗದಲ್ಲಿ ಪ್ರಮುಖ ಪೋಷಕ ಪಾತ್ರಧಾರಿಯಾಗಿದ್ದರು. ಗುರುವಾರ ಅವರು ಬಾತ್​​ರೂಂನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಅವರ ಮಗ ಹೇಳುವ ಪ್ರಕಾರ ಚೆಲ್ಲಾದುರೈ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಶಿವಾಜಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು. ಚೆಲ್ಲಾದುರೈ ಸಾವಿಗೆ ಕಾಲಿವುಡ್​ ಮಂದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ತಮಿಳು ಸಿನಿಮಾ ಪ್ರೇಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ.

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು. ವಿಜಯ್​ ನಟನೆಯ ತೇರಿ ಸಿನಿಮಾದಲ್ಲಿ ತಂದೆ ಪಾತ್ರದಲ್ಲಿ ಚೆಲ್ಲಾದುರೈ ಕಾಣಿಸಿಕೊಂಡಿದ್ದರು. ಕಾಣೆಯಾದ ಮಗಳನ್ನು ಹುಡುಕುವ ತಂದೆಯಾಗಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದರು ಚೆಲ್ಲಾದುರೈ.

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ನಿಧನರಾಗಿದ್ದರು.  ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 2:56 pm, Fri, 30 April 21

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್