AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ
ಕಂಗನಾ-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Mar 28, 2024 | 7:32 AM

Share

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಮೊದಲಿನಿಂದಲೂ ನೇರ ನುಡಿಗಳ ಮೂಲಕವೇ ಗಮನ ಸೆಳೆಯುತ್ತಿದ್ದ ಅವರು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡುತ್ತಿದ್ದಾರೆ. ಈ ಮಧ್ಯೆ ಅವರು ಚಿತ್ರರಂಗದಲ್ಲಿ ತಮ್ಮ ಸಿನಿಮಾಗಳು ನಿರಂತರವಾಗಿ ಫ್ಲಾಪ್​ ಆಗುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮನ್ನು ತಾವು ಶಾರುಖ್ ಖಾನ್ ಜೊತೆ ಹೋಲಿಕೆ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಶಾರುಖ್ ಅಭಿಮಾನಿಗಳು ಕಂಗನಾ ಅವರನ್ನು ಟೀಕೆ ಮಾಡಿದ್ದಾರೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ. ‘ಶಾರುಖ್ ಖಾನ್ ಕೂಡ 10 ಫ್ಲಾಪ್ ನೀಡಿದ್ದರು’ ಎಂದು ಹೇಳಿದ್ದಾರೆ. ಶಾರುಖ್ ಖಾನ್ ನಟನೆಯ ಹಲವು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಎನಿಸಿಕೊಂಡಿದ್ದವು. ‘ಪಠಾಣ್’ ಚಿತ್ರದಿಂದ ಅವರ ಅದೃಷ್ಟ ಬದಲಾಯಿತು.

‘ಶಾರುಖ್ ಖಾನ್ ಅವರ 10 ಸಿನಿಮಾಗಳು ಚೆನ್ನಾಗಿ ಓಡಿಲ್ಲ. ನಂತರ ಪಠಾಣ್ ಗೆಲುವು ಕಂಡಿತು. ಏಳೆಂಟು ವರ್ಷ ನನ್ನ ಯಾವ ಸಿನಿಮಾಗಳೂ ಉತ್ತಮ ಕಲೆಕ್ಷನ್ ಮಾಡಿರಲಿಲ್ಲ. ಆದರೆ ಕ್ವೀನ್ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಮತ್ತೆ ಮೂರ್ನಾಲ್ಕು ವರ್ಷ ಬಿಟ್ಟು ಮಣಿಕರ್ಣಿಕಾ ಹಿಟ್ ಆಯಿತು. ಈಗ ಎಮರ್ಜೆನ್ಸಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅದ್ಭುತಗಳನ್ನು ಸೃಷ್ಟಿಸಬಹುದು’ ಎಂದು ಭರವಸೆಯ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಕಂಗನಾ ರಣಾವತ್ ತಮ್ಮ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಟಿಕೆಟ್ ಪಡೆದಿದ್ದಾರೆ. ಮೊದಲಿನಿಂದಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತಲೇ ಬರುತ್ತಿದ್ದರು. ಇತ್ತೀಚೆಗೆ ಅವರು ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ‘ನಾನು ರಾಜಕೀಯಕ್ಕೆ ಕಾಲಿಡಲು ಇದು ಸರಿಯಾದ ಸಮಯ’ ಎಂದು ಅವರು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ