AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ
ಕಂಗನಾ-ಶಾರುಖ್
Follow us
ರಾಜೇಶ್ ದುಗ್ಗುಮನೆ
|

Updated on: Mar 28, 2024 | 7:32 AM

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಮೊದಲಿನಿಂದಲೂ ನೇರ ನುಡಿಗಳ ಮೂಲಕವೇ ಗಮನ ಸೆಳೆಯುತ್ತಿದ್ದ ಅವರು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡುತ್ತಿದ್ದಾರೆ. ಈ ಮಧ್ಯೆ ಅವರು ಚಿತ್ರರಂಗದಲ್ಲಿ ತಮ್ಮ ಸಿನಿಮಾಗಳು ನಿರಂತರವಾಗಿ ಫ್ಲಾಪ್​ ಆಗುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮನ್ನು ತಾವು ಶಾರುಖ್ ಖಾನ್ ಜೊತೆ ಹೋಲಿಕೆ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಶಾರುಖ್ ಅಭಿಮಾನಿಗಳು ಕಂಗನಾ ಅವರನ್ನು ಟೀಕೆ ಮಾಡಿದ್ದಾರೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ. ‘ಶಾರುಖ್ ಖಾನ್ ಕೂಡ 10 ಫ್ಲಾಪ್ ನೀಡಿದ್ದರು’ ಎಂದು ಹೇಳಿದ್ದಾರೆ. ಶಾರುಖ್ ಖಾನ್ ನಟನೆಯ ಹಲವು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಎನಿಸಿಕೊಂಡಿದ್ದವು. ‘ಪಠಾಣ್’ ಚಿತ್ರದಿಂದ ಅವರ ಅದೃಷ್ಟ ಬದಲಾಯಿತು.

‘ಶಾರುಖ್ ಖಾನ್ ಅವರ 10 ಸಿನಿಮಾಗಳು ಚೆನ್ನಾಗಿ ಓಡಿಲ್ಲ. ನಂತರ ಪಠಾಣ್ ಗೆಲುವು ಕಂಡಿತು. ಏಳೆಂಟು ವರ್ಷ ನನ್ನ ಯಾವ ಸಿನಿಮಾಗಳೂ ಉತ್ತಮ ಕಲೆಕ್ಷನ್ ಮಾಡಿರಲಿಲ್ಲ. ಆದರೆ ಕ್ವೀನ್ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಮತ್ತೆ ಮೂರ್ನಾಲ್ಕು ವರ್ಷ ಬಿಟ್ಟು ಮಣಿಕರ್ಣಿಕಾ ಹಿಟ್ ಆಯಿತು. ಈಗ ಎಮರ್ಜೆನ್ಸಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅದ್ಭುತಗಳನ್ನು ಸೃಷ್ಟಿಸಬಹುದು’ ಎಂದು ಭರವಸೆಯ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಕಂಗನಾ ರಣಾವತ್ ತಮ್ಮ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಟಿಕೆಟ್ ಪಡೆದಿದ್ದಾರೆ. ಮೊದಲಿನಿಂದಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತಲೇ ಬರುತ್ತಿದ್ದರು. ಇತ್ತೀಚೆಗೆ ಅವರು ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ‘ನಾನು ರಾಜಕೀಯಕ್ಕೆ ಕಾಲಿಡಲು ಇದು ಸರಿಯಾದ ಸಮಯ’ ಎಂದು ಅವರು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಸರ್ಕಾರದ ಸಾಧನಾ ಸಮಾವೇಶ ನನಗೆ ಸಂಬಂಧಿಸಿದ ವಿಷಯವಲ್ಲ: ಯಡಿಯೂರಪ್ಪ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಗೃಹಲಕ್ಷ್ಮಿ ಹಣ ವರ್ಗಾವಣೆ ಯಾವಾಗ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ನೋಡಿ
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಿಥುನ ರಾಶಿಗೆ ಗುರು ಸಂಚಾರ; ಮೇಷ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?