AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ

ದೇಶದಲ್ಲಿ ಕೊವಿಡ್​ ಸಂಖ್ಯೆ ಹೆಚ್ಚಿರುವುದರಿಂದ ಭಾರತೀಯರಿಗೆ ನೇರವಾಗಿ ಅಮೆರಿಕಕ್ಕೆ ಎಂಟ್ರಿ ಇಲ್ಲ. ಆದಾಗ್ಯೂ ರಜನಿಕಾಂತ್​ಗೆ ಅಮೆರಿಕಕ್ಕೆ ತೆರಳೋಕೆ ಅವಕಾಶ ಸಿಕ್ಕಿದೆ. ಇದಕ್ಕೆ ರಜನಿ ಭಾರತ ಸರ್ಕಾರದಿಂದ ವಿಶೇಷ ಒಪ್ಪಿಗೆ ಪಡೆದಿದ್ದರು ಎನ್ನಲಾಗಿದೆ.

ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ
ರಜನಿಕಾಂತ್​ ಆರೋಗ್ಯದ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತಪಡಿಸಿದ ಕಿರುತೆರೆ ನಟಿ
TV9 Web
| Edited By: |

Updated on:Jun 28, 2021 | 7:58 PM

Share

ನಟ ರಜನಿಕಾಂತ್​ ವೈದ್ಯಕೀಯ ಪರೀಕ್ಷೆಗಾಗಿ ಇತ್ತೀಚೆಗೆ ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅವರು ವೈದ್ಯಕೀಯ ಪರೀಕ್ಷೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದ್ದವು. ಈಗ ರಜನಿಕಾಂತ್​ ಆರೋಗ್ಯದ ಬಗ್ಗೆ ನಟಿ ಕಸ್ತೂರಿ ಶಂಕರ್​ ಅವರು ಸಾಕಷ್ಟು ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಜನಿ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದು, ಅದಕ್ಕೆ ಉತ್ತರ ನಿರೀಕ್ಷಿಸುತ್ತಿರುವುದಾಗಿ ಹೇಳಿದ್ದಾರೆ.

ದೇಶದಲ್ಲಿ ಕೊವಿಡ್​ ಸಂಖ್ಯೆ ಹೆಚ್ಚಿರುವುದರಿಂದ ಭಾರತೀಯರಿಗೆ ನೇರವಾಗಿ ಅಮೆರಿಕಕ್ಕೆ ಎಂಟ್ರಿ ಇಲ್ಲ. ಆದಾಗ್ಯೂ ರಜನಿಕಾಂತ್​ಗೆ ಅಮೆರಿಕಕ್ಕೆ ತೆರಳೋಕೆ ಅವಕಾಶ ಸಿಕ್ಕಿದೆ. ಇದಕ್ಕೆ ರಜನಿ ಭಾರತ ಸರ್ಕಾರದಿಂದ ವಿಶೇಷ ಒಪ್ಪಿಗೆ ಪಡೆದಿದ್ದರು ಎನ್ನಲಾಗಿದೆ. ಈ ಎಲ್ಲಾ ಕಾರಣಕ್ಕೆ ಕಸ್ತೂರಿ ಅನುಮಾನ ಹೊರ ಹಾಕಿದ್ದಾರೆ.

‘ಭಾರತದ ಪ್ರಜೆಗಳು ಅಮೆರಿಕಕ್ಕೆ ನೇರವಾಗಿ ಎಂಟ್ರಿ ಪಡೆಯುವುದರ ಮೇಲೆ ಅಲ್ಲಿನ ದೇಶ ನಿರ್ಬಂಧ ಹೇರಿದೆ. ಆದರೆ, ವೈದ್ಯಕೀಯ ಸಮಸ್ಯೆ ಆದರೆ ಮಾತ್ರ ವಿನಾಯತಿ ಇದೆ. ಈ ಸಂದರ್ಭದಲ್ಲಿ ರಜನಿಕಾಂತ್​ ಏಕೆ ಮತ್ತು ಹೇಗೆ ಅಮೆರಿಕಕ್ಕೆ ತೆರಳಿದರು. ಅವರು ರಾಜಕೀಯ ಪಕ್ಷ ಸ್ಥಾಪನೆಯಿಂದ ಹಿಂದೆ ಸರಿದಿದ್ದರು. ಈಗ ಅವರು ಅಮೆರಿಕಕ್ಕೆ ತೆರಳಿದ ವಿಚಾರ ಅನುಮಾನ ಹುಟ್ಟು ಹಾಕಿದೆ. ರಜನಿ ಸರ್​ ದಯವಿಟ್ಟು ಇದನ್ನು ಸ್ಪಷ್ಟಪಡಿಸಿ’ ಎಂದು ಕಸ್ತೂರಿ ಕೇಳಿದ್ದಾರೆ.

‘ಸಾಮಾನ್ಯ ವೈದ್ಯಕೀಯ ಪರೀಕ್ಷೆಗೆ ರಜನಿ ಅಮೆರಿಕಕ್ಕೆ ಹೋಗಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಭಾರತದಲ್ಲಿ ಸಿಗದೆ ಇರುವ ಈ ಚಿಕಿತ್ಸೆ ಅಮೆರಿಕದಲ್ಲಿ ಸಿಗುತ್ತಿದೆಯೇ?  ರಜನಿಕಾಂತ್​ ಅಮೆರಿಕಕ್ಕೆ ತೆರಳಿದ್ದು ಒಂದು ಮಿಸ್ಟರಿ ರೀತಿಯಲ್ಲಿ ಕಾಣಿಸುತ್ತಿದೆ. ರಜನಿ ತೆರಳಿರುವ ಮಾಯೊ ಕ್ಲೀನಿಕ್​  ಹೃದಯಕ್ಕೆ ಸಂಬಂಧಿಸಿದ ಆಸ್ಪತ್ರೆ. ನಾನು ಹೆಚ್ಚು ಆಲೋಚನೆ ಮಾಡಿದಷ್ಟು ಕೆಟ್ಟದಾಗಿ ಕಾಣುತ್ತಿದೆ ಎಂದು ಅವರು ಆತಂಕ ಹೊರ ಹಾಕಿದ್ದಾರೆ.

‘ಅಣ್ಣಾಥೆ’ ಸಿನಿಮಾದ ಚಿತ್ರೀಕರಣಕ್ಕಾಗಿ ರಜನಿಕಾಂತ್ ಏಪ್ರಿಲ್​​ನಲ್ಲಿ ಹೈದರಾಬಾದ್‌ಗೆ ತೆರಳಿದ್ದರು.  ಒಂದು ತಿಂಗಳು ನಿರಂತರವಾಗಿ ಅವರು ಸಿನಿಮಾ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದರು. ಸದ್ಯ ಈ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ.

ಇದನ್ನೂ ಓದಿ:ಕೊವಿಡ್​ ಇಳಿಮುಖ ಆಗುತ್ತಿದ್ದಂತೆಯೇ ವಿದೇಶಕ್ಕೆ ಹಾರಿದ ರಜನಿಕಾಂತ್​; ಕಾರಣ ಏನು?

Published On - 6:32 pm, Mon, 28 June 21

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ