AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nayanthara: ಅವಳಿ ಮಕ್ಕಳನ್ನು ಪಡೆದ ಬೆನ್ನಲ್ಲೇ ಶಾರುಖ್​ ಜೊತೆ ರಾಜಸ್ಥಾನಕ್ಕೆ ಹೊರಡಲು ಸಜ್ಜಾದ ನಯನತಾರಾ

Shah Rukh Khan | Jawan: ಶಾರುಖ್​ ಖಾನ್​ ಜತೆ ನಯನತಾರಾ ಅವರು ರಾಜಸ್ಥಾನಕ್ಕೆ ತೆರಳಿ ಚಿತ್ರೀಕರಣದಲ್ಲಿ ಭಾಗಿ ಆಗಬೇಕಿದೆ. ಇತ್ತೀಚೆಗಷ್ಟೇ ಅವರು ಮಕ್ಕಳನ್ನು ಪಡೆದಿರುವ ಕಾರಣ ಡೇಟ್ಸ್​ ನೀಡಲು ಕಷ್ಟ ಆಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ.

Nayanthara: ಅವಳಿ ಮಕ್ಕಳನ್ನು ಪಡೆದ ಬೆನ್ನಲ್ಲೇ ಶಾರುಖ್​ ಜೊತೆ ರಾಜಸ್ಥಾನಕ್ಕೆ ಹೊರಡಲು ಸಜ್ಜಾದ ನಯನತಾರಾ
ಶಾರುಖ್ ಖಾನ್, ನಯನತಾರಾ
TV9 Web
| Edited By: |

Updated on:Oct 13, 2022 | 2:24 PM

Share

ನಟಿ ನಯನತಾರಾ (Nayanthara) ಅವರು ತುಂಬ ಬ್ಯುಸಿ ಆಗಿದ್ದಾರೆ. ಸಂಸಾರ ಮತ್ತು ಸಿನಿಮಾ ಎರಡನ್ನೂ ಅವರು ಬ್ಯಾಲೆನ್ಸ್​ ಮಾಡಿಕೊಂಡು ಸಾಗುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಅವಳಿ ಮಕ್ಕಳನ್ನು ಪಡೆದ ಸುದ್ದಿ ಹೊರಬಿತ್ತು. ಅದಕ್ಕಾಗಿ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಖುಷಿಯ ನಡುವೆಯೇ ನಯನತಾರಾ ಈಗ ರಾಜಸ್ಥಾನಕ್ಕೆ ಹೊರಡಲು ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅದು ಕೂಡ ಶಾರುಖ್​ ಖಾನ್​ (Shah Rukh Khan) ಜೊತೆಯಲ್ಲಿ. ಈಗಾಗಲೇ ತಿಳಿದಿರುವಂತೆ ಇವರಿಬ್ಬರು ‘ಜವಾನ್​’ (Jawan) ಸಿನಿಮಾದಲ್ಲಿ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ ಸಲುವಾಗಿ ರಾಜಸ್ಥಾನಕ್ಕೆ ಪ್ರಯಾಣ ಬೆಳೆಸಬೇಕಿದೆ ಎಂದು ವರದಿ ಆಗಿದೆ.

ವಿಘ್ನೇಶ್​ ಶಿವನ್​ ಜೊತೆಗೆ ನಯನತಾರಾ ಮದುವೆ ಆಗಿದ್ದಾರೆ. ಮದುವೆ ಬಳಿಕವೂ ಅವರ ಡಿಮ್ಯಾಂಡ್​ ಕಡಿಮೆ ಆಗಿಲ್ಲ. ಇತ್ತೀಚೆಗೆ ತೆರೆಕಂಡ ‘ಗಾಡ್​ ಫಾದರ್​’ ಸಿನಿಮಾದಲ್ಲಿ ಅವರ ಪಾತ್ರ ಹೈಲೈಟ್​ ಆಗಿದೆ. ಇನ್ನೂ ಹಲವು ಆಫರ್​ಗಳು ಅವರ ಕೈಯಲ್ಲಿವೆ. ಅದರಲ್ಲಿ ‘ಜವಾನ್​’ ಚಿತ್ರ ಪ್ರಮುಖವಾಗಿದೆ. ಶಾರುಖ್​ ಖಾನ್​ ಅವರ ‘ರೆಡ್​ ಚಿಲ್ಲೀಸ್​ ಎಂಟರ್​ಟೇನ್ಮೆಂಟ್​’ ಮೂಲಕ ಈ ಸಿನಿಮಾ ತಯಾರಾಗುತ್ತಿದೆ. ಶಾರುಖ್​ ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿರುವುದರಿಂದ ಹೆಚ್ಚು ಕಾಳಜಿ ವಹಿಸಿ ಈ ಚಿತ್ರವನ್ನು ಕಟ್ಟಿಕೊಡಲಾಗುತ್ತಿದೆ.

ಈಗಾಗಲೇ ಒಂದಷ್ಟು ದೃಶ್ಯಗಳನ್ನು ಚೆನ್ನೈನಲ್ಲಿ ಚಿತ್ರೀಕರಿಸಲಾಗಿದೆ. ಅದರಲ್ಲಿ ಶಾರುಖ್​ ಖಾನ್​ ಭಾಗಿ ಆಗಿದ್ದಾರೆ. ಈ ಸಿನಿಮಾದ ಕೊನೆಯ ಹಂತದ ಶೂಟಿಂಗ್​ ರಾಜಸ್ಥಾನದಲ್ಲಿ ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾರುಖ್​ ಜೊತೆ ನಯನತಾರಾ ಕೂಡ ರಾಜಸ್ಥಾನಕ್ಕೆ ತೆರಳಿ ಚಿತ್ರೀಕರಣದಲ್ಲಿ ಭಾಗಿ ಆಗಬೇಕಿದೆ. ಇತ್ತೀಚೆಷ್ಟೇ ಅವರು ಮಕ್ಕಳನ್ನು ಪಡೆದಿರುವ ಕಾರಣ ಡೇಟ್ಸ್​ ನೀಡಲು ಕಷ್ಟ ಆಗುತ್ತಿದೆ ಎಂಬ ಮಾಹಿತಿ ಕೇಳಿಬಂದಿದೆ. ನಯನತಾರಾ ಅವರ ಡೇಟ್ಸ್​ಗೆ ಅನುಗುಣವಾಗಿ ಚಿತ್ರತಂಡದವರು ಶೂಟಿಂಗ್​ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಪ್ರಕಟ ಮಾಡಿವೆ.

ಇದನ್ನೂ ಓದಿ
Image
Shah Rukh Khan: 20 ಲಕ್ಕಿ ಅಭಿಮಾನಿಗಳಿಗೆ ಸ್ಟಾರ್​ ಹೋಟೆಲ್​ನಲ್ಲಿ ರೂಂ ಬುಕ್​ ಮಾಡಿ ಭೇಟಿಯಾದ ಶಾರುಖ್​ ಖಾನ್​
Image
SRK: ತಮ್ಮದೇ ಶರ್ಟ್​ ಜತೆ ಮಾತನಾಡಿಕೊಂಡ ಶಾರುಖ್​; ಗಂಡನ ಪರಿಸ್ಥಿತಿ ಕಂಡು ಗೌರಿ ಖಾನ್​ ಗಲಿಬಿಲಿ
Image
Shah Rukh Khan: ಶಾರುಖ್​ ಖಾನ್​ ಮನೆಯಲ್ಲಿ ಗಣೇಶ ಚತುರ್ಥಿ; ಮೋದಕ ತಿಂದು ನಟ ಹೇಳಿದ್ದೇನು?
Image
Nayanthara: ಹನಿಮೂನ್​ ಮುಗಿಸಿ ಬಂದ ನಯನತಾರಾ; ಶಾರುಖ್​ ಖಾನ್​ ಜೊತೆ ತಕ್ಷಣ ಶೂಟಿಂಗ್​ ಶುರು

ನಯನತಾರಾ-ವಿಘ್ನೇಶ್​ಗೆ ಕಾನೂನಿನ ಸಂಕಷ್ಟ:

ಈ ವರ್ಷ ಜೂನ್​ ತಿಂಗಳಲ್ಲಿ ಮದುವೆ ಆದ ನಯನತಾರಾ ಹಾಗೂ ವಿಘ್ನೇಶ್​ ಶಿವನ್​ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳನ್ನು ಪಡೆದಿದ್ದಾರೆ. ಆದರೆ ಸೂಕ್ತ ನಿಯಮಗಳನ್ನು ಅವರು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಹಾಗಾಗಿ ಅವರ ವಿರುದ್ಧ ತನಿಖೆ ನಡೆಸಲಾಗುವುದು ಎಂಬ ಸುದ್ದಿ ಹರಡಿದೆ. ಈ ಬಗ್ಗೆ ಸೆಲೆಬ್ರಿಟಿ ದಂಪತಿ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ಮಕ್ಕಳ ಮುಖ ತೋರಿಸಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:24 pm, Thu, 13 October 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!