AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ.

ನಾನೊಬ್ಬಳೇ ಅಲ್ಲ, ಶಾರುಖ್ ಖಾನ್ ಕೂಡ 10 ಫ್ಲಾಪ್ ಕೊಟ್ಟಿದ್ದರು ಎಂದ ಕಂಗನಾ
ಕಂಗನಾ-ಶಾರುಖ್
ರಾಜೇಶ್ ದುಗ್ಗುಮನೆ
|

Updated on: Mar 28, 2024 | 7:32 AM

Share

ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಅವರು ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಮೊದಲಿನಿಂದಲೂ ನೇರ ನುಡಿಗಳ ಮೂಲಕವೇ ಗಮನ ಸೆಳೆಯುತ್ತಿದ್ದ ಅವರು ಈಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆದು ಸ್ಪರ್ಧೆ ಮಾಡುತ್ತಿದ್ದಾರೆ. ಈ ಮಧ್ಯೆ ಅವರು ಚಿತ್ರರಂಗದಲ್ಲಿ ತಮ್ಮ ಸಿನಿಮಾಗಳು ನಿರಂತರವಾಗಿ ಫ್ಲಾಪ್​ ಆಗುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮನ್ನು ತಾವು ಶಾರುಖ್ ಖಾನ್ ಜೊತೆ ಹೋಲಿಕೆ ಮಾಡಿಕೊಂಡಿದ್ದಾರೆ. ಈ ಕಾರಣಕ್ಕೆ ಶಾರುಖ್ ಅಭಿಮಾನಿಗಳು ಕಂಗನಾ ಅವರನ್ನು ಟೀಕೆ ಮಾಡಿದ್ದಾರೆ.

ಕಂಗನಾ ರಣಾವತ್ ನಟನೆಯ ‘ಧಾಕಡ್’, ‘ತಲೈವಿ’, ‘ತೇಜಸ್’, ಚಂದ್ರಮುಖಿ 2’ ಸೇರಿ ಅನೇಕ ಸಿನಿಮಾಗಳು ಫ್ಲಾಪ್ ಆಗಿವೆ. ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ಸೋತಿರುವುದರಿಂದ ಅವರಿಗೆ ಸಖತ್ ಬೇಸರ ಆಗಿದೆ. ಈ ವಿಚಾರದಲ್ಲಿ ಅವರು ಇಷ್ಟು ದಿನ ಸೈಲೆಂಟ್ ಆಗಿದ್ದರು. ಈಗ ಆ ಬಗ್ಗೆ ಮಾತನಾಡಿದ್ದಾರೆ. ‘ಶಾರುಖ್ ಖಾನ್ ಕೂಡ 10 ಫ್ಲಾಪ್ ನೀಡಿದ್ದರು’ ಎಂದು ಹೇಳಿದ್ದಾರೆ. ಶಾರುಖ್ ಖಾನ್ ನಟನೆಯ ಹಲವು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ಫ್ಲಾಪ್ ಎನಿಸಿಕೊಂಡಿದ್ದವು. ‘ಪಠಾಣ್’ ಚಿತ್ರದಿಂದ ಅವರ ಅದೃಷ್ಟ ಬದಲಾಯಿತು.

‘ಶಾರುಖ್ ಖಾನ್ ಅವರ 10 ಸಿನಿಮಾಗಳು ಚೆನ್ನಾಗಿ ಓಡಿಲ್ಲ. ನಂತರ ಪಠಾಣ್ ಗೆಲುವು ಕಂಡಿತು. ಏಳೆಂಟು ವರ್ಷ ನನ್ನ ಯಾವ ಸಿನಿಮಾಗಳೂ ಉತ್ತಮ ಕಲೆಕ್ಷನ್ ಮಾಡಿರಲಿಲ್ಲ. ಆದರೆ ಕ್ವೀನ್ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಮತ್ತೆ ಮೂರ್ನಾಲ್ಕು ವರ್ಷ ಬಿಟ್ಟು ಮಣಿಕರ್ಣಿಕಾ ಹಿಟ್ ಆಯಿತು. ಈಗ ಎಮರ್ಜೆನ್ಸಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅದ್ಭುತಗಳನ್ನು ಸೃಷ್ಟಿಸಬಹುದು’ ಎಂದು ಭರವಸೆಯ ಮಾತುಗಳನ್ನು ಅವರು ಆಡಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್​ಗೆ ಬಿಜೆಪಿ ಟಿಕೆಟ್​; ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ

ಕಂಗನಾ ರಣಾವತ್ ತಮ್ಮ ಹುಟ್ಟೂರಾದ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಟಿಕೆಟ್ ಪಡೆದಿದ್ದಾರೆ. ಮೊದಲಿನಿಂದಲೂ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಬೆಂಬಲಿಸುತ್ತಲೇ ಬರುತ್ತಿದ್ದರು. ಇತ್ತೀಚೆಗೆ ಅವರು ರಾಜಕೀಯದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು. ‘ನಾನು ರಾಜಕೀಯಕ್ಕೆ ಕಾಲಿಡಲು ಇದು ಸರಿಯಾದ ಸಮಯ’ ಎಂದು ಅವರು ಹೇಳಿದ್ದು ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು