AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ
ಚೆಲ್ಲಾದುರೈ
ರಾಜೇಶ್ ದುಗ್ಗುಮನೆ
|

Updated on:Apr 30, 2021 | 2:57 PM

Share

ತಮಿಳಿನ ಹಿರಿಯ ನಟ ಆರ್​ಎಸ್​ಜಿ ಚೆಲ್ಲಾದುರೈ ಅವರು ಗುರುವಾರ (ಏಪ್ರಿಲ್ 29​) ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಪೆರಿಯಾರ್​ ನಗರದಲ್ಲಿರುವ ತಮ್ಮ ನಿವಾಸದಲ್ಲೇ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್​ ನಟನೆಯ ಕತ್ತಿ, ತೇರಿ, ಧನುಶ್​ ನಟನೆಯ ಮಾರಿ ಹಾಗೂ ಮೊದಲಾದ ಸಿನಿಮಾಗಳಲ್ಲಿ ಚೆಲ್ಲಾದುರೈ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು.

ತಮಿಳು ಚಿತ್ರರಂಗದಲ್ಲಿ ಪ್ರಮುಖ ಪೋಷಕ ಪಾತ್ರಧಾರಿಯಾಗಿದ್ದರು. ಗುರುವಾರ ಅವರು ಬಾತ್​​ರೂಂನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಅವರ ಮಗ ಹೇಳುವ ಪ್ರಕಾರ ಚೆಲ್ಲಾದುರೈ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಶಿವಾಜಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು. ಚೆಲ್ಲಾದುರೈ ಸಾವಿಗೆ ಕಾಲಿವುಡ್​ ಮಂದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ತಮಿಳು ಸಿನಿಮಾ ಪ್ರೇಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ.

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು. ವಿಜಯ್​ ನಟನೆಯ ತೇರಿ ಸಿನಿಮಾದಲ್ಲಿ ತಂದೆ ಪಾತ್ರದಲ್ಲಿ ಚೆಲ್ಲಾದುರೈ ಕಾಣಿಸಿಕೊಂಡಿದ್ದರು. ಕಾಣೆಯಾದ ಮಗಳನ್ನು ಹುಡುಕುವ ತಂದೆಯಾಗಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದರು ಚೆಲ್ಲಾದುರೈ.

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ನಿಧನರಾಗಿದ್ದರು.  ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 2:56 pm, Fri, 30 April 21

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್