AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samantha: ದೇವರ ಮೊರೆಹೋದ ನಟಿ ಸಮಂತಾ; ಇನ್ನೂ ವಾಸಿ ಆಗಿಲ್ಲವೇ ಅಪರೂಪದ ಕಾಯಿಲೆ?

Samantha Ruth Prabhu | Palani Murugan Temple: ಸಮಂತಾಗೆ ಇರುವ Myositis ಕಾಯಿಲೆ ವಾಸಿಯಾಗಲು ನಿರೀಕ್ಷಿಸಿದ್ದಕಿಂತಲೂ ಹೆಚ್ಚು ಸಮಯ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ದೇವರ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

Samantha: ದೇವರ ಮೊರೆಹೋದ ನಟಿ ಸಮಂತಾ; ಇನ್ನೂ ವಾಸಿ ಆಗಿಲ್ಲವೇ ಅಪರೂಪದ ಕಾಯಿಲೆ?
ಪಳನಿ ಮುರುಗನ್ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಟಿ ಸಮಂತಾ
ಮದನ್​ ಕುಮಾರ್​
|

Updated on:Feb 14, 2023 | 7:32 PM

Share

ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್​ ಸಿರೀಸ್​ ಸೂಪರ್​ ಹಿಟ್​ ಆದ ಬಳಿಕ ಅವರಿಗೆ ಹಿಂದಿ ವಲಯದಲ್ಲಿ ಡಿಮ್ಯಾಂಡ್​ ಹೆಚ್ಚಾಯಿತು. ‘ಪುಷ್ಪ’ ಸಿನಿಮಾದಲ್ಲಿ ಐಟಂ ಡ್ಯಾನ್ಸ್​ ಮಾಡಿದ ಮೇಲೆ ಅದೇ ರೀತಿಯ ಅನೇಕ ಆಫರ್​ಗಳು ಬರಲು ಆರಂಭಿಸಿದವು. ಎಲ್ಲವನ್ನೂ ಅಳೆದು-ತೂಗಿ ಸಮಂತಾ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆದರೆ ಅವರಿಗೆ ಆರೋಗ್ಯ ಸಮಸ್ಯೆ (Samantha Health Problem) ಇರುವುದರಿಂದ ಚಿತ್ರರಂಗದ ಕೆಲಸಗಳು ಕೊಂಚ ವಿಳಂಬ ಆಗುತ್ತಿವೆ. Myositis ಕಾಯಿಲೆಯಿಂದ ಸಮಂತಾ ಅವರು ಸಂಪೂರ್ಣ ಚೇತರಿಸಿಕೊಂಡಿಲ್ಲ. ಈ ನಡುವೆ ಅವರು ದೇವರ ಮೊರೆ ಹೋಗಿದ್ದಾರೆ.

ಸಮಂತಾ ರುತ್​ ಪ್ರಭು ಅವರು ತಮಿಳುನಾಡಿನ ಪಳನಿ ಮುರುಗನ್​ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂದಾಜು 600 ಮೆಟ್ಟಿಲುಗಳನ್ನು ಹತ್ತಿ ದೇವರ ದರ್ಶನ ಪಡೆದಿದ್ದಾರೆ. ಅವರಿಗೆ ನಿರ್ದೇಶಕ ಸಿ. ಪ್ರೇಮ್​ ಕುಮಾ​ರ್​ ಸಾತ್​ ನೀಡಿದ್ದಾರೆ. ಸಮಂತಾ ಅವರು ದೇವಸ್ಥಾನದಲ್ಲಿ ಪೂಜೆ ಮಾಡಿಸುತ್ತಿರುವ ಫೋಟೋಗಳು ವೈರಲ್​ ಆಗಿವೆ.

ಇದನ್ನೂ ಓದಿ
Image
Naga Chaitanya: ‘ಸಮಂತಾ ಸಿಕ್ಕರೆ ತಬ್ಬಿಕೊಳ್ತೀನಿ, ಟ್ಯಾಟೂ ತೆಗೆಸಲ್ಲ’: ಹಳೇ ಹೆಂಡತಿ ಬಗ್ಗೆ ನಾಗ ಚೈತನ್ಯ ನೇರ ಮಾತು
Image
Samantha: ನಾಗ ಚೈತನ್ಯ ಜತೆ ವಾಸಿಸಿದ್ದ ಮನೆಯನ್ನು ದುಬಾರಿ ಬೆಲೆ ಕೊಟ್ಟು ಖರೀದಿಸಿದ ಸಮಂತಾ; ಏನಿದು ಸೆಂಟಿಮೆಂಟ್​?
Image
Samantha: ‘ನಾಗ ಚೈತನ್ಯಗೆ ಡಿವೋರ್ಸ್​ ನೀಡಿದ ಬಳಿಕ ಕಷ್ಟ ಆಯ್ತು’; ಕಡೆಗೂ ನಿಜ ಒಪ್ಪಿಕೊಂಡ ಸಮಂತಾ
Image
‘ಊ ಅಂಟಾವಾ ಮಾವ..’ ಎಂದು ಸಖತ್ ಆಗಿ ಸ್ಟೆಪ್ ಹಾಕಿದ ಸಮಂತಾ-ಅಕ್ಷಯ್ ಕುಮಾರ್

ಇದನ್ನೂ ಓದಿ: Shaakuntalam: ಏಪ್ರಿಲ್​ 14ರಂದು ರಿಲೀಸ್​ ಆಗಲಿದೆ ‘ಶಾಕುಂತಲಂ’; ಗೆಲುವಿಗಾಗಿ ಕಾದಿರುವ ನಟಿ ಸಮಂತಾ

Myositis ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಅವರಿಗೆ ಸಾಕಷ್ಟು ತೊಂದರೆ ಆಗಿದೆ. ಇದರಿಂದ ಅವರು ಸರಿಯಾದ ಸಮಯದಲ್ಲಿ ಸಿನಿಮಾದ ಕೆಲಸಗಳನ್ನು ಮುಗಿಸಲು ಸಾಧ್ಯವಾಗುತ್ತಿಲ್ಲ. ದೈಹಿಕವಾಗಿ ಚಾಲೆಂಜಿಂಗ್​ ಆಗಿರುವಂತಹ ಪಾತ್ರಗಳನ್ನು ಒಪ್ಪಿಕೊಳ್ಳಲು ಆಗುತ್ತಿಲ್ಲ. ಈ ಕಾಯಿಲೆ ವಾಸಿಯಾಗಲು ನಿರೀಕ್ಷಿಸಿದ್ದಕಿಂತಲೂ ಹೆಚ್ಚು ಸಮಯ ಹಿಡಿಯುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ದೇವರ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Samantha: ಮುಂಬೈನಲ್ಲಿ 3 ಬೆಡ್​ ರೂಂ ಮನೆ ಖರೀದಿಸಿದ ನಟಿ ಸಮಂತಾ; ಇದರ ಬೆಲೆ ಎಷ್ಟು?

ಸಮಂತಾ ನಟಿಸಿರುವ ‘ಶಾಕುಂತಲಂ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪೌರಾಣಿಕ ಕಥಾಹಂದರದ ಈ ಚಿತ್ರದಲ್ಲಿ ಅವರು ಶಕುಂತಲೆಯ ಪಾತ್ರ ಮಾಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ‘ಶಾಕುಂತಲಂ’ ರಿಲೀಸ್​ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಳಂಬ ಆಯಿತು. ಏಪ್ರಿಲ್​ 14ರಂದು ಈ ಚಿತ್ರವನ್ನು ತೆರೆಕಾಣಿಸುವುದಾಗಿ ನಿರ್ಮಾಪಕರು ಘೋಷಣೆ ಮಾಡಿದ್ದಾರೆ.

ಒಂದಿಲ್ಲೊಂದು ಕಾರಣಕ್ಕೆ ಸಮಂತಾ ಅವರ ಬಗ್ಗೆ ಸುದ್ದಿ ಆಗುತ್ತಲೇ ಇರುತ್ತದೆ. ಅವರ ಬಗ್ಗೆ ಹಬ್ಬಿರುವ ಗಾಸಿಪ್​ಗಳು ಒಂದೆರಡಲ್ಲ. ‘ಪುಷ್ಪ 2’ ಚಿತ್ರದಲ್ಲಿ ಐಟಂ ಡ್ಯಾನ್ಸ್​ ಮಾಡುವ ಆಫರ್​ ಅನ್ನು ಸಮಂತಾ ಒಪ್ಪಿಕೊಂಡಿಲ್ಲ ಎಂದು ಹೇಳಲಾಗುತ್ತಿದೆ. ದಕ್ಷಿಣ ಭಾರತದ ಸಿನಿಮಾಗಳಿಗಿಂತ ಹಿಂದಿ ಚಿತ್ರಗಳು ಮತ್ತು ವೆಬ್​ ಸಿರೀಸ್​ಗಳ ಕಡೆಗೆ ಅವರು ಹೆಚ್ಚು ಒಲವು ತೋರುತ್ತಿದ್ದಾರೆ ಎಂದೆಲ್ಲ ಗುಸುಗುಸು ಹಬ್ಬಿದೆ. ಆದರೆ ಆ ಬಗ್ಗೆ ಸಮಂತಾ ಕಡೆಯಿಂದಲೇ ಸ್ಪಷ್ಟನೆ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:32 pm, Tue, 14 February 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ