AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು.

ಹೃದಯಾಘಾತದಿಂದ ತಮಿಳಿನ ಹಿರಿಯ ನಟ ಚೆಲ್ಲಾದುರೈ ನಿಧನ
ಚೆಲ್ಲಾದುರೈ
ರಾಜೇಶ್ ದುಗ್ಗುಮನೆ
|

Updated on:Apr 30, 2021 | 2:57 PM

Share

ತಮಿಳಿನ ಹಿರಿಯ ನಟ ಆರ್​ಎಸ್​ಜಿ ಚೆಲ್ಲಾದುರೈ ಅವರು ಗುರುವಾರ (ಏಪ್ರಿಲ್ 29​) ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಪೆರಿಯಾರ್​ ನಗರದಲ್ಲಿರುವ ತಮ್ಮ ನಿವಾಸದಲ್ಲೇ ಅವರು ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ. ವಿಜಯ್​ ನಟನೆಯ ಕತ್ತಿ, ತೇರಿ, ಧನುಶ್​ ನಟನೆಯ ಮಾರಿ ಹಾಗೂ ಮೊದಲಾದ ಸಿನಿಮಾಗಳಲ್ಲಿ ಚೆಲ್ಲಾದುರೈ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ ಎಲ್ಲರಿಗೂ ಇಷ್ಟವಾಗಿತ್ತು.

ತಮಿಳು ಚಿತ್ರರಂಗದಲ್ಲಿ ಪ್ರಮುಖ ಪೋಷಕ ಪಾತ್ರಧಾರಿಯಾಗಿದ್ದರು. ಗುರುವಾರ ಅವರು ಬಾತ್​​ರೂಂನಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದರು ಎನ್ನಲಾಗಿದೆ. ಅವರ ಮಗ ಹೇಳುವ ಪ್ರಕಾರ ಚೆಲ್ಲಾದುರೈ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಶಿವಾಜಿ ಸೇರಿ ಸಾಕಷ್ಟು ಸಿನಿಮಾಗಳಲ್ಲಿ ಅವರ ನಟನೆ ಪ್ರೇಕ್ಷಕರ ಗಮನ ಸೆಳೆದಿತ್ತು. ಚೆಲ್ಲಾದುರೈ ಸಾವಿಗೆ ಕಾಲಿವುಡ್​ ಮಂದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ತಮಿಳು ಸಿನಿಮಾ ಪ್ರೇಕ್ಷಕರು ಕೂಡ ಬೇಸರ ಹೊರ ಹಾಕಿದ್ದಾರೆ.

ಮಾರಿ ಸಿನಿಮಾದಲ್ಲಿ ಧನುಶ್​, ರೋಬೋ ಶಂಕರ್​, ಹಾಗೂ ಚೆಲ್ಲಾದುರೈ ನಡುವೆ ದೃಶ್ಯವೊಂದು ಬರುತ್ತದೆ. ಇದು ಮೀಮ್​ಗಳಲ್ಲಿ ಹೆಚ್ಚು ಬಳಕೆ ಆಗಿತ್ತು. ವಿಜಯ್​ ನಟನೆಯ ತೇರಿ ಸಿನಿಮಾದಲ್ಲಿ ತಂದೆ ಪಾತ್ರದಲ್ಲಿ ಚೆಲ್ಲಾದುರೈ ಕಾಣಿಸಿಕೊಂಡಿದ್ದರು. ಕಾಣೆಯಾದ ಮಗಳನ್ನು ಹುಡುಕುವ ತಂದೆಯಾಗಿ ಎಲ್ಲರ ಕಣ್ಣಲ್ಲೂ ನೀರು ತರಿಸಿದ್ದರು ಚೆಲ್ಲಾದುರೈ.

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ನಿಧನರಾಗಿದ್ದರು.  ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಇದನ್ನೂ ಓದಿ: KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

Published On - 2:56 pm, Fri, 30 April 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ