AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ

ದೇಶದಲ್ಲಿ ಕೊವಿಡ್​ ಸಂಖ್ಯೆ ಹೆಚ್ಚಿರುವುದರಿಂದ ಭಾರತೀಯರಿಗೆ ನೇರವಾಗಿ ಅಮೆರಿಕಕ್ಕೆ ಎಂಟ್ರಿ ಇಲ್ಲ. ಆದಾಗ್ಯೂ ರಜನಿಕಾಂತ್​ಗೆ ಅಮೆರಿಕಕ್ಕೆ ತೆರಳೋಕೆ ಅವಕಾಶ ಸಿಕ್ಕಿದೆ. ಇದಕ್ಕೆ ರಜನಿ ಭಾರತ ಸರ್ಕಾರದಿಂದ ವಿಶೇಷ ಒಪ್ಪಿಗೆ ಪಡೆದಿದ್ದರು ಎನ್ನಲಾಗಿದೆ.

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ
ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ
TV9 Web
| Edited By: |

Updated on:Jun 28, 2021 | 7:58 PM

Share

ನಟ ರಜನಿಕಾಂತ್​ ವೈದ್ಯಕೀಯ ಪರೀಕ್ಷೆಗಾಗಿ ಇತ್ತೀಚೆಗೆ ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅವರು ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದ್ದವು. ಈಗ ರಜನಿಕಾಂತ್​ ಆರೋಗ್ಯದ ಬಗ್ಗೆ ನಟಿ ಕಸ್ತೂರಿ ಶಂಕರ್​ ಅವರು ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಜನಿ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಉತ್ತರ ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ.

ದೇಶದಲ್ಲಿ ಕೊವಿಡ್​ ಸಂಖ್ಯೆ ಹೆಚ್ಚಿರುವುದರಿಂದ ಭಾರತೀಯರಿಗೆ ನೇರವಾಗಿ ಅಮೆರಿಕಕ್ಕೆ ಎಂಟ್ರಿ ಇಲ್ಲ. ಆದಾಗ್ಯೂ ರಜನಿಕಾಂತ್​ಗೆ ಅಮೆರಿಕಕ್ಕೆ ತೆರಳೋಕೆ ಅವಕಾಶ ಸಿಕ್ಕಿದೆ. ಇದಕ್ಕೆ ರಜನಿ ಭಾರತ ಸರ್ಕಾರದಿಂದ ವಿಶೇಷ ಒಪ್ಪಿಗೆ ಪಡೆದಿದ್ದರು ಎನ್ನಲಾಗಿದೆ. ಈ ಎಲ್ಲಾ ಕಾರಣಕ್ಕೆ ಕಸ್ತೂರಿ ಅನುಮಾನ ಹೊರ ಹಾಕಿದ್ದಾರೆ.

‘ಭಾರತದ ಪ್ರಜೆಗಳು ಅಮೆರಿಕಕ್ಕೆ ನೇರವಾಗಿ ಎಂಟ್ರಿ ಪಡೆಯುವುದರ ಮೇಲೆ ಅಲ್ಲಿನ ದೇಶ ನಿರ್ಬಂಧ ಹೇರಿದೆ. ಆದರೆ, ವೈದ್ಯಕೀಯ ಸಮಸ್ಯೆ ಆದರೆ ಮಾತ್ರ ವಿನಾಯತಿ ಇದೆ. ಈ ಸಂದರ್ಭದಲ್ಲಿ ರಜನಿಕಾಂತ್​ ಏಕೆ ಮತ್ತು ಹೇಗೆ ಅಮೆರಿಕಕ್ಕೆ ತೆರಳಿದರು. ಅವರು ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದಿದ್ದರು. ಈಗ ಅವರು ಅಮೆರಿಕಕ್ಕೆ ತೆರಳಿದ ವಿಚಾರ ಅನುಮಾನ ಹುಟ್ಟು ಹಾಕಿದೆ. ರಜನಿ ಸರ್​ ದಯವಿಟ್ಟು ಇದನ್ನು ಸ್ಪಷ್ಟಪಡಿಸಿ’ ಎಂದು ಕಸ್ತೂರಿ ಕೇಳಿದ್ದಾರೆ.

‘ಸಾಮಾನ್ಯ ವೈದ್ಯಕೀಯ ಪರೀಕ್ಷೆಗೆ ರಜನಿ ಅಮೆರಿಕಕ್ಕೆ ಹೋಗಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಭಾರತದಲ್ಲಿ ಸಿಗದೆ ಇರುವ ಈ ಚಿಕಿತ್ಸೆ ಅಮೆರಿಕದಲ್ಲಿ ಸಿಗುತ್ತಿದೆಯೇ?  ರಜನಿಕಾಂತ್​ ಅಮೆರಿಕಕ್ಕೆ ತೆರಳಿದ್ದು ಒಂದು ಮಿಸ್ಟರಿ ರೀತಿಯಲ್ಲಿ ಕಾಣಿಸುತ್ತಿದೆ. ರಜನಿ ತೆರಳಿರುವ ಮಾಯೊ ಕ್ಲೀನಿಕ್​  ಹೃದಯಕ್ಕೆ ಸಂಬಂಧಿಸಿದ ಆಸ್ಪತ್ರೆ. ನಾನು ಹೆಚ್ಚು ಆಲೋಚನೆ ಮಾಡಿದಷ್ಟು ಕೆಟ್ಟದಾಗಿ ಕಾಣುತ್ತಿದೆ ಎಂದು ಅವರು ಆತಂಕ ಹೊರ ಹಾಕಿದ್ದಾರೆ.

‘ಅಣ್ಣಾಥೆ’ ಸಿನಿಮಾದ ಚಿತ್ರೀಕರಣಕ್ಕಾಗಿ ರಜನಿಕಾಂತ್ ಏಪ್ರಿಲ್​​ನಲ್ಲಿ ಹೈದರಾಬಾದ್‌ಗೆ ತೆರಳಿದ್ದರು.  ಒಂದು ತಿಂಗಳು ನಿರಂತರವಾಗಿ ಅವರು ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಸದ್ಯ ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ:ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?

Published On - 6:32 pm, Mon, 28 June 21

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ