AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಕೆಆರ್ ಗೆಲುವಿನ ಬಳಿಕ ಸುರೇಶ್ ರೈನಾಗೆ ಕೈ ಮುಗಿದು ಕ್ಷಮೆ ಕೇಳಿದ ಶಾರುಖ್ ಖಾನ್

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಕೆಆರ್ ಹಾಗೂ ಎಸ್​ಆರ್​ಎಚ್​ ನಡುವೆ ಪಂದ್ಯ ನಡೆದಿದೆ. ಪಂದ್ಯ ಮುಗಿದ ಬಳಿಕ ಶಾರುಖ್ ಖಾನ್ ಅವರು ಮೈದಾನಕ್ಕೆ ಇಳಿದರು. ಅಷ್ಟೇ ಅಲ್ಲ ಅಭಿಮಾನಿಗಳತ್ತ ಕೈ ಬೀಸುತ್ತಾ ಬಂದರು. ಈ ವೇಳೆ ಅವರು ರೈನಾಗೆ ಕ್ಷಮೆ ಕೇಳಿದ್ದಾರೆ.

ಕೆಕೆಆರ್ ಗೆಲುವಿನ ಬಳಿಕ ಸುರೇಶ್ ರೈನಾಗೆ ಕೈ ಮುಗಿದು ಕ್ಷಮೆ ಕೇಳಿದ ಶಾರುಖ್ ಖಾನ್
ಶಾರುಖ್ - ರೈನಾ
ರಾಜೇಶ್ ದುಗ್ಗುಮನೆ
|

Updated on:May 22, 2024 | 9:07 AM

Share

ಬಾಲಿವುಡ್ ನಟ ಶಾರುಖ್ ಖಾನ್ (Shah Rukh Khan) ಒಡೆತನದ ‘ಕೋಲ್ಕತ್ತಾ ನೈಟ್ ರೈಡರ್ಸ್’ ತಂಡ ಸುಲಭದಲ್ಲಿ ಈ ವರ್ಷದ ಐಪಿಎಲ್ ಫಿನಾಲೆಗೆ ಏರಿದೆ. ಹೈದರಾಬಾದ್ ನೀಡಿದ 159 ರನ್​ಗಳ ಗುರಿಯನ್ನು ಕೇವಲ 13.4 ಓವರ್​ಗಳಲ್ಲಿ ತಲುಪಿ ಕೆಕೆಆರ್​ ಗೆಲುವಿನ ನಗೆ ಬೀರಿದೆ. ಇದನ್ನು ಶಾರುಖ್ ಖಾನ್ ಅವರು ಸಂಭ್ರಮಿಸಿದ್ದಾರೆ. ಈ ಮಧ್ಯೆ ತಮ್ಮಿಂದಾದ ಅಚಾತುರ್ಯಕ್ಕೆ ಅವರು ಮಾಜಿ ಕ್ರಿಕೆಟಿಗ ಸುರೇಶ್ ರೈನಾ, ಕಮೆಂಟೇಟರ್ ಆಕಾಶ್ ಚೋಪ್ರಾ ಬಳಿ ಅವರು ಕ್ಷಮೆ ಕೇಳಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಕೆಆರ್ ಹಾಗೂ ಎಸ್​ಆರ್​ಎಚ್​ ನಡುವೆ ಪಂದ್ಯ ನಡೆದಿದೆ. ಪಂದ್ಯ ಮುಗಿದ ಬಳಿಕ ಶಾರುಖ್ ಖಾನ್ ಅವರು ಮೈದಾನಕ್ಕೆ ಇಳಿದರು. ಅಷ್ಟೇ ಅಲ್ಲ ಅಭಿಮಾನಿಗಳತ್ತ ಕೈ ಬೀಸುತ್ತಾ ಬಂದರು. ಸುರೇಶ್ ರೈನಾ, ಆಕಾಶ್ ಚೋಪ್ರಾ ಲೈವ್​ನಲ್ಲಿ ಮಾತನಾಡುತ್ತಿರುವುದನ್ನು ಶಾರುಖ್ ಗಮನಿಸಲೇ ಇಲ್ಲ. ಅವರತ್ತ ನುಗ್ಗಿಯೇ ಬಿಟ್ಟರು.

ಇದನ್ನೂ ಓದಿ: ಕ್ಯಾಮರಾ ಮುಂದೆ ಮಕ್ಕಳು ಪರೀಕ್ಷೆ ಬರೆಯುವ ಹಾಗೆ ಮಾಡಿದ್ರು, ಇದೊಂದು ಕಪ್ಪುಚುಕ್ಕೆ: ಸುರೇಶ್ ಕುಮಾರ್

ಸುರೇಶ್ ಹಾಗೂ ಆಕಾಶ್ ಲೈವ್​ನಲ್ಲಿದ್ದಾರೆ ಅನ್ನೋ ವಿಚಾರ ಆ ಬಳಿಕ ಶಾರುಖ್​ಗೆ ಗೊತ್ತಾಗಿದೆ. ಹೀಗಾಗಿ, ಅವರು ಕ್ಷಮೆ ಕೇಳಿದ್ದಾರೆ. ಎಲ್ಲರಿಗೂ ಹಗ್ ಕೊಟ್ಟು ಆ ಬಳಿಕ ಕೈ ಮುಗಿದ ಅಲ್ಲಿಂದ ತೆರಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಾರುಖ್ ಖಾನ್ ಅವರು ನಡೆದುಕೊಂಡ ರೀತಿ ಎಲ್ಲರಿಗೂ ಇಷ್ಟವಾಗಿದೆ. ಶಾರುಖ್ ಖಾನ್ ಸ್ಟಾರ್ ನಟ. ಕೆಕೆಆರ್ ಸಹ ಮಾಲೀಕ ಕೂಡ ಹೌದು. ಹೀಗಿರುವಾಗ ಅವರು ಕ್ಷಮೆ ಕೇಳುವ ಅಗತ್ಯವೇ ಇರಲಿಲ್ಲ. ಆದಾಗ್ಯೂ ತಮ್ಮ ತಪ್ಪಿಗೆ ಅವರು ಕ್ಷಮೆ ಕೇಳಿ ದೊಡ್ಡವರಾಗಿದ್ದಾರೆ.

ಹೈದರಾಬಾದ್ ವಿರುದ್ಧ ಗೆಲುವು ಕಾಣುವ ಮೂಲಕ ಕೆಕೆಆರ್ ನೇರವಾಗಿ ಫಿನಾಲೆಗೆ ಟಿಕೆಟ್ ಪಡೆದಿದೆ. ಭಾನುವಾರ (ಮೇ 26) ಚೆನ್ನೈನಲ್ಲಿ ಫಿನಾಲೆ ನಡೆಯಲಿದೆ. ಫಿನಾಲೆಗೆ ಕಾಲಿಡೋ ಮತ್ತೊಂದು ತಂಡ ಯಾವುದು ಎನ್ನುವ ಕುತೂಹಲ ಮೂಡಿದೆ. ಇಂದು ನಡೆಯೋ ಎಲಿಮಿನೇಟರ್ ಪಂದ್ಯದಲ್ಲಿ ಆರ್​​ಸಿಬಿ ಹಾಗೂ ರಾಜಸ್ಥಾನ್ ಮುಖಾಮುಖಿ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:17 am, Wed, 22 May 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More