AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವರ’ ಚಿತ್ರದ ಮೂರು ದೃಶ್ಯಕ್ಕೆ ಕತ್ತರಿ ಹಾಕಲು ಸೂಚಿಸಿದ ಸೆನ್ಸಾರ್ ಮಂಡಳಿ; ಅಂಥದ್ದೇನಿದೆ?

ಸೆನ್ಸಾರ್ ಮಂಡಳಿ ‘ದೇವರ’ ಚಿತ್ರಕ್ಕೆ U/A ಪ್ರಮಾಣಪತ್ರವನ್ನು ನೀಡಿದೆ. ಸಿನಿಮಾಗೆ ಮೂರು ದೃಶ್ಯಗಳನ್ನು ಕಟ್ ಮಾಡಲು ಹಾಗೂ ಒಂದು ದೃಶ್ಯದಲ್ಲಿ ವಿಎಫ್​ಎಕ್ಸ್ ದೃಶ್ಯ ಎಂದು ಉಲ್ಲೇಖಿಸಲು ಸೂಚಿಸಿದೆ. ಮೂರು ದೃಶ್ಯಗಳು ಹೆಚ್ಚು ವೈಲೆನ್ಸ್​ ಇಂದ ಕೂಡಿದೆಯಂತೆ.

‘ದೇವರ’ ಚಿತ್ರದ ಮೂರು ದೃಶ್ಯಕ್ಕೆ ಕತ್ತರಿ ಹಾಕಲು ಸೂಚಿಸಿದ ಸೆನ್ಸಾರ್ ಮಂಡಳಿ; ಅಂಥದ್ದೇನಿದೆ?
ಜೂನಿಯರ್ ಎನ್​ಟಿಆರ್
ರಾಜೇಶ್ ದುಗ್ಗುಮನೆ
|

Updated on: Sep 13, 2024 | 10:37 AM

Share

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ದೊಡ್ಡ ಮಟ್ಟದಲ್ಲಿ ಹೈಪ್ ಸೃಷ್ಟಿ ಮಾಡಿದೆ. ಇತ್ತೀಚೆಗೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾಗೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ರಿಲೀಸ್​ಗೆ ಕೆಲವು ದಿನಗಳು ಬಾಕಿ ಇರುವಾಗ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಮುಗಿದಿದೆ. ಈ ವೇಳೆ ಮೂರು ಕಡೆಗಳಲ್ಲಿ ಕತ್ತರಿ ಹಾಕಲು ಸೆನ್ಸಾರ್ ಮಂಡಳಿ ಸೂಚಿಸಿದೆ.

‘ದೇವರ’ ಚಿತ್ರಕ್ಕೆ U/A ಪ್ರಮಾಣಪತ್ರ ನೀಡಲಾಗಿದೆ. ಸಿನಿಮಾಗೆ ಮೂರು ದೃಶ್ಯಗಳನ್ನು ಕಟ್ ಮಾಡಲು ಹಾಗೂ ಒಂದು ದೃಶ್ಯದಲ್ಲಿ ವಿಎಫ್​ಎಕ್ಸ್ ದೃಶ್ಯ ಎಂದು ಉಲ್ಲೇಖಿಸಲು ಸೂಚಿಸಿದೆ. ಮೂರು ದೃಶ್ಯಗಳು ಹೆಚ್ಚು ವೈಲೆನ್ಸ್​ ಇಂದ ಕೂಡಿದೆಯಂತೆ. ಶಾರ್ಕ್​ ದೃಶ್ಯಕ್ಕೆ ‘ಗ್ರಾಫಿಕ್ಸ್​ ಶಾರ್ಕ್’ ಎಂದು ಉಲ್ಲೇಖಿಸಲು ಸೂಚಿಸಿದೆ. ಇದಕ್ಕೆ ತಂಡ ಒಪ್ಪಿದೆ ಎನ್ನಲಾಗಿದೆ.

ಯಾವ ದೃಶ್ಯಗಳು?

ವ್ಯಕ್ತಿಯೋರ್ವ ತನ್ನ ಪತ್ನಿಗೆ ಒದೆಯುವುದು, ವ್ಯಕ್ತಿಯ ದೇಹವನ್ನು ಖಡ್ಗದಲ್ಲಿ ಸೀಳುವುದು ಹಾಗೂ ಮಗು ತಾಯಿಗೆ ಒದೆಯುವ ದೃಶ್ಯದ ಬಗ್ಗೆ ಸೆನ್ಸಾರ್ ಮಂಡಳಿ ತಕರಾರು ತೆಗೆದಿದೆ. ಈ ದೃಶ್ಯಗಳಿಂದ ಸಮಾಜದ ಮೇಲೆ ಅಡ್ಡಪರಿಣಾಮ ಉಂಟಾಗಬಹುದು ಎಂದು ಸೆನ್ಸಾರ್ ಮಂಡಳಿ ಅಭಿಪ್ರಾಯಪಟ್ಟಿದೆ.

‘ದೇವರ’ ಅವಧಿ ಎಷ್ಟು?

‘ದೇವರ’ ಸಿನಿಮಾ ಎರಡು ಭಾಗದಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಮೊದಲ ಭಾಗದ ರನ್​ಟೈಮ್ 177 ನಿಮಿಷದ 58 ಸೆಕೆಂಡ್ ಇದೆ. ಅಂದರೆ ಸಿನಿಮಾ ಸುಮಾರು 3 ಗಂಟೆ ಇರಲಿದೆ. ಈ ಚಿತ್ರದ ಟ್ರೇಲರ್ ನೋಡಿ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ‘ದೇವರ’ ಸಿನಿಮಾದಲ್ಲಿ ಕೇವಲ ಗ್ಲಾಮರ್​ಗೆ ಸೀಮಿತವಾದ್ರಾ ಜಾನ್ವಿ ಕಪೂರ್?

ಸಿನಿಮಾ ಬಗ್ಗೆ

‘ದೇವರ’ ಸಿನಿಮಾದಲ್ಲಿ ಜೂನಿಯರ್​ ಎನ್​ಟಿಆರ್ ಪ್ರಮುಖ ಪಾತ್ರ ಮಾಡಿದ್ದಾರೆ. ಜಾನ್ವಿ ಕಪೂರ್ ಅವರಿಗೆ ಜೊತೆಯಾಗಿದ್ದಾರೆ. ಸೈಫ್ ಅಲಿ ಖಾನ್ ಈ ಚಿತ್ರದಲ್ಲಿ ವಿಲನ್ ರೋಲ್ ಮಾಡುತ್ತಿದ್ದಾರೆ. ಈ ಚಿತ್ರವನ್ನು ನಂದಮೂರಿ ಕಲ್ಯಾಣ್ ರಾಮ್. ಮಿಕ್ಕಿಲಿನೇನಿ ಸುಧಾಕರ್, ಕೊಸರಾಜು ಹರಿ ಕೃಷ್ಣ ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್​ ರವಿಚಂದರ್ ಅವರು ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್