ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಸ್ಥಾನ ಪಡೆದ ಶಾರುಖ್ ಖಾನ್ ಹಾಗೂ ರಾಜಮೌಳಿ

ಅಮೆರಿಕದ ಪ್ರತಿಷ್ಠಿತ ಟೈಮ್​ ಮ್ಯಾಗಜಿನ್ 2023ನೇ ಸಾಲಿನ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ರಾಜಮೌಳಿ ಹಾಗೂ ಶಾರುಖ್ ಖಾನ್ ಹೆಸರು ಇದೆ.

ವಿಶ್ವದ 100 ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಸ್ಥಾನ ಪಡೆದ ಶಾರುಖ್ ಖಾನ್ ಹಾಗೂ ರಾಜಮೌಳಿ
ಶಾರುಖ್​-ರಾಜಮೌಳಿ
Follow us
|

Updated on: Apr 14, 2023 | 8:13 AM

ನಿರ್ದೇಶಕ ಎಸ್​.ಎಸ್​. ರಾಜಮೌಳಿ ಹಾಗೂ ಶಾರುಖ್ ಖಾನ್ (Shah Rukh Khan) ಇಬ್ಬರೂ ಯಶಸ್ಸು ಕಂಡಿದ್ದಾರೆ. ಕಳೆದ ವರ್ಷ ರಿಲೀಸ್ ಆದ ‘ಆರ್​ಆರ್​ಆರ್’ ಚಿತ್ರದಿಂದ (RRR Movie) ರಾಜಮೌಳಿ ಗೆದ್ದು ಬೀಗಿದ್ದಾರೆ. ಈ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಇನ್ನು, ಶಾರುಖ್ ಖಾನ್ ನಟನೆಯ ‘ಪಠಾಣ್​’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಜನಮನ್ನಣೆ ಪಡೆದಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅಮೆರಿಕದ ಪ್ರತಿಷ್ಠಿತ ಟೈಮ್​ ಮ್ಯಾಗಜಿನ್ 2023ನೇ ಸಾಲಿನ ಪ್ರಭಾವಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ರಾಜಮೌಳಿ ಹಾಗೂ ಶಾರುಖ್ ಖಾನ್ ಹೆಸರು ಇದೆ. ಈ ಮೂಲಕ ಭಾರತ ಹೆಮ್ಮೆ ಪಡುವಂತೆ ಆಗಿದೆ.

‘ಆರ್​ಆರ್​ಆರ್​’ ಸಿನಿಮಾ ಕಳೆದ ವರ್ಷ ರಿಲೀಸ್ ಆಯಿತು. ಈ ಸಿನಿಮಾ ದಾಖಲೆ ಮೇಲೆ ದಾಖಲೆ ಬರೆಯಿತು. ಈ ಚಿತ್ರದಿಂದ ರಾಜಮೌಳಿ ಗೆದ್ದು ಬೀಗಿದರು. ಸಿನಿಮಾ ರಿಲೀಸ್​ ಆಗಿ ಸುಮಾರು ಒಂದು ವರ್ಷದ ಬಳಿಕ ಚಿತ್ರದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಸಿಕ್ಕಿತು. ಈ ಮೂಲಕ ರಾಜಮೌಳಿ ಹೆಸರು ವಿಶ್ವಾದ್ಯಂತ ಹಬ್ಬಿತು. ಹಾಲಿವುಡ್​ನ ಖ್ಯಾತ ನಿರ್ದೇಶಕ ಜೇಮ್ಸ್ ಕ್ಯಾಮೆರಾನ್ ಸೇರಿ ಅನೇಕರು ರಾಜಮೌಳಿ ಕೆಲಸವನ್ನು ಹೊಗಳಿದರು. ಈ ಕಾರಣಕ್ಕೆ ರಾಜಮೌಳಿ ಹೆಸರು ಹೆಚ್ಚು ಪ್ರಚಲಿತಗೊಂಡಿತು.

ಇನ್ನು, ಶಾರುಖ್ ಖಾನ್ ಅವರ ‘ಪಠಾಣ್​’ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಸದ್ದು ಮಾಡಿತು. ಸತತ ಸೋಲು ಕಂಡಿದ್ದ ಶಾರುಖ್ ಅವರು ಈ ಚಿತ್ರದಿಂದ ಗೆದ್ದರು. ಶಾರುಖ್ ಖ್ಯಾತಿ ಹೆಚ್ಚಿತು. ಈಗ ಅವರ ಮುಂದಿನ ಚಿತ್ರ ‘ಜವಾನ್​’, ‘ಡಂಕಿ’ ಬಗ್ಗೆಯೂ ನಿರೀಕ್ಷೆ ಇದೆ. ಈ ಎಲ್ಲಾ ಕಾರಣದಿಂದ ಪ್ರಭಾವಿಗಳ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: ಅಮೇಜಾನ್ ಕಾಡುಗಳಲ್ಲಿ ಶೂಟ್ ಆಗಲಿದೆ ರಾಜಮೌಳಿ ಮುಂದಿನ ಸಿನಿಮಾ; ಈ ಕಥೆಗೆ ಸ್ಫೂರ್ತಿ ಏನು?

ಉಳಿದಂತೆ ಕಿಂಗ್ ಚಾರ್ಲ್ಸ್, ಡೋಜಾ ಕ್ಯಾಟ್ ಮೊದಲಾದವರು ಸ್ಥಾನ ಪಡೆದುಕೊಂಡಿದ್ದಾರೆ. ಅಂದಹಾಗೆ, ಈ ಪಟ್ಟಿಯನ್ನು ವಿವಿಧ ವಿಚಾರಗಳನ್ನು ಆಧರಿಸಿ ಸಿದ್ಧಪಡಿಸಲಾಗುತ್ತದೆ. ಸೋಶಿಯಲ್ ಮೀಡಿಯಾ ಖ್ಯಾತಿ, ಚಿತ್ರರಂಗಕ್ಕೆ ಅವರ ಕೊಡುಗೆ, ಅವರ ಟ್ಯಾಲೆಂಟ್, ಕಠಿಣ ಪರಿಶ್ರಮ ಮೊದಲಾದ ವಿಚಾರಗಳನ್ನು ಪರಿಗಣಿಸಲಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ