AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರಕ್ಕಿಂತಲೂ ನನಗೆ ಸೆಕ್ಸ್​ ಮುಖ್ಯ ಎಂದು ಹೇಳಿದ್ದ ಸಮಂತಾ; ವಿಡಿಯೋ ಮತ್ತೆ ವೈರಲ್​

ಅದು 2017ರ ಸಮಯ. ಸಮಂತಾ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಈ ವೇಳೆ ಅವರಿಗೆ ವಿಚಿತ್ರ ಪ್ರಶ್ನೆ ಒಂದು ಎದುರಾಗಿತ್ತು. ಈ ಪ್ರಶ್ನೆಗೆ ಅವರು ಉತ್ತರ ನೀಡದೆಯೂ ಇರಬಹುದಿತ್ತು. ಆದರೆ, ಅವರು ಆರೀತಿ ಮಾಡಿಲ್ಲ.

ಆಹಾರಕ್ಕಿಂತಲೂ ನನಗೆ ಸೆಕ್ಸ್​ ಮುಖ್ಯ ಎಂದು ಹೇಳಿದ್ದ ಸಮಂತಾ; ವಿಡಿಯೋ ಮತ್ತೆ ವೈರಲ್​
ಸಮಂತಾ
TV9 Web
| Edited By: |

Updated on:Jan 10, 2022 | 4:56 PM

Share

ನಟಿ ಸಮಂತಾ ಸದ್ಯ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಶೀಘ್ರವೇ ಅವರು ಹಾಲಿವುಡ್​ ಕೂಡ ಪ್ರವೇಶ ಮಾಡಲಿದ್ದಾರೆ. ಇದರ ಜತೆಗೆ ಅವರ ವೈಯಕ್ತಿಕ ಜೀವನ ಸಾಕಷ್ಟು ಸುದ್ದಿಯಾಗುತ್ತಿದೆ. ಸಮಂತಾ ಬಗ್ಗೆ ಸಾಕಷ್ಟು ವಿಚಾರಗಳು ಹರಿದಾಡುತ್ತಿವೆ. ಕೆಲವರು ಹಳೆಯ ಫೋಟೋ ಹಾಗೂ ವಿಡಿಯೋಗಳನ್ನು ಹುಡುಕಿ ತೆಗೆದು ವೈರಲ್​ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಈಗ ಅವರು ಸೆಕ್ಸ್​ ಕುರಿತಂತೆ ಹೇಳಿದ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋ ಬಗ್ಗೆ ನಾನಾ ರೀತಿಯ ಚರ್ಚೆಗಳು ಕೂಡ ನಡೆಯುತ್ತಿದೆ.

ಅದು 2017ರ ಸಮಯ. ಸಮಂತಾ ಅವರು ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಈ ವೇಳೆ ಅವರಿಗೆ ವಿಚಿತ್ರ ಪ್ರಶ್ನೆ ಒಂದು ಎದುರಾಗಿತ್ತು. ಈ ಪ್ರಶ್ನೆಗೆ ಅವರು ಉತ್ತರ ನೀಡದೆಯೂ ಇರಬಹುದಿತ್ತು. ಆದರೆ, ಅವರು ಆರೀತಿ ಮಾಡಿಲ್ಲ. ಆ ಪ್ರಶ್ನೆಗೆ ಉತ್ತರ ಹೇಳಿದ್ದಾರೆ. ಆಗಲೂ ಈ ವಿಚಾರ ಚರ್ಚೆಗೆ ಕಾರಣವಾಗಿತ್ತು.

ಸೆಕ್ಸ್​ ಅಥವಾ ಆಹಾರ ಈ ಎರಡಲ್ಲಿ ಒಂದನ್ನು ಆಯ್ಕೆ ಮಾಡುವಂತೆ ಸೂಚಿಸಲಾಗಿತ್ತು. ಈ ವೇಳೆ ಸೆಕ್ಸ್​ ಆಯ್ಕೆ ಮಾಡಿಕೊಳ್ಳುವುದಾಗಿ ಸಮಂತಾ ಹೇಳಿದ್ದರು. ಅಷ್ಟೇ ಅಲ್ಲ, ಊಟವಿಲ್ಲದೆ ಒಂದು ದಿನ ಇರಬಲ್ಲೆ. ಆದರೆ, ಸೆಕ್ಸ್ ಇಲ್ಲದೆ ಬದುಕಲಾರೆ ಎಂದು ಅವರು ಹೇಳಿಕೊಂಡಿದ್ದರು. ಈ ವಿಡಿಯೋ ಈಗ ವೈರಲ್​ ಆಗುತ್ತಿದೆ.

ಸಮಂತಾ ನಟಿಸಿದ್ದ ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಬಗ್ಗೆ ತಮಿಳುನಾಡಿನ ಜನರು ಅಸಮಾಧಾನ ವ್ಯಕ್ತಪಡಿಸಿದ್ದರು. ತಮಿಳರ ಭಾವನೆಗಳಿಗೆ ಸಮಂತಾ ಪಾತ್ರವು ಧಕ್ಕೆ ಉಂಟುಮಾಡುತ್ತದೆ ಎಂದು ಆರೋಪಿಸಲಾಗಿತ್ತು. ಈಗ ‘ಅರೇಂಜ್​ಮೆಂಟ್ಸ್​ ಆಫ್​ ಲವ್​’ ಸಿನಿಮಾದಲ್ಲಿ ಬೈಸೆಕ್ಸುವಲ್​ ತಮಿಳು ಮಹಿಳೆಯಾಗಿ ಸಮಂತಾ ನಟಿಸಿದರೆ ಮತ್ತೆ ವಿವಾದ ಭುಗಿಲೇಳುವ ಸಾಧ್ಯತೆ ಇದೆ. ಬೈಸೆಕ್ಸುವಲ್​ ಎಂದರೆ ಗಂಡು ಮತ್ತು ಹೆಣ್ಣು ಇಬ್ಬರಲ್ಲೂ ಲೈಂಗಿಕ ಆಸಕ್ತಿ ಹೊಂದಿರುವ ವ್ಯಕ್ತಿ. ತಮಿಳುನಾಡಿನ ಮಹಿಳೆಯನ್ನು ಆ ರೀತಿಯ ಪಾತ್ರದಲ್ಲಿ ತೋರಿಸಲಾಗುತ್ತದೆ ಎಂಬ ವಿಷಯ ಕೇಳಿಬಂದ ಬಳಿಕ ಅನೇಕರು ಅದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಸದ್ಯ ಸಮಂತಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ: Samantha: ಅವಾಚ್ಯವಾಗಿ, ಅಶ್ಲೀಲವಾಗಿ ಟ್ರೋಲ್ ಮಾಡುವವರಿಗೆ ಕಿವಿ ಮಾತು ಹೇಳಿದ ಸಮಂತಾ

Pushpa: ಐಟಂ ಸಾಂಗ್ ಪೋಸ್ಟರ್ ಮೂಲಕವೇ ಪಡ್ಡೆ ಹುಡುಗರ ಹೃದಯ ಬಡಿತ ಹೆಚ್ಚಿಸಿದ ಸಮಂತಾ

Published On - 5:05 pm, Wed, 1 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?